<p><strong>ಸಿಂದಗಿ:</strong> ಪಟ್ಟಣದ ಪುರಸಭೆ ಕಾರ್ಯಾಲಯದ ಬಳಿ ನೀರು ಹರಿಯಲು ಇರುವ ಸೇತುವೆ ಒಡೆದು ಹಾಕಿದ್ದರಿಂದ ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಡಾ.ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪು ಸುಲ್ತಾನ ವೃತ್ತದ ವರೆಗೆ 19 ದಿನಗಳಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ.</p><p>ಮೇ 20 ರಂದು ಸುರಿದ ಧಾರಾಕಾರ ಮಳೆಯಿಂದಾಗಿ ಈ ಸೇತುವೆಯಲ್ಲಿ ನೀರು ತುಂಬಿಕೊಂಡು ಹತ್ತಿರದ ಮನೆಗಳಲ್ಲಿ, ಪುರಸಭೆ ಕಾರ್ಯಾಲಯದ ಮುಖ್ಯದ್ವಾರದಲ್ಲಿ ನೀರು ನುಗ್ಗಿದ್ದರಿಂದ ಸೇತುವೆಯನ್ನೇ ಏಕಾಏಕಿಯಾಗಿ ಒಡೆದು ಹಾಕಲಾಗಿತ್ತು. ಹೀಗಾಗಿ ಅಂದಿನಿಂದ ಇಂದಿನವರೆಗೆ ಈ ಮುಖ್ಯರಸ್ತೆ ಸಂಚಾರ ಸ್ಥಗಿತಗೊಂಡಿದೆ.</p><p>ಟಿಪ್ಪುಸುಲ್ತಾನ ವೃತ್ತದಿಂದ ಪುರಸಭೆ ಕಾರ್ಯಾಲಯಕ್ಕೆ ರಸ್ತೆ ಸಂಚಾರ ನಿಲ್ಲುತ್ತದೆ. ಹೀಗಾಗಿ ಸಾರ್ವಜನಿಕರು ತಿರುಗಾಟ, ವಾಹನಗಳ ಓಡಾಟಕ್ಕೆ ತುಂಬಾ ತೊಂದರೆಯಾಗಿದೆ. ಮುಂದೆ ಹೋಗಲು ಮತ್ತೆ ಸುತ್ತುವರಿದು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಜೂನ್ 2 ರಂದು ಪುರಸಭೆ ಸಭಾಭವನದಲ್ಲಿ ಜರುಗಿದ ತುರ್ತು ಸಾಮಾನ್ಯಸಭೆಯಲ್ಲಿ ಪುರಸಭೆ ಸದಸ್ಯ ಹಣಮಂತ ಸುಣಗಾರ ‘ಪುರಸಭೆ ಬಳಿ ಇರುವ ಸೇತುವೆ ಒಡೆದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಕೂಡಲೇ ಸಂಚಾರ ಸುಗಮಗೊಳ್ಳುವಂತೆ ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿದ್ದರು.</p><p>‘ತುರ್ತಾಗಿ ಸೇತುವೆ ನಿರ್ಮಾಣಕ್ಕಾಗಿ ₹30 ಲಕ್ಷ ಅಗತ್ಯತೆ ಇದೆ. ಆದರೆ, ಪುರಸಭೆ ಕಾರ್ಯಾಲಯದಲ್ಲಿ ಅನುದಾನದ ಕೊರತೆ ಇದೆ. ಹೀಗಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪಿಡಬ್ಲ್ಯುಡಿ ಯವರು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ’ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಪ್ರತಿಕ್ರಿಯಿಸಿದ್ದರು.</p><p>‘ಸೇತುವೆಯು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬಾರದ ಕಾರಣ ಈ ಕಾಮಗಾರಿಗೆ ಸಂಬಂಧಿಸಿದಂತೆ ಮತಕ್ಷೇತ್ರದ ಶಾಸಕರ ಸೂಚನೆಯ ಮೇರೆಗೆ ಕಾಮಗಾರಿ ಕುರಿತು ಅಂದಾಜು ಪತ್ರಿಕೆ ಸಿದ್ಧಪಡಿಸಿ ನೀಡಲಾಗಿದೆ’ ಎಂದು ಇಲಾಖೆ ಎಇಇ ಅರುಣ 'ಪ್ರಜಾವಾಣಿ' ಗೆ ತಿಳಿಸಿದ್ದಾರೆ.</p><p>ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಡಾ.ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪುಸುಲ್ತಾನ ವೃತ್ತದವರೆಗೆ ರಸ್ತೆ, ಚರಂಡಿ ಮತ್ತು ಪುರಸಭೆ ಕಾರ್ಯಾಲಯದ ಬಳಿ ಇರುವ ಸೇತುವೆ ನಿರ್ಮಾಣಕ್ಕಾಗಿ ₹ 2.50 ಕೋಟಿ ಅಂದಾಜು ಪತ್ರಿಕೆ ಸಿದ್ಧಪಡಿಸಲಾಗಿದೆ ಎಂದು ಸಿಂದಗಿ ಉಪವಿಭಾಗದ ಪಿಡಬ್ಲ್ಯುಡಿ ಎಇಇ ಅರುಣಕುಮಾರ ವಡಗೇರಿ ತಿಳಿಸಿದರು.</p><p>ಈ ಕಾಮಗಾರಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಮಂಜೂರಾತಿ ದೊರಕಿದ ಮೇಲೆ ಟೆಂಡರ್ ಆಗಬೇಕಾದರೆ ಸಮಯವೇ ಬೇಕಾಗುತ್ತದೆ. ಅಲ್ಲಿಯ ವರೆಗೆ ಸಾರ್ವಜನಿಕರು, ವ್ಯಾಪಾರಸ್ಥರು, ಆಸ್ಪತ್ರೆಯವರಿಗೆ ತೊಂದರೆ ತಪ್ಪಿದ್ದಲ್ಲ. ಹೀಗಾಗಿ ತುರ್ತಾಗಿ ತಾತ್ಪೂರ್ತಿಕವಾಗಿಯಾದರೂ ಸಂಚಾರ ಸುಗಮಗೊಳ್ಳಲು ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.</p><p>ಪುರಸಭೆ ಅಧ್ಯಕ್ಷ, ಮುಖ್ಯಾಧಿಕಾರಿ, ವಾರ್ಡ್ ಸದಸ್ಯ ಅವರ ಪ್ರತಿಕ್ರಿಯೆಗಾಗಿ ಫೋನ್ ಮಾಡಲಾಯಿತು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ. </p>.<div><blockquote>ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಡಾ.ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪುಸುಲ್ತಾನ ವೃತ್ತದವರೆಗೆ ರಸ್ತೆ, ಚರಂಡಿ ಮತ್ತು ಪುರಸಭೆ ಕಾರ್ಯಾಲಯದ ಬಳಿ ಇರುವ ಸೇತುವೆ ನಿರ್ಮಾಣಕ್ಕಾಗಿ ₹ 2.50 ಕೋಟಿ ಅಂದಾಜು ಪತ್ರಿಕೆ ಸಿದ್ಧಪಡಿಸಲಾಗಿದೆ. </blockquote><span class="attribution">-ಅರುಣಕುಮಾರ ವಡಗೇರಿ, ಎಇಇ, ಪಿಡಬ್ಲ್ಯುಡಿ, ಸಿಂದಗಿ ಉಪವಿಭಾಗ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಪಟ್ಟಣದ ಪುರಸಭೆ ಕಾರ್ಯಾಲಯದ ಬಳಿ ನೀರು ಹರಿಯಲು ಇರುವ ಸೇತುವೆ ಒಡೆದು ಹಾಕಿದ್ದರಿಂದ ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಡಾ.ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪು ಸುಲ್ತಾನ ವೃತ್ತದ ವರೆಗೆ 19 ದಿನಗಳಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ.</p><p>ಮೇ 20 ರಂದು ಸುರಿದ ಧಾರಾಕಾರ ಮಳೆಯಿಂದಾಗಿ ಈ ಸೇತುವೆಯಲ್ಲಿ ನೀರು ತುಂಬಿಕೊಂಡು ಹತ್ತಿರದ ಮನೆಗಳಲ್ಲಿ, ಪುರಸಭೆ ಕಾರ್ಯಾಲಯದ ಮುಖ್ಯದ್ವಾರದಲ್ಲಿ ನೀರು ನುಗ್ಗಿದ್ದರಿಂದ ಸೇತುವೆಯನ್ನೇ ಏಕಾಏಕಿಯಾಗಿ ಒಡೆದು ಹಾಕಲಾಗಿತ್ತು. ಹೀಗಾಗಿ ಅಂದಿನಿಂದ ಇಂದಿನವರೆಗೆ ಈ ಮುಖ್ಯರಸ್ತೆ ಸಂಚಾರ ಸ್ಥಗಿತಗೊಂಡಿದೆ.</p><p>ಟಿಪ್ಪುಸುಲ್ತಾನ ವೃತ್ತದಿಂದ ಪುರಸಭೆ ಕಾರ್ಯಾಲಯಕ್ಕೆ ರಸ್ತೆ ಸಂಚಾರ ನಿಲ್ಲುತ್ತದೆ. ಹೀಗಾಗಿ ಸಾರ್ವಜನಿಕರು ತಿರುಗಾಟ, ವಾಹನಗಳ ಓಡಾಟಕ್ಕೆ ತುಂಬಾ ತೊಂದರೆಯಾಗಿದೆ. ಮುಂದೆ ಹೋಗಲು ಮತ್ತೆ ಸುತ್ತುವರಿದು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಜೂನ್ 2 ರಂದು ಪುರಸಭೆ ಸಭಾಭವನದಲ್ಲಿ ಜರುಗಿದ ತುರ್ತು ಸಾಮಾನ್ಯಸಭೆಯಲ್ಲಿ ಪುರಸಭೆ ಸದಸ್ಯ ಹಣಮಂತ ಸುಣಗಾರ ‘ಪುರಸಭೆ ಬಳಿ ಇರುವ ಸೇತುವೆ ಒಡೆದು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಕೂಡಲೇ ಸಂಚಾರ ಸುಗಮಗೊಳ್ಳುವಂತೆ ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿದ್ದರು.</p><p>‘ತುರ್ತಾಗಿ ಸೇತುವೆ ನಿರ್ಮಾಣಕ್ಕಾಗಿ ₹30 ಲಕ್ಷ ಅಗತ್ಯತೆ ಇದೆ. ಆದರೆ, ಪುರಸಭೆ ಕಾರ್ಯಾಲಯದಲ್ಲಿ ಅನುದಾನದ ಕೊರತೆ ಇದೆ. ಹೀಗಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪಿಡಬ್ಲ್ಯುಡಿ ಯವರು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ’ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಪ್ರತಿಕ್ರಿಯಿಸಿದ್ದರು.</p><p>‘ಸೇತುವೆಯು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬಾರದ ಕಾರಣ ಈ ಕಾಮಗಾರಿಗೆ ಸಂಬಂಧಿಸಿದಂತೆ ಮತಕ್ಷೇತ್ರದ ಶಾಸಕರ ಸೂಚನೆಯ ಮೇರೆಗೆ ಕಾಮಗಾರಿ ಕುರಿತು ಅಂದಾಜು ಪತ್ರಿಕೆ ಸಿದ್ಧಪಡಿಸಿ ನೀಡಲಾಗಿದೆ’ ಎಂದು ಇಲಾಖೆ ಎಇಇ ಅರುಣ 'ಪ್ರಜಾವಾಣಿ' ಗೆ ತಿಳಿಸಿದ್ದಾರೆ.</p><p>ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಡಾ.ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪುಸುಲ್ತಾನ ವೃತ್ತದವರೆಗೆ ರಸ್ತೆ, ಚರಂಡಿ ಮತ್ತು ಪುರಸಭೆ ಕಾರ್ಯಾಲಯದ ಬಳಿ ಇರುವ ಸೇತುವೆ ನಿರ್ಮಾಣಕ್ಕಾಗಿ ₹ 2.50 ಕೋಟಿ ಅಂದಾಜು ಪತ್ರಿಕೆ ಸಿದ್ಧಪಡಿಸಲಾಗಿದೆ ಎಂದು ಸಿಂದಗಿ ಉಪವಿಭಾಗದ ಪಿಡಬ್ಲ್ಯುಡಿ ಎಇಇ ಅರುಣಕುಮಾರ ವಡಗೇರಿ ತಿಳಿಸಿದರು.</p><p>ಈ ಕಾಮಗಾರಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿ ಮಂಜೂರಾತಿ ದೊರಕಿದ ಮೇಲೆ ಟೆಂಡರ್ ಆಗಬೇಕಾದರೆ ಸಮಯವೇ ಬೇಕಾಗುತ್ತದೆ. ಅಲ್ಲಿಯ ವರೆಗೆ ಸಾರ್ವಜನಿಕರು, ವ್ಯಾಪಾರಸ್ಥರು, ಆಸ್ಪತ್ರೆಯವರಿಗೆ ತೊಂದರೆ ತಪ್ಪಿದ್ದಲ್ಲ. ಹೀಗಾಗಿ ತುರ್ತಾಗಿ ತಾತ್ಪೂರ್ತಿಕವಾಗಿಯಾದರೂ ಸಂಚಾರ ಸುಗಮಗೊಳ್ಳಲು ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.</p><p>ಪುರಸಭೆ ಅಧ್ಯಕ್ಷ, ಮುಖ್ಯಾಧಿಕಾರಿ, ವಾರ್ಡ್ ಸದಸ್ಯ ಅವರ ಪ್ರತಿಕ್ರಿಯೆಗಾಗಿ ಫೋನ್ ಮಾಡಲಾಯಿತು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ. </p>.<div><blockquote>ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಡಾ.ಸಿದ್ಧಲಿಂಗ ಶ್ರೀಗಳ ಮುಖ್ಯರಸ್ತೆ ಮಾರ್ಗವಾಗಿ ಟಿಪ್ಪುಸುಲ್ತಾನ ವೃತ್ತದವರೆಗೆ ರಸ್ತೆ, ಚರಂಡಿ ಮತ್ತು ಪುರಸಭೆ ಕಾರ್ಯಾಲಯದ ಬಳಿ ಇರುವ ಸೇತುವೆ ನಿರ್ಮಾಣಕ್ಕಾಗಿ ₹ 2.50 ಕೋಟಿ ಅಂದಾಜು ಪತ್ರಿಕೆ ಸಿದ್ಧಪಡಿಸಲಾಗಿದೆ. </blockquote><span class="attribution">-ಅರುಣಕುಮಾರ ವಡಗೇರಿ, ಎಇಇ, ಪಿಡಬ್ಲ್ಯುಡಿ, ಸಿಂದಗಿ ಉಪವಿಭಾಗ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>