ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಿಂದಗಿ ಜಿಲ್ಲೆಯಾಗಲಿ: ಆಗ್ರಹ’

Published 2 ಜನವರಿ 2024, 14:09 IST
Last Updated 2 ಜನವರಿ 2024, 14:09 IST
ಅಕ್ಷರ ಗಾತ್ರ

ಸಿಂದಗಿ: ಸಿಂದಗಿ ತಾಲ್ಲೂಕು ಜಿಲ್ಲೆಯಲ್ಲಿಯೇ ಹೆಚ್ಚಿನ ಜನಸಂಖ್ಯೆ ಹೊಂದಿದೆ. ಭೌಗೋಳಿಕವಾಗಿ ಕೇಂದ್ರ ಸ್ಥಾನದಲ್ಲಿದ್ದು. ಜಿಲ್ಲೆ ರಚನೆಗೆ ಸೂಕ್ತವಾಗಿದೆ ಎಂದು ಕರ್ನಾಟಕ ಆದಿಜಾಂಬವ ಜನಸಂಘ ಸಂಘಟನೆಯ ಉತ್ತರಕರ್ನಾಟಕ ವಲಯದ ಅಧ್ಯಕ್ಷ ಸಾಯಬಣ್ಣ ದೇವರಮನಿ ಆಗ್ರಹಿಸಿದರು.

ಕಲ್ಬುರ್ಗಿ-ಯಾದಗಿರಿ-ರಾಯಚೂರು-ವಿಜಯಪುರ ಜಿಲ್ಲೆಗಳೊಂದಿಗೆ ಸಂಪರ್ಕ ಇದೆ. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಹೊಂದಿದೆ. ಮುಂಬರುವ ದಿನಗಳಲ್ಲಿ ಶೇಡಬಾಳ-ಶಹಾಬಾದ ರೇಲ್ವೆ ಮಾರ್ಗ ಸಿಂದಗಿಯಿಂದ ಹಾದು ಹೋಗುವ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳು ಸಿಂದಗಿಯಿಂದ 20-40 ಕಿ.ಮೀ ಅಂತರದಲ್ಲಿವೆ. ಹೀಗಾಗಿ ಜಿಲ್ಲೆಯಾಗಲು ಸೂಕ್ತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT