<p><strong>ಸಿಂದಗಿ</strong>: ‘ಸಮುದಾಯ ಭವನಗಳು ಸಮಾಜಮುಖಿ ಆಗಿರಬೇಕು. ಬಡಜನತೆಗೆ ಸಮುದಾಯ ಭವನಗಳು ಅತ್ಯಂತ ಉಪಯುಕ್ತವಾಗಿವೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹25 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಬಡ ಕುಟುಂಬಗಳು ಕಾರ್ಯಕ್ರಮಗಳನ್ನು ಅತ್ಯಂತ ಕಡಿಮೆ ಹಣದಲ್ಲಿ ನಿರ್ವಹಣೆ ಮಾಡಿಕೊಳ್ಳಲು ಸಮುದಾಯ ಭವನಗಳು ಸಹಾಯಕವಾಗುತ್ತವೆ. ಎಪಿಎಂಸಿ ಆವರಣದಲ್ಲಿನ ಗಣೇಶ ದೇವಸ್ಥಾನದ ಬಳಿ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಎಪಿಎಂಸಿಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗುವುದು. ರೈತರ ಬೇಡಿಕೆಗಳನ್ನು ಹಂತ ಹಂತ ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ಬಿಸನಾಳ, ಉಪಾಧ್ಯಕ್ಷ ಬಸವರಾಜ ಮಾರಲಬಾವಿ, ವರ್ತಕರಾದ ಮಹಾದೇವಪ್ಪ ಮುಂಡೇವಾಡಗಿ, ಅಶೋಕ ವಾರದ, ಉಮೇಶ ಜೋಗೂರ, ಬಸವರಾಜ ಶಹಾಪೂರ, ಶರಣಯ್ಯ ಮಠ, ಆರ್.ಐ.ಸಾವಳಗಿ, ಬಸಯ್ಯ ಹಿರೇಮಠ, ಮುತ್ತು ಮುಂಡೇವಾಡಗಿ, ನಾರಾಯಣ ಕುಲಕರ್ಣಿ, ಬಾಬು ಕಮತಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-26-1406243925</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ‘ಸಮುದಾಯ ಭವನಗಳು ಸಮಾಜಮುಖಿ ಆಗಿರಬೇಕು. ಬಡಜನತೆಗೆ ಸಮುದಾಯ ಭವನಗಳು ಅತ್ಯಂತ ಉಪಯುಕ್ತವಾಗಿವೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹25 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಬಡ ಕುಟುಂಬಗಳು ಕಾರ್ಯಕ್ರಮಗಳನ್ನು ಅತ್ಯಂತ ಕಡಿಮೆ ಹಣದಲ್ಲಿ ನಿರ್ವಹಣೆ ಮಾಡಿಕೊಳ್ಳಲು ಸಮುದಾಯ ಭವನಗಳು ಸಹಾಯಕವಾಗುತ್ತವೆ. ಎಪಿಎಂಸಿ ಆವರಣದಲ್ಲಿನ ಗಣೇಶ ದೇವಸ್ಥಾನದ ಬಳಿ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ. ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ. ಎಪಿಎಂಸಿಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗುವುದು. ರೈತರ ಬೇಡಿಕೆಗಳನ್ನು ಹಂತ ಹಂತ ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ಬಿಸನಾಳ, ಉಪಾಧ್ಯಕ್ಷ ಬಸವರಾಜ ಮಾರಲಬಾವಿ, ವರ್ತಕರಾದ ಮಹಾದೇವಪ್ಪ ಮುಂಡೇವಾಡಗಿ, ಅಶೋಕ ವಾರದ, ಉಮೇಶ ಜೋಗೂರ, ಬಸವರಾಜ ಶಹಾಪೂರ, ಶರಣಯ್ಯ ಮಠ, ಆರ್.ಐ.ಸಾವಳಗಿ, ಬಸಯ್ಯ ಹಿರೇಮಠ, ಮುತ್ತು ಮುಂಡೇವಾಡಗಿ, ನಾರಾಯಣ ಕುಲಕರ್ಣಿ, ಬಾಬು ಕಮತಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-26-1406243925</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>