<p><strong>ಸಿಂದಗಿ: ‘</strong>ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆ, ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಬರುತ್ತಿರುವ 2 ಟಿಎಂಸಿ ಅಡಿ ನೀರಿನಿಂದ ವಿಜಯಪುರ-ಕಲಬುರಗಿ ಜಿಲ್ಲೆಗಳ ನೀರಿನ ಬವಣೆ ದೂರಾಗುವುದಿಲ್ಲ. 3 ಟಿಎಂಸಿ ಅಡಿ ನೀರು ಹರಿಸಬೇಕು’ ಎಂದು ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ, ಕಲಬುರಗಿ ಜಿಲ್ಲೆಯ ಜೇವರ್ಗಿ ಮತಕ್ಷೇತ್ರದ ಶಾಸಕ ಡಾ.ಅಜಯಸಿಂಗ್ ಜಂಟಿಯಾಗಿ ಆಗ್ರಹಿಸಿದ್ದಾರೆ.</p>.<p>ತಾಲ್ಲೂಕಿನ ರಾಂಪುರ ಪಿ.ಎ. ಗ್ರಾಮದಲ್ಲಿನ ಕೃಷ್ಣಾ ಭಾಗ್ಯ ಜಲನಿಗಮದ ಮುಖ್ಯ ಎಂಜಿನಿಯರ್ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜೇವರ್ಗಿ ತಾಲ್ಲೂಕಿನ ಅಲ್ಲಾಪುರ, ಅರಳಗುಂಡಗಿ, ಬಳೂಂಡಗಿ ಗ್ರಾಮಗಳ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. 3 ಟಿಎಂಸಿ ಅಡಿ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಮೂಲಕ ಒತ್ತಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಹೆಚ್ಚುವರಿ ನೀರು ಬಂದರೆ ಸಿಂದಗಿ, ಇಂಡಿ, ದೇವರಹಿಪ್ಪರಗಿ, ನಾಗಠಾಣ, ಚಡಚಣ, ಜೇವರ್ಗಿ, ಅಫಜಲಪುರ ತಾಲ್ಲೂಕುಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕುತ್ತದೆ’ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.</p>.<p>ಸಭೆಯಲ್ಲಿ ಕೆಬಿಜೆಎನ್ಎಲ್ ಎಸ್ಇ ಮನೋಜಕುಮಾರ, ಡಬ್ಲುಇ ಉಜ್ವಲ ಸೋನಾವನೆ ಹಾಗೂ ಬಳುಂಡಗಿ ರೈತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-844656854</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ: ‘</strong>ನಾರಾಯಣಪುರ ಜಲಾಶಯದಿಂದ ಇಂಡಿ ಶಾಖಾ ಕಾಲುವೆ, ಇಂಡಿ ಏತ ನೀರಾವರಿ ಕಾಲುವೆಗಳ ಮೂಲಕ ಬರುತ್ತಿರುವ 2 ಟಿಎಂಸಿ ಅಡಿ ನೀರಿನಿಂದ ವಿಜಯಪುರ-ಕಲಬುರಗಿ ಜಿಲ್ಲೆಗಳ ನೀರಿನ ಬವಣೆ ದೂರಾಗುವುದಿಲ್ಲ. 3 ಟಿಎಂಸಿ ಅಡಿ ನೀರು ಹರಿಸಬೇಕು’ ಎಂದು ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ, ಕಲಬುರಗಿ ಜಿಲ್ಲೆಯ ಜೇವರ್ಗಿ ಮತಕ್ಷೇತ್ರದ ಶಾಸಕ ಡಾ.ಅಜಯಸಿಂಗ್ ಜಂಟಿಯಾಗಿ ಆಗ್ರಹಿಸಿದ್ದಾರೆ.</p>.<p>ತಾಲ್ಲೂಕಿನ ರಾಂಪುರ ಪಿ.ಎ. ಗ್ರಾಮದಲ್ಲಿನ ಕೃಷ್ಣಾ ಭಾಗ್ಯ ಜಲನಿಗಮದ ಮುಖ್ಯ ಎಂಜಿನಿಯರ್ ಕಾರ್ಯಾಲಯದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜೇವರ್ಗಿ ತಾಲ್ಲೂಕಿನ ಅಲ್ಲಾಪುರ, ಅರಳಗುಂಡಗಿ, ಬಳೂಂಡಗಿ ಗ್ರಾಮಗಳ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. 3 ಟಿಎಂಸಿ ಅಡಿ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಮೂಲಕ ಒತ್ತಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಹೆಚ್ಚುವರಿ ನೀರು ಬಂದರೆ ಸಿಂದಗಿ, ಇಂಡಿ, ದೇವರಹಿಪ್ಪರಗಿ, ನಾಗಠಾಣ, ಚಡಚಣ, ಜೇವರ್ಗಿ, ಅಫಜಲಪುರ ತಾಲ್ಲೂಕುಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕುತ್ತದೆ’ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.</p>.<p>ಸಭೆಯಲ್ಲಿ ಕೆಬಿಜೆಎನ್ಎಲ್ ಎಸ್ಇ ಮನೋಜಕುಮಾರ, ಡಬ್ಲುಇ ಉಜ್ವಲ ಸೋನಾವನೆ ಹಾಗೂ ಬಳುಂಡಗಿ ರೈತರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-844656854</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>