ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಐಟಿ ಡಿ.ಕೆ.ಶಿವಕುಮಾರ್‌ ಏಜೆಂಟ್‌: ಯತ್ನಾಳ ಆರೋಪ

Published 7 ಮೇ 2024, 13:58 IST
Last Updated 7 ಮೇ 2024, 13:58 IST
ಅಕ್ಷರ ಗಾತ್ರ

ವಿಜಯಪುರ: ‘ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಏಜೆಂಟ್ ರೀತಿ ಕೆಲಸ ಮಾಡುತ್ತಿದೆ. ಎಸ್‌ಐಟಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ನಿಯಂತ್ರಣದಲ್ಲಿ ಇದ್ದಾರೆ’ ಎಂದು ಬಿಜೆ‍ಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

‘ಎಸ್‌ಐಟಿ ತನಿಖೆಯಿಂದ ಪ್ರಕರಣಕ್ಕೆ ನ್ಯಾಯ ಸಿಗುವುದಿಲ್ಲ. ಸತ್ಯಾಸತ್ಯತೆ ಸ್ಪಷ್ಟವಾಗಿ ತಿಳಿಯಬೇಕಾದರೆ, ತನಿಖೆ ಪ್ರಕ್ರಿಯೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದ

‘ಪ್ರಜ್ವಲ್‌ ಪ್ರಕರಣವು ಬಿಜೆಪಿ ಗೆಲುವಿನ ಮೇಲೆ ಪರಿಣಾಮ ಬೀರಲ್ಲ. ಈ ಪ್ರಕರಣವು ಜೆಡಿಎಸ್–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಡೆದಿದ್ದು, ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT