‘ಕಳೆದ ನಾಲ್ಕು ದಶಕಗಳಿಂದ ಸಕ್ರಿಯ ರಾಜಕಾರಣದಲ್ಲಿರುವ ನನ್ನ ಹೆಸರಿಗೆ ಮಸಿ ಬಳಿಯುವ ಇವರ ಪ್ರಯತ್ನ ಎಂದಿಗೂ ಸಫಲವಾಗುವುದಿಲ್ಲ. ಇಂಥ ಕುತಂತ್ರಗಳಿಗೆ ಜನರು ತಕ್ಕ ಉತ್ತರ ನೀಡಲಿದ್ದಾರೆ. ಬಸವನಾಡು ವಿಜಯಪುರ ಜಿಲ್ಲೆಯ ಜನ ಯಾವತ್ತೂ ದುರುಳರ ತಂತ್ರಗಳಿಗೆ ಮರುಳಾಗುವುದಿಲ್ಲ. ಇಂಥ ಸವಾಲುಗಳು ನನಗೆ ಹೊಸದಲ್ಲ. ಯಾರು ಏನೇ ಮಾಡಿದರೂ ನನ್ನ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸದಾ ನನ್ನೊಂದಿಗಿದ್ದಾರೆ. ಅಣ್ಣ ಬಸವಣ್ಣ, ಸಿದ್ಧೇಶ್ವರ ಸ್ವಾಮೀಜಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವದಡಿ ಹಿಂದೆ, ಈಗ ಮತ್ತು ಮುಂದೆಯೂ ಜನಸೇವೆ ಮುಂದುವರಿಸುತ್ತೇನೆ. ಯಾರೂ ಕಿಡಿಗೇಡಿಗಳ ಅಪಪ್ರಚಾರಕ್ಕೆ ಕಿವಿಗೊಡಬಾರದು’ ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.