<p>ಸಿಂದಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಕೆಲಸಕ್ಕೆ ಪೂರಕವಾದ ಸ್ಮಾರ್ಟ್ಫೋನ್, ಸಮವಸ್ತ್ರ ಹಾಗೂ ಔಷಧಿಗಳ ಕಿಟ್ನ್ನು ಶಾಸಕ ಅಶೋಕ ಮನಗೂಳಿ ವಿತರಿಸಿದರು. </p>.<p>ಇಲ್ಲಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಮಗ್ರಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಡಿಮೆ ಗೌರವಧನದಲ್ಲಿ ಅಪಾರ ಶ್ರಮವಹಿಸುತ್ತಾರೆ. ಇಲಾಖೆಯ ಫಲಾನುವಿಗಳಿಗೆ ಸೌಲಭ್ಯ ಕಲ್ಪಿಸುವಲ್ಲಿಯೂ ಶ್ರಮಿಸುತ್ತಿದ್ಧಾರೆ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆ, ಮಾತೃಪೂರ್ಣ, ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಇಲಾಖೆಯ ಯೋಜನೆಗಳ ಕುರಿತು ವಿವರಿಸಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇಲಾಖೆಯ ಯೋಜನೆಗಳನ್ನು ಮನೆ, ಮನೆಗೆ, ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.</p>.<p>ಇದೇ ಸಂದರ್ಭದಲ್ಲಿ ಸಿಂದಗಿ ಪಟ್ಟಣದ ಐದು ಕುಟುಂಬಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್ ಬುಕ್ ವಿತರಣೆ , ಹೆಣ್ಣು ಮಕ್ಕಳ ಲಿಂಗಾನುಪಾತ, ಸಾಕ್ಷರತೆ ಹೆಚ್ಚಿಸುವ ಅಂಗವಾಗಿ ಜಾರಿಗೆ ಬಂದಿರುವ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಅರಿವು ಮೂಡಿಸುವ ಸ್ಟಿಕರ್ಗಳನ್ನು ಶಾಸಕ ಮನಗೂಳಿ ಬಿಡುಗಡೆಗೊಳಿಸಿದರು.</p>.<p>ಜಯಶ್ರೀ ದೊಡಮನಿ, ಮೇಲ್ವಿಚಾರಕಿಯರಾದ ಪೂರ್ಣಿಮಾ ಸುಬೇದಾರ, ಶೈಲಶ್ರೀ ಪಾಟೀಲ ಮಾತನಾಡಿದರು. ಸರಸ್ವತಿ ಮಠ, ಪ್ರತಿಭಾ ಕುರಡೆ ಹಾಗೂ ಮೇಲ್ವಿಚಾರಕಿಯರು, ಆಲಮೇಲ ಸಿಂದಗಿ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಕೆಲಸಕ್ಕೆ ಪೂರಕವಾದ ಸ್ಮಾರ್ಟ್ಫೋನ್, ಸಮವಸ್ತ್ರ ಹಾಗೂ ಔಷಧಿಗಳ ಕಿಟ್ನ್ನು ಶಾಸಕ ಅಶೋಕ ಮನಗೂಳಿ ವಿತರಿಸಿದರು. </p>.<p>ಇಲ್ಲಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಮಗ್ರಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಡಿಮೆ ಗೌರವಧನದಲ್ಲಿ ಅಪಾರ ಶ್ರಮವಹಿಸುತ್ತಾರೆ. ಇಲಾಖೆಯ ಫಲಾನುವಿಗಳಿಗೆ ಸೌಲಭ್ಯ ಕಲ್ಪಿಸುವಲ್ಲಿಯೂ ಶ್ರಮಿಸುತ್ತಿದ್ಧಾರೆ ಎಂದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆ, ಮಾತೃಪೂರ್ಣ, ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಇಲಾಖೆಯ ಯೋಜನೆಗಳ ಕುರಿತು ವಿವರಿಸಿದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇಲಾಖೆಯ ಯೋಜನೆಗಳನ್ನು ಮನೆ, ಮನೆಗೆ, ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.</p>.<p>ಇದೇ ಸಂದರ್ಭದಲ್ಲಿ ಸಿಂದಗಿ ಪಟ್ಟಣದ ಐದು ಕುಟುಂಬಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್ ಬುಕ್ ವಿತರಣೆ , ಹೆಣ್ಣು ಮಕ್ಕಳ ಲಿಂಗಾನುಪಾತ, ಸಾಕ್ಷರತೆ ಹೆಚ್ಚಿಸುವ ಅಂಗವಾಗಿ ಜಾರಿಗೆ ಬಂದಿರುವ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಅರಿವು ಮೂಡಿಸುವ ಸ್ಟಿಕರ್ಗಳನ್ನು ಶಾಸಕ ಮನಗೂಳಿ ಬಿಡುಗಡೆಗೊಳಿಸಿದರು.</p>.<p>ಜಯಶ್ರೀ ದೊಡಮನಿ, ಮೇಲ್ವಿಚಾರಕಿಯರಾದ ಪೂರ್ಣಿಮಾ ಸುಬೇದಾರ, ಶೈಲಶ್ರೀ ಪಾಟೀಲ ಮಾತನಾಡಿದರು. ಸರಸ್ವತಿ ಮಠ, ಪ್ರತಿಭಾ ಕುರಡೆ ಹಾಗೂ ಮೇಲ್ವಿಚಾರಕಿಯರು, ಆಲಮೇಲ ಸಿಂದಗಿ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>