<p><strong>ವಿಜಯಪುರ:</strong> ನನ್ನ ಗಿಡ ನನ್ನ ಭೂಮಿ ಸಂಘಟನೆಯು ‘ಮನೆ ಮನೆಗೆ ಮಣ್ಣಿನ ಗಣಪ’ ಎಂಬ ಅಭಿಯಾನ ಹಮ್ಮಿಕೊಂಡಿದೆ ಎಂದು ಸಂಘಟನೆಯಸಂಚಾಲಕರಾದ ಬಸವರಾಜ ಬೈಚಬಾಳ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ವಿವಿಧ ರಾಸಾಯನಿಕಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಬದಲಿಗೆ ಪರಿಸರಕ್ಕೆ ಪೂರಕವಾದ ಶುದ್ಧ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಗಳನ್ನು ಮನೆಮನೆಗೆ ತಲುಪಿಸುವುದು ಸಂಘಟನೆಯ ಉದ್ದೇಶವಾಗಿದೆ ಎಂದರು.</p>.<p>ಈಗಾಗಲೇ ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಕೊಣ್ಣೂರಿನಿಂದ ಸುಮಾರು ಎಂಟು ಸಾವಿರ ಮಣ್ಣಿನ ಮೂರ್ತಿಗಳನ್ನು ನಗರಕ್ಕೆ ತರಲಾಗಿದೆ. ₹170ರಿಂದ ₹ 1ಸಾವಿರ ಬೆಲೆಯ ಆಕರ್ಷಕ ಗಣಪನ ಮೂರ್ತಿಗಳು ಲಭ್ಯವಿದ್ದು, ಸಾರ್ವಜನಿಕರು ಕೊಂಡೊಯ್ಯಬಹುದು ಎಂದರು.</p>.<p>ನಗರದ ಎಸ್.ಎಸ್.ರಸ್ತೆಶ್ರೀಸಿದ್ಧೇಶ್ವರ ಕಲಾಭವನ, ಲಿಂಗದ ಗುಡಿ ರಸ್ತೆ ಸಂಗನಬಸವ ಮಂಗಲ ಕಾರ್ಯಾಲಯ, ಜಲನಗರದನಿಂಬೆಕ್ಕ ಮಂಗಲ ಕಾರ್ಯಾಲಯ, ಜೋರಾಪುರ ಪೇಠ ಶ್ರೀಶಂಕರ ಲಿಂಗ ದೇವಸ್ಥಾನದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಸಂಘಟನೆಯ ಪ್ರಮುಖರಾದ ಗಿರೀಶ ಪಾಟೀಲ, ಚಿದಾನಂದ ಔರಂಗಬಾದ, ಶರಣಬಸು ಕುಂಬಾರ, ಮಂಜು ಆಸಂಗಿಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನನ್ನ ಗಿಡ ನನ್ನ ಭೂಮಿ ಸಂಘಟನೆಯು ‘ಮನೆ ಮನೆಗೆ ಮಣ್ಣಿನ ಗಣಪ’ ಎಂಬ ಅಭಿಯಾನ ಹಮ್ಮಿಕೊಂಡಿದೆ ಎಂದು ಸಂಘಟನೆಯಸಂಚಾಲಕರಾದ ಬಸವರಾಜ ಬೈಚಬಾಳ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ವಿವಿಧ ರಾಸಾಯನಿಕಗಳಿಂದ ತಯಾರಿಸಿದ ಗಣೇಶ ಮೂರ್ತಿಗಳ ಬದಲಿಗೆ ಪರಿಸರಕ್ಕೆ ಪೂರಕವಾದ ಶುದ್ಧ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಗಳನ್ನು ಮನೆಮನೆಗೆ ತಲುಪಿಸುವುದು ಸಂಘಟನೆಯ ಉದ್ದೇಶವಾಗಿದೆ ಎಂದರು.</p>.<p>ಈಗಾಗಲೇ ಬೆಳಗಾವಿ ಜಿಲ್ಲೆಯ ಗೋಕಾಕ ಮತ್ತು ಕೊಣ್ಣೂರಿನಿಂದ ಸುಮಾರು ಎಂಟು ಸಾವಿರ ಮಣ್ಣಿನ ಮೂರ್ತಿಗಳನ್ನು ನಗರಕ್ಕೆ ತರಲಾಗಿದೆ. ₹170ರಿಂದ ₹ 1ಸಾವಿರ ಬೆಲೆಯ ಆಕರ್ಷಕ ಗಣಪನ ಮೂರ್ತಿಗಳು ಲಭ್ಯವಿದ್ದು, ಸಾರ್ವಜನಿಕರು ಕೊಂಡೊಯ್ಯಬಹುದು ಎಂದರು.</p>.<p>ನಗರದ ಎಸ್.ಎಸ್.ರಸ್ತೆಶ್ರೀಸಿದ್ಧೇಶ್ವರ ಕಲಾಭವನ, ಲಿಂಗದ ಗುಡಿ ರಸ್ತೆ ಸಂಗನಬಸವ ಮಂಗಲ ಕಾರ್ಯಾಲಯ, ಜಲನಗರದನಿಂಬೆಕ್ಕ ಮಂಗಲ ಕಾರ್ಯಾಲಯ, ಜೋರಾಪುರ ಪೇಠ ಶ್ರೀಶಂಕರ ಲಿಂಗ ದೇವಸ್ಥಾನದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಸಂಘಟನೆಯ ಪ್ರಮುಖರಾದ ಗಿರೀಶ ಪಾಟೀಲ, ಚಿದಾನಂದ ಔರಂಗಬಾದ, ಶರಣಬಸು ಕುಂಬಾರ, ಮಂಜು ಆಸಂಗಿಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>