<p><strong>ಸೋಲಾಪುರ:</strong> ಪ್ರಯಾಣಿಕರು ಮತ್ತು ನಾಗರಿಕರಿಂದ ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಪ್ರತಾಪ ಸರನಾಯ್ಕ್ ಶನಿವಾರ ಆಕಸ್ಮಿಕ ಭೇಟಿ ನೀಡಿ ಶೌಚಾಲಯ ಪರಿಶೀಲಿಸಿ, ಅಲ್ಲಿರುವ ಅಸ್ವಚ್ಛತೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಂಬಂಧಿತ ಡಿಪೊ ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡರು.</p>.<p>ಶೌಚಾಲಯವನ್ನು ನೋಡಿಕೊಳ್ಳುತ್ತಿರುವ ಖಾಸಗಿ ಸಂಸ್ಥೆ ಮಹಿಳಾ ಪ್ರಯಾಣಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿದೆ ಎಂಬ ಗಂಭೀರ ಆರೋಪ ಸ್ಥಳೀಯ ಮಹಿಳೆಯರು ಸಚಿವರಿಗೆ ನೇರವಾಗಿ ತಿಳಿಸಿದರು. ಈ ಬಗ್ಗೆ ಡಿಪೊ ವ್ಯವಸ್ಥಾಪಕ ಮತ್ತು ಸಾರಿಗೆ ನಿಯಂತ್ರಕರಿಂದ ತೃಪ್ತಿಕರ ಉತ್ತರ ದೊರಕದೇ ಇದ್ದುದರಿಂದ, ಸಚಿವರು ತಕ್ಷಣವೇ ಸಂಬಂಧಿತ ಮೇಲಧಿಕಾರಿಗಳಿಗೆ ಡಿಪೊ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ನಿರ್ದೇಶಿಸಿದರು.</p>.<p>ನಾಲ್ಕು ದಿನಗಳೊಳಗೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.</p>.<p>ಮುಂದಿನ ಪರಿಶೀಲನಾ ಭೇಟಿಯಲ್ಲಿಯೂ ಇದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಿತ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಸಚಿವರು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲಾಪುರ:</strong> ಪ್ರಯಾಣಿಕರು ಮತ್ತು ನಾಗರಿಕರಿಂದ ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಪ್ರತಾಪ ಸರನಾಯ್ಕ್ ಶನಿವಾರ ಆಕಸ್ಮಿಕ ಭೇಟಿ ನೀಡಿ ಶೌಚಾಲಯ ಪರಿಶೀಲಿಸಿ, ಅಲ್ಲಿರುವ ಅಸ್ವಚ್ಛತೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಂಬಂಧಿತ ಡಿಪೊ ವ್ಯವಸ್ಥಾಪಕರನ್ನು ತರಾಟೆಗೆ ತೆಗೆದುಕೊಂಡರು.</p>.<p>ಶೌಚಾಲಯವನ್ನು ನೋಡಿಕೊಳ್ಳುತ್ತಿರುವ ಖಾಸಗಿ ಸಂಸ್ಥೆ ಮಹಿಳಾ ಪ್ರಯಾಣಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿದೆ ಎಂಬ ಗಂಭೀರ ಆರೋಪ ಸ್ಥಳೀಯ ಮಹಿಳೆಯರು ಸಚಿವರಿಗೆ ನೇರವಾಗಿ ತಿಳಿಸಿದರು. ಈ ಬಗ್ಗೆ ಡಿಪೊ ವ್ಯವಸ್ಥಾಪಕ ಮತ್ತು ಸಾರಿಗೆ ನಿಯಂತ್ರಕರಿಂದ ತೃಪ್ತಿಕರ ಉತ್ತರ ದೊರಕದೇ ಇದ್ದುದರಿಂದ, ಸಚಿವರು ತಕ್ಷಣವೇ ಸಂಬಂಧಿತ ಮೇಲಧಿಕಾರಿಗಳಿಗೆ ಡಿಪೊ ವ್ಯವಸ್ಥಾಪಕರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ನಿರ್ದೇಶಿಸಿದರು.</p>.<p>ನಾಲ್ಕು ದಿನಗಳೊಳಗೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.</p>.<p>ಮುಂದಿನ ಪರಿಶೀಲನಾ ಭೇಟಿಯಲ್ಲಿಯೂ ಇದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಿತ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಸಚಿವರು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>