<p><strong>ಸೋಲಾಪುರ:</strong> ಜಿಲ್ಲಾ ಪರಿಷತ್ತಿನ ಜಲ ವ್ಯವಸ್ಥಾಪನಾ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ವೇಗವಾಗಿ ಮತ್ತು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಜಿಲ್ಲಾ ಪರಿಷತ್ ಅಧ್ಯಕ್ಷ ದೀಪಕ್ ವೈದ್ಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಶುಕ್ರವಾರ ಜಿಲ್ಲಾ ಪರಿಷತ್ತಿನ ಶಿವರತ್ನ ಸಭಾಂಗಣದಲ್ಲಿ ಜಲವ್ಯವಸ್ಥಾಪನೆ ಮತ್ತು ಸ್ವಚ್ಛತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಾಯೋಜಿತ ಎಲ್ಲಾ ಯೋಜನೆಗಳ ಆರ್ಥಿಕ ಹಾಗೂ ಭೌತಿಕ ಪ್ರಗತಿಯ ತಾಲ್ಲೂಕುವಾರು ಸವಿಸ್ತಾರ ಪರಿಶೀಲನೆ ನಡೆಸಲಾಯಿತು.</p>.<p>2.0 ರಿಂದ 100 ಸಿಂಚನ ಸಾಮರ್ಥ್ಯದ ಸಣ್ಣ ನೀರಾವರಿ ಯೋಜನೆಗಳ ಅಡಿಯಲ್ಲಿ 0 ರಿಂದ 100 ಸಿಂಚನ ಸಾಮರ್ಥ್ಯದ ಕೊಲ್ಹಾಪುರ ಮಾದರಿಯ ಬಾಂದಾರ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಲ್ಲಿ ಜಿಲ್ಲಾ ಪರಿಷತ್ ಉಪಕರ ಪಾಜರ್ ಕೆರೆ ಹಾಗೂ ಗ್ರಾಮ ಕೆರೆಗಳ ದುರಸ್ತಿ, ಅಟಲ್ ಭೂಜಲ ಯೋಜನೆ, ಜಲಯುಕ್ತ ಶಿವಾರ ಅಭಿಯಾನ 2.0, ಗಾಳಮುಕ್ತ ಧರಣಿ – ಗಾಳಯುಕ್ತ ಶಿವಾರ ಯೋಜನೆ, 2025-26ನೇ ಸಾಲಿನ ಆರ್ಥಿಕ ಹಾಗೂ ಭೌತಿಕ ಪ್ರಗತಿ ವರದಿಯ ಅವಲೋಕನ ಮಾಡಲಾಯಿತು.</p>.<p>ಈ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ವೇಗವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.</p>.<p>ಜಿಲ್ಲಾ ಪರಿಷತ್ ಉಪಾಧ್ಯಕ್ಷ ಇಂದ್ರಜಿತ ಪವಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಶಲ ಜೈನ, ಆರೋಗ್ಯ ಮತ್ತು ಶಿಕ್ಷಣ ಸಮಿತಿಯ ಸಭಾಪತಿ ಚೇತನಸಿಂಗ್ ಕೇದಾರ-ಸಾವಂತ, ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-26-449792285</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲಾಪುರ:</strong> ಜಿಲ್ಲಾ ಪರಿಷತ್ತಿನ ಜಲ ವ್ಯವಸ್ಥಾಪನಾ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ವೇಗವಾಗಿ ಮತ್ತು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಜಿಲ್ಲಾ ಪರಿಷತ್ ಅಧ್ಯಕ್ಷ ದೀಪಕ್ ವೈದ್ಯ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಶುಕ್ರವಾರ ಜಿಲ್ಲಾ ಪರಿಷತ್ತಿನ ಶಿವರತ್ನ ಸಭಾಂಗಣದಲ್ಲಿ ಜಲವ್ಯವಸ್ಥಾಪನೆ ಮತ್ತು ಸ್ವಚ್ಛತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರಾಯೋಜಿತ ಎಲ್ಲಾ ಯೋಜನೆಗಳ ಆರ್ಥಿಕ ಹಾಗೂ ಭೌತಿಕ ಪ್ರಗತಿಯ ತಾಲ್ಲೂಕುವಾರು ಸವಿಸ್ತಾರ ಪರಿಶೀಲನೆ ನಡೆಸಲಾಯಿತು.</p>.<p>2.0 ರಿಂದ 100 ಸಿಂಚನ ಸಾಮರ್ಥ್ಯದ ಸಣ್ಣ ನೀರಾವರಿ ಯೋಜನೆಗಳ ಅಡಿಯಲ್ಲಿ 0 ರಿಂದ 100 ಸಿಂಚನ ಸಾಮರ್ಥ್ಯದ ಕೊಲ್ಹಾಪುರ ಮಾದರಿಯ ಬಾಂದಾರ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಲ್ಲಿ ಜಿಲ್ಲಾ ಪರಿಷತ್ ಉಪಕರ ಪಾಜರ್ ಕೆರೆ ಹಾಗೂ ಗ್ರಾಮ ಕೆರೆಗಳ ದುರಸ್ತಿ, ಅಟಲ್ ಭೂಜಲ ಯೋಜನೆ, ಜಲಯುಕ್ತ ಶಿವಾರ ಅಭಿಯಾನ 2.0, ಗಾಳಮುಕ್ತ ಧರಣಿ – ಗಾಳಯುಕ್ತ ಶಿವಾರ ಯೋಜನೆ, 2025-26ನೇ ಸಾಲಿನ ಆರ್ಥಿಕ ಹಾಗೂ ಭೌತಿಕ ಪ್ರಗತಿ ವರದಿಯ ಅವಲೋಕನ ಮಾಡಲಾಯಿತು.</p>.<p>ಈ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ವೇಗವಾಗಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.</p>.<p>ಜಿಲ್ಲಾ ಪರಿಷತ್ ಉಪಾಧ್ಯಕ್ಷ ಇಂದ್ರಜಿತ ಪವಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಶಲ ಜೈನ, ಆರೋಗ್ಯ ಮತ್ತು ಶಿಕ್ಷಣ ಸಮಿತಿಯ ಸಭಾಪತಿ ಚೇತನಸಿಂಗ್ ಕೇದಾರ-ಸಾವಂತ, ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-26-449792285</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>