<p><strong>ವಿಜಯಪುರ: </strong>ಮೌಢ್ಯ, ಮೂಢ ನಂಬಿಕೆಗಳ ನಡುವೆಯೇ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿವಿಧ ಸಂಘ–ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯರು ಸೇರಿದಂತೆ ಅನೇಕರು ಗುರುವಾರ ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.<br /><br />ಗ್ರಹಣದ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ 11.30 ಗಂಟೆಯವರೆಗೆ ನಗರದ ಪ್ರಮುಖ ವೃತ್ತ, ರಸ್ತೆಗಳು, ಬಡಾವಣೆಗಳ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು. ರಸ್ತೆಗಳು ಬಿಕೋ ಎನ್ನುತ್ತಿರುವುದು ಕಂಡು ಬಂತು. ಅನೇಕರು ಗ್ರಹಣ ಮುಗಿದ ಬಳಿಕವೇ ಅಂಗಡಿ–ಮುಂಗಟ್ಟುಗಳನ್ನು ತೆರೆದರು. ಹೋಟೆಲ್ಗಳೂ ಖಾಲಿಯಾಗಿದ್ದವು.</p>.<p>ಗ್ರಹಣ ಮುಕ್ತಾಯವಾದ ಬಳಿಕ ಜನರು ರಸ್ತೆಗೆ ಬಂದರು. ಅನೇಕರು ತಮ್ಮ ಮನೆಗಳಲ್ಲಿದ್ದ ನೀರನ್ನು ಚೆಲ್ಲಿ, ಬೇರೆ ನೀರನ್ನು ಸಂಗ್ರಹಿಸಿದರು. ಗರ್ಭಿಣಿಯರು, ಬಾಣಂತಿಯರು ಆಸ್ಪತ್ರೆ ಮತ್ತು ಮನೆಯಿಂದ ಹೊರಬರಲಿಲ್ಲ.</p>.<p class="Subhead">ದೇವಸ್ಥಾನಗಳಿಗೆ ಬೀಗ: ಗ್ರಹಣದ ಹಿನ್ನೆಲೆಯಲ್ಲಿ ಸಿದ್ಧೇಶ್ವರ ದೇವಸ್ಥಾನ, ಕಪಿಲೇಶ್ವರ ದೇವಾಲಯ, ನೀಲಕಂಠೇಶ್ವರ ದೇವಾಲಯ, 770 ಲಿಂಗದ ದೇವಸ್ಥಾನಗಳ ಬಾಗಿಲುಗಳನ್ನು ಮುಚ್ಚಲಾಗಿತ್ತು. ಗ್ರಹಣ ಮುಕ್ತಾಯದ ಬಳಿಕ ವಿಶೇಷ ಪೂಜೆ ಸಲ್ಲಿಸಿ, ಬಾಗಿಲು ತೆರೆದು, ಎಂದಿನಂತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.</p>.<p class="Subhead">ಸಾರ್ವಜನಿಕರಿಗೆ ಅವಕಾಶ: ಸಾರ್ವಜನಿಕ ಶಿಕ್ಷಣ ಇಲಾಖೆ, ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಜಿಲ್ಲಾ ವಿಜ್ಞಾನ ಕೇಂದ್ರದ ಆವರಣದಲ್ಲಿ ಕಂಕಣ ಸೂರ್ಯ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ್, ಗಣಿತ ಮತ್ತು ವಿಜ್ಞಾನ ಪರಿವೀಕ್ಷಕ ಎಂ.ಎಸ್.ಬ್ಯಾಹಟ್ಟಿ, ನಿವೃತ್ತ ಪ್ರಾಚಾರ್ಯ ಡಾ.ಬಿ.ಜಿ.ಮಠ ಅವರು ಗ್ರಹಣದ ಕುರಿತು ಮಾಹಿತಿ ನೀಡಿದರು.</p>.<p>ಕೆಜೆವಿಎಸ್ ಸಹ ಕಾರ್ಯದರ್ಶಿ ರಾಘವೇಂದ್ರ ಮಿಸಾಳೆ, ಕೆಆರ್ವಿಪಿ ಸಂಚಾಲಕ ಶ್ರೀರಾಮ್ ಭಟ್, ಜಿಲ್ಲಾ ವಿಜ್ಞಾನ ಕೇಂದ್ರದ ನಾಗರಾಜ ಮಂಡೆಕಾರ, ಚಂದ್ರಶೇಖರ ಆಣಮಿ ಅವರು ಗ್ರಹಣ ವೀಕ್ಷಣೆಗೆ ಮಾರ್ಗದರ್ಶನ ಮಾಡಿದರು.<br /><br />ಪ್ರತಿಷ್ಠಾನದ ಪ್ರಾದೇಶಿಕ ಮುಖ್ಯಸ್ಥೆ ಗೀತಾ ಪಾಟೀಲ, ಜಿಲ್ಲಾ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಸುಮಾ ಚೌಧರಿ ಇದ್ದರು.</p>.<p class="Subhead">ಬಾಳೆ ಹಣ್ಣು ಸೇವನೆ: ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ ವತಿಯಿಂದ ಬಾಳೆ ಹಣ್ಣುಗಳನ್ನು ಸೇವಿಸುವ ಮೂಲಕ ಸೂರ್ಯ ಗ್ರಹಣವನ್ನು ವೀಕ್ಷಿಸಲಾಯಿತು.</p>.<p>ಯುವಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸನ್ ಫಿಲ್ಟರ್ ಮೂಲಕ ಕಂಕಣ ಸೂರ್ಯ ಗ್ರಹಣವನ್ನು ಕಣ್ತುಂಬಿಕೊಂಡರು.</p>.<p>ಸೊಸೈಟಿ ಸಂಚಾಲಕ ಶರತ್ ಕೆ.ಪಿ. ಮಾತನಾಡಿ, ನಗರದ ಜೊತೆಗೆ ಈ ಬಾರಿ ಬಬಲೇಶ್ವರ, ನಿಡೋಣಿಯಂತಹ ಗ್ರಾಮೀಣ ಶಾಲೆಗಳಲ್ಲಿ ಪ್ರಾತ್ಯಕ್ಷಿಕೆ ಹಾಗೂ ಗ್ರಹಣ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು’ ಎಂದರು. ಶಿಕ್ಷಕ ನಟರಾಜ ಕುಂಬಾರ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಮೌಢ್ಯ, ಮೂಢ ನಂಬಿಕೆಗಳ ನಡುವೆಯೇ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿವಿಧ ಸಂಘ–ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯರು ಸೇರಿದಂತೆ ಅನೇಕರು ಗುರುವಾರ ಕಂಕಣ ಸೂರ್ಯ ಗ್ರಹಣವನ್ನು ವೀಕ್ಷಿಸಿದರು.<br /><br />ಗ್ರಹಣದ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ 11.30 ಗಂಟೆಯವರೆಗೆ ನಗರದ ಪ್ರಮುಖ ವೃತ್ತ, ರಸ್ತೆಗಳು, ಬಡಾವಣೆಗಳ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು. ರಸ್ತೆಗಳು ಬಿಕೋ ಎನ್ನುತ್ತಿರುವುದು ಕಂಡು ಬಂತು. ಅನೇಕರು ಗ್ರಹಣ ಮುಗಿದ ಬಳಿಕವೇ ಅಂಗಡಿ–ಮುಂಗಟ್ಟುಗಳನ್ನು ತೆರೆದರು. ಹೋಟೆಲ್ಗಳೂ ಖಾಲಿಯಾಗಿದ್ದವು.</p>.<p>ಗ್ರಹಣ ಮುಕ್ತಾಯವಾದ ಬಳಿಕ ಜನರು ರಸ್ತೆಗೆ ಬಂದರು. ಅನೇಕರು ತಮ್ಮ ಮನೆಗಳಲ್ಲಿದ್ದ ನೀರನ್ನು ಚೆಲ್ಲಿ, ಬೇರೆ ನೀರನ್ನು ಸಂಗ್ರಹಿಸಿದರು. ಗರ್ಭಿಣಿಯರು, ಬಾಣಂತಿಯರು ಆಸ್ಪತ್ರೆ ಮತ್ತು ಮನೆಯಿಂದ ಹೊರಬರಲಿಲ್ಲ.</p>.<p class="Subhead">ದೇವಸ್ಥಾನಗಳಿಗೆ ಬೀಗ: ಗ್ರಹಣದ ಹಿನ್ನೆಲೆಯಲ್ಲಿ ಸಿದ್ಧೇಶ್ವರ ದೇವಸ್ಥಾನ, ಕಪಿಲೇಶ್ವರ ದೇವಾಲಯ, ನೀಲಕಂಠೇಶ್ವರ ದೇವಾಲಯ, 770 ಲಿಂಗದ ದೇವಸ್ಥಾನಗಳ ಬಾಗಿಲುಗಳನ್ನು ಮುಚ್ಚಲಾಗಿತ್ತು. ಗ್ರಹಣ ಮುಕ್ತಾಯದ ಬಳಿಕ ವಿಶೇಷ ಪೂಜೆ ಸಲ್ಲಿಸಿ, ಬಾಗಿಲು ತೆರೆದು, ಎಂದಿನಂತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.</p>.<p class="Subhead">ಸಾರ್ವಜನಿಕರಿಗೆ ಅವಕಾಶ: ಸಾರ್ವಜನಿಕ ಶಿಕ್ಷಣ ಇಲಾಖೆ, ಅಗಸ್ತ್ಯ ಅಂತರರಾಷ್ಟ್ರೀಯ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಜಿಲ್ಲಾ ವಿಜ್ಞಾನ ಕೇಂದ್ರದ ಆವರಣದಲ್ಲಿ ಕಂಕಣ ಸೂರ್ಯ ಗ್ರಹಣ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ್, ಗಣಿತ ಮತ್ತು ವಿಜ್ಞಾನ ಪರಿವೀಕ್ಷಕ ಎಂ.ಎಸ್.ಬ್ಯಾಹಟ್ಟಿ, ನಿವೃತ್ತ ಪ್ರಾಚಾರ್ಯ ಡಾ.ಬಿ.ಜಿ.ಮಠ ಅವರು ಗ್ರಹಣದ ಕುರಿತು ಮಾಹಿತಿ ನೀಡಿದರು.</p>.<p>ಕೆಜೆವಿಎಸ್ ಸಹ ಕಾರ್ಯದರ್ಶಿ ರಾಘವೇಂದ್ರ ಮಿಸಾಳೆ, ಕೆಆರ್ವಿಪಿ ಸಂಚಾಲಕ ಶ್ರೀರಾಮ್ ಭಟ್, ಜಿಲ್ಲಾ ವಿಜ್ಞಾನ ಕೇಂದ್ರದ ನಾಗರಾಜ ಮಂಡೆಕಾರ, ಚಂದ್ರಶೇಖರ ಆಣಮಿ ಅವರು ಗ್ರಹಣ ವೀಕ್ಷಣೆಗೆ ಮಾರ್ಗದರ್ಶನ ಮಾಡಿದರು.<br /><br />ಪ್ರತಿಷ್ಠಾನದ ಪ್ರಾದೇಶಿಕ ಮುಖ್ಯಸ್ಥೆ ಗೀತಾ ಪಾಟೀಲ, ಜಿಲ್ಲಾ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಸುಮಾ ಚೌಧರಿ ಇದ್ದರು.</p>.<p class="Subhead">ಬಾಳೆ ಹಣ್ಣು ಸೇವನೆ: ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಬ್ರೇಕ್ ಥ್ರೂ ಸೈನ್ಸ್ ಸೊಸೈಟಿ ವತಿಯಿಂದ ಬಾಳೆ ಹಣ್ಣುಗಳನ್ನು ಸೇವಿಸುವ ಮೂಲಕ ಸೂರ್ಯ ಗ್ರಹಣವನ್ನು ವೀಕ್ಷಿಸಲಾಯಿತು.</p>.<p>ಯುವಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸನ್ ಫಿಲ್ಟರ್ ಮೂಲಕ ಕಂಕಣ ಸೂರ್ಯ ಗ್ರಹಣವನ್ನು ಕಣ್ತುಂಬಿಕೊಂಡರು.</p>.<p>ಸೊಸೈಟಿ ಸಂಚಾಲಕ ಶರತ್ ಕೆ.ಪಿ. ಮಾತನಾಡಿ, ನಗರದ ಜೊತೆಗೆ ಈ ಬಾರಿ ಬಬಲೇಶ್ವರ, ನಿಡೋಣಿಯಂತಹ ಗ್ರಾಮೀಣ ಶಾಲೆಗಳಲ್ಲಿ ಪ್ರಾತ್ಯಕ್ಷಿಕೆ ಹಾಗೂ ಗ್ರಹಣ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು’ ಎಂದರು. ಶಿಕ್ಷಕ ನಟರಾಜ ಕುಂಬಾರ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>