ಉಡುಪಿಯ ಡಾ.ಜ್ಯೋತಿ ಚೇಳ್ಯಾರು ಮಾತನಾಡಿ, ‘ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಬಸವಣ್ಣ, ನಾರಾಯಣಗುರು ಪಾತ್ರ ಮಹತ್ವದ್ದಾಗಿದೆ. ಕೇರಳ ಹಾಗೂ ಮಂಗಳೂರು, ಉಡುಪಿ, ಚಿಕ್ಕಮಂಗಳೂರು ಭಾಗದಲ್ಲಿ ನಾರಾಯಣ ಗುರು ಅನೇಕ ಸಮಾಜ ಸುಧಾರಕ ಕಾರ್ಯಗಳನ್ನು ಮಾಡಿದ್ದಾರೆ. ಮೂಢನಂಬಿಕೆ, ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ಜಾತಿ ವ್ಯವಸ್ಥೆ, ಬಹುಪತ್ನಿತ್ವ ಮತ್ತು ಬಹುಪತಿತ್ವವನ್ನು ವಿರೋಧಿಸಿದ್ದರು’ ಎಂದು ತಿಳಿಸಿದರು.