<p><strong>ಇಂಡಿ</strong>: ತಾಲ್ಲೂಕಿನಲ್ಲಿರುವ ಸುಮಾರು 110 ಕಿ.ಮೀ ಉದ್ದದ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆ ಹೂಳು ಮತ್ತು ಮುಳ್ಳಿನ ಗಿಡಗಂಟಿಗಳಿಂದ ತುಂಬಿಹೋಗಿದೆ. ಇದರಿಂದ ಮುಂದಿನ ಗ್ರಾಮಗಳ ಜನತೆಗೆ ಕಾಲುವೆಯ ನೀರು ಹರಿಯುತ್ತಿಲ್ಲ. ಸರ್ಕಾರ ಈ ಕೂಡಲೇ ಇಂಡಿ ತಾಲ್ಲೂಕಿನಲ್ಲಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಯ ಹೂಳು ತೆಗೆಸಬೇಕು, ಅದರಲ್ಲಿನ ಮುಳ್ಳಿನ ಗಿಡಗಂಟಿಗಳನ್ನು ತೆಗೆದು ಸ್ವಚ್ಛಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ಬಿಜೆಪಿ ಮುಖಂಡ ಕಾಸೂಗೌಡ ಬಿರಾದಾರ ಹಾಗೂ ತಾಲ್ಲೂಕು ಜೆಡಿಎಸ್ ಮುಖಂಡ ಶ್ರೀಶೈಲಗೌಡ ಪಾಟೀಲ ರಾಜ್ಯ ಸರ್ಕಾರಕ್ಕೆ ಕೋರಿದ್ದಾರೆ.</p>.<p>ಕಾಲುವೆಯಲ್ಲಿ ಹೂಳು, ಗಿಡಗಂಟಿ ಗಳಿಂದ ನೀರು ಮುಂದೆ ಸಾಗಲು ಅಡಚಣೆಯುಂಟಾಗಿದೆ. ಇದರಿಂದ ಚಡಚಣ ಗ್ರಾಮಗಳಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಸರಾಗವಾಗಿ ನೀರು ಹರಿಯುತ್ತಿಲ್ಲ. ಸುಮಾರು 20 ವರ್ಷಗಳಿಂದ ಈ ಸಮಸ್ಯೆ ಇದೆ. ಪ್ರಸಕ್ತ ವರ್ಷ ಕೃಷ್ಣಾ ಕಾಲುವೆಗೆ ನೀರು ಹರಿಸುವ ಮುನ್ನ ಕಾಲುವೆ ಸ್ವಚ್ಛಗೊಳಿಸುವ ಕಾರ್ಯ ಆಗಬೇಕು. ಕಾಲುವೆಯ ಕೊನೆಯ ಭಾಗ ದವರೆಗೂ ನೀರು ತಲುಪುವಂತೆ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-287484787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ತಾಲ್ಲೂಕಿನಲ್ಲಿರುವ ಸುಮಾರು 110 ಕಿ.ಮೀ ಉದ್ದದ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆ ಹೂಳು ಮತ್ತು ಮುಳ್ಳಿನ ಗಿಡಗಂಟಿಗಳಿಂದ ತುಂಬಿಹೋಗಿದೆ. ಇದರಿಂದ ಮುಂದಿನ ಗ್ರಾಮಗಳ ಜನತೆಗೆ ಕಾಲುವೆಯ ನೀರು ಹರಿಯುತ್ತಿಲ್ಲ. ಸರ್ಕಾರ ಈ ಕೂಡಲೇ ಇಂಡಿ ತಾಲ್ಲೂಕಿನಲ್ಲಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಯ ಹೂಳು ತೆಗೆಸಬೇಕು, ಅದರಲ್ಲಿನ ಮುಳ್ಳಿನ ಗಿಡಗಂಟಿಗಳನ್ನು ತೆಗೆದು ಸ್ವಚ್ಛಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ ಬಿಜೆಪಿ ಮುಖಂಡ ಕಾಸೂಗೌಡ ಬಿರಾದಾರ ಹಾಗೂ ತಾಲ್ಲೂಕು ಜೆಡಿಎಸ್ ಮುಖಂಡ ಶ್ರೀಶೈಲಗೌಡ ಪಾಟೀಲ ರಾಜ್ಯ ಸರ್ಕಾರಕ್ಕೆ ಕೋರಿದ್ದಾರೆ.</p>.<p>ಕಾಲುವೆಯಲ್ಲಿ ಹೂಳು, ಗಿಡಗಂಟಿ ಗಳಿಂದ ನೀರು ಮುಂದೆ ಸಾಗಲು ಅಡಚಣೆಯುಂಟಾಗಿದೆ. ಇದರಿಂದ ಚಡಚಣ ಗ್ರಾಮಗಳಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಸರಾಗವಾಗಿ ನೀರು ಹರಿಯುತ್ತಿಲ್ಲ. ಸುಮಾರು 20 ವರ್ಷಗಳಿಂದ ಈ ಸಮಸ್ಯೆ ಇದೆ. ಪ್ರಸಕ್ತ ವರ್ಷ ಕೃಷ್ಣಾ ಕಾಲುವೆಗೆ ನೀರು ಹರಿಸುವ ಮುನ್ನ ಕಾಲುವೆ ಸ್ವಚ್ಛಗೊಳಿಸುವ ಕಾರ್ಯ ಆಗಬೇಕು. ಕಾಲುವೆಯ ಕೊನೆಯ ಭಾಗ ದವರೆಗೂ ನೀರು ತಲುಪುವಂತೆ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-287484787</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>