<p><strong>ದೇವರಹಿಪ್ಪರಗಿ:</strong> ಪಟ್ಟಣದಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನಶಕ್ತಿಹರಣ ಚಿಕಿತ್ಸೆ ಹಾಗೂ ಲಸಿಕೆ ನೀಡಲು ಪಟ್ಟಣ ಪಂಚಾಯಿತಿಯಿಂದ ವಿಶೇಷ ತಂಡ ರಚಿಸಿ ಎಬಿಸಿ ಕೇಂದ್ರಗಳಿಗೆ ಸಾಗಿಸಲಾಯಿತು.</p>.<p>ರಾಜ್ಯದಲ್ಲಿ ಸಾರ್ವಜನಿಕರು ಹಾಗೂ ಮಕ್ಕಳ ಮೇಲಿನ ನಾಯಿಗಳ ದಾಳಿ ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕಳೆದ ಮೂರು ದಿನಗಳಿಂದ ಪಟ್ಟಣ ಪಂಚಾಯಿತಿ ವಿಶೇಷ ಕಾರ್ಯಾಚರಣೆ ಕೈಗೊಂಡು 50 ಕೂ ಹೆಚ್ಚು ನಾಯಿಗಳನ್ನು ಸೆರೆಹಿಡಿಯಲಾಯಿತು.</p>.<p>‘ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನ ಹಾಗೂ ಪ್ರಾಣಿ ನಿಯಂತ್ರಣ ಮಂಡಳಿ ನಿಯಮಗಳು 2023ರ ಅನ್ವಯ ಬೀದಿ ನಾಯಿಗಳ ನಿರ್ವಹಣೆಗಾಗಿ ಈ ಕಾರ್ಯಚರಣೆ ಕೈಗೊಳ್ಳಲಾಗಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆಫ್ರೋಜ ಅಹ್ಮದ ಪಟೇಲ ಮಾಹಿತಿ ನೀಡಿದರು.</p>.<p>‘ಉತ್ತರಪ್ರದೇಶದ ತರಬೇತಿ ಪಡೆದ ತಂಡಗಳು ಜನನಿಬಿಡ ಪ್ರದೇಶದ ಶ್ವಾನಗಳನ್ನು ಹಿಡಿದು ಎ.ಬಿ.ಸಿ ಕೇಂದ್ರಕ್ಕೆ ಸಾಗಿಸಿ ಪಶುವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಹಾಗೂ ರೇಬಿಸ್ ನಿರೋಧಕ ಲಸಿಕೆ ನೀಡಿ ಮೂರು ದಿನಗಳವರೆಗೆ ಆರೈಕೆ ಮಾಡುತ್ತಾರೆ. ಈ ಪ್ರಕ್ರಿಯೆ ಮುಗಿದು ಚೇತರಿಸಿಕೊಂಡ ನಾಯಿಗಳಿಗೆ ಗುರುತನ್ನು ಮಾಡಿ ಮರಳಿ ಬಿಡಲಾಗುತ್ತದೆ. ಈ ಕಾರ್ಯಾಚರಣೆ ಏಳು ದಿನಗಳವರೆಗೆ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ:</strong> ಪಟ್ಟಣದಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನಶಕ್ತಿಹರಣ ಚಿಕಿತ್ಸೆ ಹಾಗೂ ಲಸಿಕೆ ನೀಡಲು ಪಟ್ಟಣ ಪಂಚಾಯಿತಿಯಿಂದ ವಿಶೇಷ ತಂಡ ರಚಿಸಿ ಎಬಿಸಿ ಕೇಂದ್ರಗಳಿಗೆ ಸಾಗಿಸಲಾಯಿತು.</p>.<p>ರಾಜ್ಯದಲ್ಲಿ ಸಾರ್ವಜನಿಕರು ಹಾಗೂ ಮಕ್ಕಳ ಮೇಲಿನ ನಾಯಿಗಳ ದಾಳಿ ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕಳೆದ ಮೂರು ದಿನಗಳಿಂದ ಪಟ್ಟಣ ಪಂಚಾಯಿತಿ ವಿಶೇಷ ಕಾರ್ಯಾಚರಣೆ ಕೈಗೊಂಡು 50 ಕೂ ಹೆಚ್ಚು ನಾಯಿಗಳನ್ನು ಸೆರೆಹಿಡಿಯಲಾಯಿತು.</p>.<p>‘ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನ ಹಾಗೂ ಪ್ರಾಣಿ ನಿಯಂತ್ರಣ ಮಂಡಳಿ ನಿಯಮಗಳು 2023ರ ಅನ್ವಯ ಬೀದಿ ನಾಯಿಗಳ ನಿರ್ವಹಣೆಗಾಗಿ ಈ ಕಾರ್ಯಚರಣೆ ಕೈಗೊಳ್ಳಲಾಗಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆಫ್ರೋಜ ಅಹ್ಮದ ಪಟೇಲ ಮಾಹಿತಿ ನೀಡಿದರು.</p>.<p>‘ಉತ್ತರಪ್ರದೇಶದ ತರಬೇತಿ ಪಡೆದ ತಂಡಗಳು ಜನನಿಬಿಡ ಪ್ರದೇಶದ ಶ್ವಾನಗಳನ್ನು ಹಿಡಿದು ಎ.ಬಿ.ಸಿ ಕೇಂದ್ರಕ್ಕೆ ಸಾಗಿಸಿ ಪಶುವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಹಾಗೂ ರೇಬಿಸ್ ನಿರೋಧಕ ಲಸಿಕೆ ನೀಡಿ ಮೂರು ದಿನಗಳವರೆಗೆ ಆರೈಕೆ ಮಾಡುತ್ತಾರೆ. ಈ ಪ್ರಕ್ರಿಯೆ ಮುಗಿದು ಚೇತರಿಸಿಕೊಂಡ ನಾಯಿಗಳಿಗೆ ಗುರುತನ್ನು ಮಾಡಿ ಮರಳಿ ಬಿಡಲಾಗುತ್ತದೆ. ಈ ಕಾರ್ಯಾಚರಣೆ ಏಳು ದಿನಗಳವರೆಗೆ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>