<p><strong>ತಾಳಿಕೋಟೆ</strong>: ಪಟ್ಟಣದ ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ(ರಿ) ಇದರ ತಾಲ್ಲೂಕು ಘಟಕದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನವನ್ನು ಭಾನುವಾರ ಆಚರಿಸಲಾಯಿತು.</p>.<p>ಪಟ್ಟಣದ ಪುರಸಭೆ ಹಳೆ ಕಾರ್ಯಾಲಯ ಆವರಣದಲ್ಲಿ ಹಮ್ಮಿಕೊಂಡ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಲಾಯಿತು.</p>.<p>ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೆಹಬೂಬ ಕುಳಗೇರಿ, ತಾಲ್ಲೂಕು ಶಾಖೆಯ ಅಧ್ಯಕ್ಷ ಜುಮ್ಮಣ್ಣ ನಾಲತವಾಡ ಮಾತನಾಡಿದರು. ಒಕ್ಕೂಟದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಡೇಸಾಬ.ಅ.ಚೌಧರಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಉಪಾಧ್ಯಕ್ಷ ಅಬ್ದುಲ್ ಲತೀಫ ಬೀಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಶಾಖೆಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಜೀರ್ ಅಹ್ಮದ್ ಚೋರಗಸ್ತಿ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಆಸೀಫ್ ಕೆಂಭಾವಿ, ದಲಿತ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲ ಕಟ್ಟಿಮನಿ, ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ</strong>: ಪಟ್ಟಣದ ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ(ರಿ) ಇದರ ತಾಲ್ಲೂಕು ಘಟಕದ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನವನ್ನು ಭಾನುವಾರ ಆಚರಿಸಲಾಯಿತು.</p>.<p>ಪಟ್ಟಣದ ಪುರಸಭೆ ಹಳೆ ಕಾರ್ಯಾಲಯ ಆವರಣದಲ್ಲಿ ಹಮ್ಮಿಕೊಂಡ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಲಾಯಿತು.</p>.<p>ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೆಹಬೂಬ ಕುಳಗೇರಿ, ತಾಲ್ಲೂಕು ಶಾಖೆಯ ಅಧ್ಯಕ್ಷ ಜುಮ್ಮಣ್ಣ ನಾಲತವಾಡ ಮಾತನಾಡಿದರು. ಒಕ್ಕೂಟದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಡೇಸಾಬ.ಅ.ಚೌಧರಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಉಪಾಧ್ಯಕ್ಷ ಅಬ್ದುಲ್ ಲತೀಫ ಬೀಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಶಾಖೆಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಜೀರ್ ಅಹ್ಮದ್ ಚೋರಗಸ್ತಿ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಆಸೀಫ್ ಕೆಂಭಾವಿ, ದಲಿತ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲ ಕಟ್ಟಿಮನಿ, ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>