<p>ಪ್ರಜಾವಾಣಿ ವಾರ್ತೆ</p>.<p><strong>ವಿಜಯಪುರ:</strong> ಇಲ್ಲಿನ ಯೋಗಾಪುರ ಕಾಲೊನಿಯಲ್ಲಿರುವ ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ಗಾಯಗೊಂಡ ಐದನೇ ತರಗತಿ ವಿದ್ಯಾರ್ಥಿ ಅಂಶ್ (9) ಮೃತಪಟ್ಟಿದ್ದಾನೆ. ಆತನ ಶವವನ್ನು ಶಾಲೆಯ ಆವರಣದಲ್ಲಿಟ್ಟು, ಪೋಷಕರು ಮತ್ತು ಸಂಬಂಧಿಕರು ಪ್ರತಿಭಟನೆ ನಡೆಸಿದರು.</p><p>ಉತ್ತರಪ್ರದೇಶ ರಾಜ್ಯದ ಜಾಲೂನ್ ಜಿಲ್ಲೆಯ ಕಕ್ರೋಲಿ ಗ್ರಾಮದ ಸುನೀಲ್ ಜಾಟಪ್ ಮತ್ತು ಶೃತಿ ದಂಪತಿಯು ಪುತ್ರ ಅಂಶ್ ಜೊತೆ, ನಾಲ್ಕು ವರ್ಷಗಳಿಂದ ತಳ್ಳುವ ಗಾಡಿಯಲ್ಲಿ ಪಾನಿಪುರಿ ವ್ಯಾಪಾರ ಮಾಡುತ್ತ ಜೀವನ ಸಾಗಿಸುತ್ತಿದ್ದರು. ಬಾಡಿಗೆ ಮನೆಯಲ್ಲಿ ವಾಸವಿದ್ದರು.</p><p>‘ಆಗಸ್ಟ್ 4ರಂದು ಅಂಶ್ ಮತ್ತು ಶಾಲೆಯ ಇತರೆ ವಿದ್ಯಾರ್ಥಿಗಳ ನಡುವೆ ಹೊಡೆದಾಟವಾಗಿದೆ. ಘಟನೆಯಲ್ಲಿ ಗಾಯಗೊಂಡ ಅಂಶ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆತಂದಿದ್ದೆವು. ಬುಧವಾರ ರಾತ್ರಿ ಏಕಾಏಕಿ ಉಸಿರಾಟದಲ್ಲಿ ತೊಂದರೆಯಾಗಿ ಮೃತಪಟ್ಟ. ಆತನ ಸಾವಿನ ಬಗ್ಗೆ ಅನುಮಾನ ಇದೆ. ಅಂಶ್ಗೆ ಈ ಮೊದಲು ಅನಾರೋಗ್ಯ ಸಮಸ್ಯೆಯೂ ಇತ್ತು’ ಎಂದು ಬಾಲಕನ ತಂದೆ ಸುನೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.</p><p>‘ಬಾಲಕನ ಸಾವಿನ ಬಗ್ಗೆ ಅನುಮಾನಗಳು ಇವೆ. ಅದಕ್ಕೆ ಈವರೆಗೆ ಯಾರ ವಿರುದ್ಧವೂ ಕ್ರಮಕೈಗೊಂಡಿಲ್ಲ, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಖಚಿತ ಕಾರಣ ಗೊತ್ತಾಗಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ವಿಜಯಪುರ:</strong> ಇಲ್ಲಿನ ಯೋಗಾಪುರ ಕಾಲೊನಿಯಲ್ಲಿರುವ ಶ್ರೀ ಸತ್ಯಸಾಯಿ ಬಾಬಾ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ಗಾಯಗೊಂಡ ಐದನೇ ತರಗತಿ ವಿದ್ಯಾರ್ಥಿ ಅಂಶ್ (9) ಮೃತಪಟ್ಟಿದ್ದಾನೆ. ಆತನ ಶವವನ್ನು ಶಾಲೆಯ ಆವರಣದಲ್ಲಿಟ್ಟು, ಪೋಷಕರು ಮತ್ತು ಸಂಬಂಧಿಕರು ಪ್ರತಿಭಟನೆ ನಡೆಸಿದರು.</p><p>ಉತ್ತರಪ್ರದೇಶ ರಾಜ್ಯದ ಜಾಲೂನ್ ಜಿಲ್ಲೆಯ ಕಕ್ರೋಲಿ ಗ್ರಾಮದ ಸುನೀಲ್ ಜಾಟಪ್ ಮತ್ತು ಶೃತಿ ದಂಪತಿಯು ಪುತ್ರ ಅಂಶ್ ಜೊತೆ, ನಾಲ್ಕು ವರ್ಷಗಳಿಂದ ತಳ್ಳುವ ಗಾಡಿಯಲ್ಲಿ ಪಾನಿಪುರಿ ವ್ಯಾಪಾರ ಮಾಡುತ್ತ ಜೀವನ ಸಾಗಿಸುತ್ತಿದ್ದರು. ಬಾಡಿಗೆ ಮನೆಯಲ್ಲಿ ವಾಸವಿದ್ದರು.</p><p>‘ಆಗಸ್ಟ್ 4ರಂದು ಅಂಶ್ ಮತ್ತು ಶಾಲೆಯ ಇತರೆ ವಿದ್ಯಾರ್ಥಿಗಳ ನಡುವೆ ಹೊಡೆದಾಟವಾಗಿದೆ. ಘಟನೆಯಲ್ಲಿ ಗಾಯಗೊಂಡ ಅಂಶ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆತಂದಿದ್ದೆವು. ಬುಧವಾರ ರಾತ್ರಿ ಏಕಾಏಕಿ ಉಸಿರಾಟದಲ್ಲಿ ತೊಂದರೆಯಾಗಿ ಮೃತಪಟ್ಟ. ಆತನ ಸಾವಿನ ಬಗ್ಗೆ ಅನುಮಾನ ಇದೆ. ಅಂಶ್ಗೆ ಈ ಮೊದಲು ಅನಾರೋಗ್ಯ ಸಮಸ್ಯೆಯೂ ಇತ್ತು’ ಎಂದು ಬಾಲಕನ ತಂದೆ ಸುನೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.</p><p>‘ಬಾಲಕನ ಸಾವಿನ ಬಗ್ಗೆ ಅನುಮಾನಗಳು ಇವೆ. ಅದಕ್ಕೆ ಈವರೆಗೆ ಯಾರ ವಿರುದ್ಧವೂ ಕ್ರಮಕೈಗೊಂಡಿಲ್ಲ, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಖಚಿತ ಕಾರಣ ಗೊತ್ತಾಗಲಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>