<p><strong>ವಿಜಯಪುರ:</strong> ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ದಾರೆ.</p><p>ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಇಬ್ಬರು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರು. ಈ ಮಾಹಿತಿ ತಿಳಿದ ಸಚಿವರು ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಇಬ್ಬರೂ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಾಗಿರುವ ಕಾಲೇಜು ಪ್ರವೇಶ ಶುಲ್ಕ, ಊಟ ಹಾಗೂ ವಸತಿ ಬೇಕಾಗುವ ಒಟ್ಟು ಮೊತ್ತವನ್ನು ನೀಡಿದ್ದಾರೆ.</p><p>ತಿಕೋಟಾ ತಾಲ್ಲೂಕಿನ ಅರಕೇರಿ ಎಲ್. ಟಿ-1ರ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ ನೀಟ್ ನಲ್ಲಿ 2,23,424 ರ್ಯಾಂಕ್ ಪಡೆದಿದ್ದು, ಬೆಂಗಳೂರಿನ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾರೆ.</p><p>ಸಿಂದಗಿ ತಾಲ್ಲೂಕಿನ ಹಿಕ್ಕನಗುತ್ತಿಯ, ಸದ್ಯ ವಿಜಯಪುರ ನಗರದಲ್ಲಿ ವಾಸಿಸುವ ಮಂಜುನಾಥ ಲಕ್ಷ್ಮಣ ಗೊಟಗುಣಕಿ ನೀಟ್ ನಲ್ಲಿ 76,372 ರ್ಯಾಂಕ್ ಪಡೆದು, ಚಿತ್ರದುರ್ಗದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾರೆ.</p><p>ದಿವ್ಯಾ ರಾಠೋಡಗೆ ಕೋರ್ಸ್ ಪೂರ್ಣಗೊಳಿಸಲು ಒಟ್ಟು ₹ 9,98,484 ಅಗತ್ಯವಿದ್ದು, ಕೋರ್ಸಿನ ಮೊದಲ ವರ್ಷಕ್ಕೆ ಅಗತ್ಯವಾದ ₹2,49,621 ಹಣದ ಚೆಕ್ ಅನ್ನು ಸಚಿವರು ವಿತರಿಸಿದರು.</p><p>ವಿಜಯಪುರ ನಗರದ ನಿವಾಸಿ ಮಂಜುನಾಥ ಗೊಟಗುಣಕಿಗೆ ಕೋರ್ಸ್ ಪೂರ್ಣಗೊಳಿಸಲು ₹ 6.32 ಲಕ್ಷ ಅಗತ್ಯವಿದ್ದು, ಕೊರ್ಸಿನ ಪ್ರಥಮ ವರ್ಷಕ್ಕೆ ಅಗತ್ಯವಾದ ₹1.58 ಲಕ್ಷದ ಮೊತ್ತದ ಮೊಲದ ಕಂತಿನ ಚೆಕ್ ಅನ್ನು ವಿತರಿಸಿದರು.</p><p>ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಡಾ. ಆರ್. ವಿ ಕುಲಕರ್ಣಿ, ಸಂಸ್ಥೆ ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.</p><p>ಈ ವರ್ಷ ಸಚಿವ ಎಂ. ಬಿ. ಪಾಟೀಲ ಅವರು ಬಿ. ಎಲ್. ಡಿ. ಇ ಸಂಸ್ಥೆಯಿಂದ ಈವರೆಗೆ ಒಟ್ಟು ಎಂಟು ಜನ ವಿದ್ಯಾರ್ಥಿಗಳು ಎಂ. ಬಿ. ಬಿ. ಎಸ್ ಓದಲು ಸಹಾಯ ಹಸ್ತ ಚಾಚಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಇಬ್ಬರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವಿದ್ಯಾರ್ಥಿಗಳು ವೈದ್ಯರಾಗುವ ಕನಸು ನನಸಾಗಲು ಸಹಾಯ ಹಸ್ತ ಚಾಚಿದ್ದಾರೆ.</p><p>ನೀಟ್ ಪಾಸಾಗಿ ಸರ್ಕಾರಿ ಕೋಟಾದಡಿ ಎಂ.ಬಿ.ಬಿ.ಎಸ್. ಸೀಟು ಪಡೆದರೂ ಆರ್ಥಿಕ ಸಮಸ್ಯೆಯಿಂದಾಗಿ ಇಬ್ಬರು ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರು. ಈ ಮಾಹಿತಿ ತಿಳಿದ ಸಚಿವರು ಬಿ.ಎಲ್.ಡಿ.ಇ ಸಂಸ್ಥೆಯ ವತಿಯಿಂದ ಇಬ್ಬರೂ ವಿದ್ಯಾರ್ಥಿಗಳಿಗೆ ಕೋರ್ಸಿಗೆ ಅಗತ್ಯವಾಗಿರುವ ಕಾಲೇಜು ಪ್ರವೇಶ ಶುಲ್ಕ, ಊಟ ಹಾಗೂ ವಸತಿ ಬೇಕಾಗುವ ಒಟ್ಟು ಮೊತ್ತವನ್ನು ನೀಡಿದ್ದಾರೆ.</p><p>ತಿಕೋಟಾ ತಾಲ್ಲೂಕಿನ ಅರಕೇರಿ ಎಲ್. ಟಿ-1ರ ವಿದ್ಯಾರ್ಥಿನಿ ದಿವ್ಯಾ ಹನಮಂತ ರಾಠೋಡ ನೀಟ್ ನಲ್ಲಿ 2,23,424 ರ್ಯಾಂಕ್ ಪಡೆದಿದ್ದು, ಬೆಂಗಳೂರಿನ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾರೆ.</p><p>ಸಿಂದಗಿ ತಾಲ್ಲೂಕಿನ ಹಿಕ್ಕನಗುತ್ತಿಯ, ಸದ್ಯ ವಿಜಯಪುರ ನಗರದಲ್ಲಿ ವಾಸಿಸುವ ಮಂಜುನಾಥ ಲಕ್ಷ್ಮಣ ಗೊಟಗುಣಕಿ ನೀಟ್ ನಲ್ಲಿ 76,372 ರ್ಯಾಂಕ್ ಪಡೆದು, ಚಿತ್ರದುರ್ಗದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ಪಡೆದಿದ್ದಾರೆ.</p><p>ದಿವ್ಯಾ ರಾಠೋಡಗೆ ಕೋರ್ಸ್ ಪೂರ್ಣಗೊಳಿಸಲು ಒಟ್ಟು ₹ 9,98,484 ಅಗತ್ಯವಿದ್ದು, ಕೋರ್ಸಿನ ಮೊದಲ ವರ್ಷಕ್ಕೆ ಅಗತ್ಯವಾದ ₹2,49,621 ಹಣದ ಚೆಕ್ ಅನ್ನು ಸಚಿವರು ವಿತರಿಸಿದರು.</p><p>ವಿಜಯಪುರ ನಗರದ ನಿವಾಸಿ ಮಂಜುನಾಥ ಗೊಟಗುಣಕಿಗೆ ಕೋರ್ಸ್ ಪೂರ್ಣಗೊಳಿಸಲು ₹ 6.32 ಲಕ್ಷ ಅಗತ್ಯವಿದ್ದು, ಕೊರ್ಸಿನ ಪ್ರಥಮ ವರ್ಷಕ್ಕೆ ಅಗತ್ಯವಾದ ₹1.58 ಲಕ್ಷದ ಮೊತ್ತದ ಮೊಲದ ಕಂತಿನ ಚೆಕ್ ಅನ್ನು ವಿತರಿಸಿದರು.</p><p>ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ರಿಜಿಸ್ಟ್ರಾರ್ ಡಾ. ಆರ್. ವಿ ಕುಲಕರ್ಣಿ, ಸಂಸ್ಥೆ ಅಕೌಂಟ್ಸ್ ಸುಪರಿಂಟೆಂಡೆಂಟ್ ಎಸ್. ಎಸ್. ಪಾಟೀಲ, ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.</p><p>ಈ ವರ್ಷ ಸಚಿವ ಎಂ. ಬಿ. ಪಾಟೀಲ ಅವರು ಬಿ. ಎಲ್. ಡಿ. ಇ ಸಂಸ್ಥೆಯಿಂದ ಈವರೆಗೆ ಒಟ್ಟು ಎಂಟು ಜನ ವಿದ್ಯಾರ್ಥಿಗಳು ಎಂ. ಬಿ. ಬಿ. ಎಸ್ ಓದಲು ಸಹಾಯ ಹಸ್ತ ಚಾಚಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>