<p><strong>ಮುದ್ದೇಬಿಹಾಳ:</strong> ತಾಲ್ಲೂಕಿನ ಯರಗಲ್ಲದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು. </p>.<p>ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರಿಶೀಲನೆ ನಡೆಸಿದರು. ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದರು.</p>.<p>‘ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ. ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೆಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ ಮುಖಂಡರು, ಅಧಿಕಾರಿಗಳನ್ನು ಕರೆದುಕೊಂಡು ಖುದ್ದಾಗಿ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳು ತೂಕದ ಯಂತ್ರವನ್ನು ಪರಿಶೀಲನೆ ನಡೆಸಿದ್ದು ಕಾರ್ಖಾನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸುದ್ದಿಗಾರರಿಗೆ ತಿಳಿಸಿದರು.</p>.<p>‘ಜಿಲ್ಲೆಯ ಎಲ್ಲ ಕಾರ್ಖಾನೆಗಳಲ್ಲೂ ರೈತರನ್ನೊಳಗೊಂಡ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಕಾಲಕಾಲಕ್ಕೆ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳ ಮಾಹಿತಿ ಪಡೆದುಕೊಳ್ಳಲಾಗುವುದು’ ಎಂದರು.</p>.<p>ಆಹಾರ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ‘ಬಾಲಾಜಿ ಸಕ್ಕರೆ ಕಾರ್ಖಾನೆಗೆ ರೈತರೊಂದಿಗೆ ಭೇಟಿ ನೀಡಿದ್ದೇವೆ. ಪ್ರಯೋಗಾಲಯಕ್ಕೆ ಭೇಟಿ ನೀಡಿ ಸಕ್ಕರೆ ಅಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬುದನ್ನು ರೈತರಿಗೆ ಖುದ್ದಾಗಿ ಮನವರಿಕೆ ಮಾಡಿಕೊಡಲಾಗಿದೆ. ಸರ್ಕಾರ ಸೂಚಿಸಿದ ದರವನ್ನು ಕಾರ್ಖಾನೆಯವರು ನೀಡುತ್ತಿದ್ದು ಈಗಾಗಲೇ ನ.30ರವರೆಗಿನ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸಲಾಗಿದೆ. ₹132 ಕೋಟಿಯಲ್ಲಿ ₹84 ಕೋಟಿ ಬಿಲ್ ಪಾವತಿಸಲಾಗಿದ್ದು, ಡಿ.10ರವರೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸುವ ಕಾರ್ಯ ಮಾಡುವುದಾಗಿ ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ, ನಿರ್ದೇಶಕರಾದ ರಾಹುಲ್ಗೌಡ ಪಾಟೀಲ, ಅಧಿಕ ಪಾಟೀಲ, ಶ್ರೀನಿವಾಸ ಅರಕೇರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿವೇಕ, ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ, ಕೃಷಿ ಇಲಾಖೆ ಅಧಿಕಾರಿ ಎಸ್.ಡಿ.ಭಾವಿಕಟ್ಟಿ, ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರವಾಡಗಿ, ಆಹಾರ ಶಿರಸ್ತೇದಾರ ಶಶಿಧರ ಕುಮಚಗಿ, ಆಹಾರ ಇಲಾಖೆ ನಿರೀಕ್ಷಕ ಎಸ್.ಎ.ಗುಮತಿಮಠ, ಕಂದಾಯ ನಿರೀಕ್ಷಕ ಪವನ ತಳವಾರ, ರೈತ ಸಂಘಟನೆಯ ಮುಖಂಡರಾದ ಸೋಮನಗೌಡ ಪಾಟೀಲ, ಬಾಲಪ್ಪಗೌಡ ಲಿಂಗದಳ್ಳಿ, ಅರವಿಂದ ಕುಲಕರ್ಣಿ, ಶಿವನಗೌಡ ಜಲಪೂರ, ಕಂದಾಯ, ಆಹಾರ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ:</strong> ತಾಲ್ಲೂಕಿನ ಯರಗಲ್ಲದಲ್ಲಿರುವ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು. </p>.<p>ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರಿಶೀಲನೆ ನಡೆಸಿದರು. ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದರು.</p>.<p>‘ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ. ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೆಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ ಮುಖಂಡರು, ಅಧಿಕಾರಿಗಳನ್ನು ಕರೆದುಕೊಂಡು ಖುದ್ದಾಗಿ ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳು ತೂಕದ ಯಂತ್ರವನ್ನು ಪರಿಶೀಲನೆ ನಡೆಸಿದ್ದು ಕಾರ್ಖಾನೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸುದ್ದಿಗಾರರಿಗೆ ತಿಳಿಸಿದರು.</p>.<p>‘ಜಿಲ್ಲೆಯ ಎಲ್ಲ ಕಾರ್ಖಾನೆಗಳಲ್ಲೂ ರೈತರನ್ನೊಳಗೊಂಡ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಕಾಲಕಾಲಕ್ಕೆ ಕಾರ್ಖಾನೆಗೆ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳ ಮಾಹಿತಿ ಪಡೆದುಕೊಳ್ಳಲಾಗುವುದು’ ಎಂದರು.</p>.<p>ಆಹಾರ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ‘ಬಾಲಾಜಿ ಸಕ್ಕರೆ ಕಾರ್ಖಾನೆಗೆ ರೈತರೊಂದಿಗೆ ಭೇಟಿ ನೀಡಿದ್ದೇವೆ. ಪ್ರಯೋಗಾಲಯಕ್ಕೆ ಭೇಟಿ ನೀಡಿ ಸಕ್ಕರೆ ಅಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬುದನ್ನು ರೈತರಿಗೆ ಖುದ್ದಾಗಿ ಮನವರಿಕೆ ಮಾಡಿಕೊಡಲಾಗಿದೆ. ಸರ್ಕಾರ ಸೂಚಿಸಿದ ದರವನ್ನು ಕಾರ್ಖಾನೆಯವರು ನೀಡುತ್ತಿದ್ದು ಈಗಾಗಲೇ ನ.30ರವರೆಗಿನ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸಲಾಗಿದೆ. ₹132 ಕೋಟಿಯಲ್ಲಿ ₹84 ಕೋಟಿ ಬಿಲ್ ಪಾವತಿಸಲಾಗಿದ್ದು, ಡಿ.10ರವರೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿಸುವ ಕಾರ್ಯ ಮಾಡುವುದಾಗಿ ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ, ನಿರ್ದೇಶಕರಾದ ರಾಹುಲ್ಗೌಡ ಪಾಟೀಲ, ಅಧಿಕ ಪಾಟೀಲ, ಶ್ರೀನಿವಾಸ ಅರಕೇರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿವೇಕ, ಉಪ ವಿಭಾಗಾಧಿಕಾರಿ ಗುರುನಾಥ ದಡ್ಡಿ, ಕೃಷಿ ಇಲಾಖೆ ಅಧಿಕಾರಿ ಎಸ್.ಡಿ.ಭಾವಿಕಟ್ಟಿ, ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರವಾಡಗಿ, ಆಹಾರ ಶಿರಸ್ತೇದಾರ ಶಶಿಧರ ಕುಮಚಗಿ, ಆಹಾರ ಇಲಾಖೆ ನಿರೀಕ್ಷಕ ಎಸ್.ಎ.ಗುಮತಿಮಠ, ಕಂದಾಯ ನಿರೀಕ್ಷಕ ಪವನ ತಳವಾರ, ರೈತ ಸಂಘಟನೆಯ ಮುಖಂಡರಾದ ಸೋಮನಗೌಡ ಪಾಟೀಲ, ಬಾಲಪ್ಪಗೌಡ ಲಿಂಗದಳ್ಳಿ, ಅರವಿಂದ ಕುಲಕರ್ಣಿ, ಶಿವನಗೌಡ ಜಲಪೂರ, ಕಂದಾಯ, ಆಹಾರ ಇಲಾಖೆ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>