<p><strong>ವಿಜಯಪುರ</strong>: ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಐವರು ಸಾವಿಗೀಡಾಗಿದ್ದಾರೆ.</p><p>ಅಪಘಾತದ ರಭಸಕ್ಕೆ ಕಾರಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ. </p><p>ಸಾವಿಗೀಡಾದವರು ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಿವಾಸಿಗಳಾದ ನಿಂಗಪ್ಪ ಪಾಟೀಲ್ (55) ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ (65) ಶಶಿಕಲಾ ಜೈನಾಪೂರ (45) ಹಾಗೂ ದಿಲೀಪ್ ಪಾಟೀಲ್ (50) ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p><p>ಯಾದಗಿರಿ ಜಿಲ್ಲೆ ಅಗ್ನಿ ಗ್ರಾಮದಲ್ಲಿ ವರನಿಗೆ ಕನ್ಯೆ ನೋಡಲು ಹೋಗಿದ್ದ ಐವರು, ಹುಣಸಗಿಯಿಂದ ತಾಳಿಕೋಟೆ ಮಾರ್ಗವಾಗಿ ತಮ್ಮ ಊರಿಗೆ ಕಾರಿನಲ್ಲಿ ವಾಪಸ್ ಬರುವ ವೇಳೆ ಕ್ರೂಸರ್ ಹಿಂದಿಕ್ಕುವ ಭರದಲ್ಲಿ ತೊಗರಿ ಕಟಾವು ಮಾಡುವ ಮಷಿನ್ಗೆ ಮುಖಾಮುಖಿ ಡಿಕ್ಕಿಯಾಗಿದೆ. </p><p>ಕಾರಿನಲ್ಲಿದ್ದ ಶವಗಳನ್ನು ಜೆಸಿಬಿ ಯಂತ್ರದ ಮೂಲಕ ತಾಳಿಕೋಟೆ ಪೊಲೀಸರು ಹೊರ ತೆಗೆದು, ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ತಾಳಿಕೋಟೆ ತಾಲ್ಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರು ಹಾಗೂ ತೊಗರಿ ಕಟಾವು ಮಾಡುವ ಯಂತ್ರದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೆ ಐವರು ಸಾವಿಗೀಡಾಗಿದ್ದಾರೆ.</p><p>ಅಪಘಾತದ ರಭಸಕ್ಕೆ ಕಾರಲ್ಲಿದ್ದ ಇಬ್ಬರು ಮಹಿಳೆಯರು, ಮೂವರು ಪುರುಷರು ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ. </p><p>ಸಾವಿಗೀಡಾದವರು ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಿವಾಸಿಗಳಾದ ನಿಂಗಪ್ಪ ಪಾಟೀಲ್ (55) ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ (65) ಶಶಿಕಲಾ ಜೈನಾಪೂರ (45) ಹಾಗೂ ದಿಲೀಪ್ ಪಾಟೀಲ್ (50) ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p><p>ಯಾದಗಿರಿ ಜಿಲ್ಲೆ ಅಗ್ನಿ ಗ್ರಾಮದಲ್ಲಿ ವರನಿಗೆ ಕನ್ಯೆ ನೋಡಲು ಹೋಗಿದ್ದ ಐವರು, ಹುಣಸಗಿಯಿಂದ ತಾಳಿಕೋಟೆ ಮಾರ್ಗವಾಗಿ ತಮ್ಮ ಊರಿಗೆ ಕಾರಿನಲ್ಲಿ ವಾಪಸ್ ಬರುವ ವೇಳೆ ಕ್ರೂಸರ್ ಹಿಂದಿಕ್ಕುವ ಭರದಲ್ಲಿ ತೊಗರಿ ಕಟಾವು ಮಾಡುವ ಮಷಿನ್ಗೆ ಮುಖಾಮುಖಿ ಡಿಕ್ಕಿಯಾಗಿದೆ. </p><p>ಕಾರಿನಲ್ಲಿದ್ದ ಶವಗಳನ್ನು ಜೆಸಿಬಿ ಯಂತ್ರದ ಮೂಲಕ ತಾಳಿಕೋಟೆ ಪೊಲೀಸರು ಹೊರ ತೆಗೆದು, ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಬಸನಬಾಗೇವಾಡಿ ಸಮುದಾಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>