ವಿಜಯಪುರ:ದಲಿತ ಸಾಹಿತ್ಯ ಪರಿಷತ್ತಿನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸುಜಾತಾ ಚಲವಾದಿ ಮತ್ತು ಪತ್ರಕರ್ತ ಪರಶುರಾಮ ಶಿವಶರಣ ಅವರನ್ನು ‘ಬೆಳ್ಳಿ ಸಂಭ್ರಮ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಳ್ಳಿ ಸಂಭ್ರಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುದ್ದೇಬಿಹಾಳದಕರ್ನಾಟಕ ಬ್ಯಾಂಕ್ ಸಭಾ ಭವನದಲ್ಲಿ ಜುಲೈ 10ರಂದು ನಡೆಯಲಿದೆ ಎಂದು ದಸಾಪ ರಾಜ್ಯ ಘಟಕ ಅಧ್ಯಕ್ಷಡಾ. ಅರ್ಜುನ ಗೊಳಸಂಗಿ ಪ್ರಕಟಣಿಯಲ್ಲಿ ತಿಳಿಸಿದ್ದಾರೆ.