<p><strong>ವಿಜಯಪುರ:</strong> ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ನೀರಾವರಿ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪೂರಕ ವರದಿಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಸಿಂದಗಿ ಶಾಸಕ ಅಶೋಕ ಮನಗೂಳಿ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯ, ಕ್ಷೇತ್ರಗಳ ಮೂಲಭೂತ ಸೌಲಭಯ ಕಲ್ಪಿಸಲು ಸಮಿತಿ ಶಿಫಾರಸ್ಸು ಮಾಡಲು ತಿಳಿಸಿದರು. </p>.<p>ಜಿಲ್ಲೆಯ ಪ್ರವಾಸಿ ತಾಣಗಳ ಬೆಳವಣಿಗೆಗೆ, ಕೃಷಿ ಕ್ಷೇತ್ರ, ಯುವಕರಿಗೆ ಉದ್ಯೋಗ, ಕುಡಿಯುವ ನೀರು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ದಿ ದೃಷ್ಠಿಕೋನ ಇಟ್ಟುಕೊಂಡು ಸಮಿತಿ ವರದಿ ನೀಡಬೇಕು ಎಂದು ತಿಳಿಸಿದರು. </p>.<p>ಸಮಿತಿಯ ಸದಸ್ಯರಾದ ಡಾ.ಎಸ್.ಟಿ.ಬಾಗಲಕೋಟೆ ಮಾತನಾಡಿ, ಶಿಕ್ಷಣ, ಆರೋಗ್ಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ ವಲಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರ ಮೇಲೆ ಹಿಂದುಳಿದ ತಾಲ್ಲೂಕುಗಳ ಅಬಿವೃದ್ದಿಗೆ ಅಗತ್ಯ ಸೌಲಭ್ಯ ಒದಗಿಸಲು ರಾಜ್ಯಾದ್ಯಂತ ಅಧ್ಯಯನ ಕೈಗೊಂಡಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ ಎಂದರು.</p>.<p>ವಿಜಯಪುರ ಜಿಲ್ಲೆ ಒಳಗೊಂಡಂತೆ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಿತಿ ಅಧ್ಯಯನ ಪೂರ್ಣಗೊಂಡಿದೆ. ಡಾ.ಡಿ.ಎಂ.ನಂಜುಡಪ್ಪ ವರದಿ ಅನುಷ್ಠಾನದಲ್ಲಿ ಆದ ಅಭಿವೃದ್ದಿ ಮತ್ತು ಬದಲಾವಣೆಯ ವಿಷಯಗಳ ಅಧ್ಯಯನ ಮಾಡಿ ಅದಕ್ಕೆ ಪೂರಕವಾಗಿ ಅಸಮತೋಲನ ನಿವಾರಣೆಗೆ ಅಗತ್ಯ ಇರುವ ಅಂಶಗಳ ಸಂಗ್ರಹಿಸಿ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.</p>.<p>ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ.ವಿಶಾಲ್ ಆರ್. ಮಾತನಾಡಿ, ವಿಜಯಪುರ ಕೃಷಿ ಅವಲಂಬಿತ ಜಿಲ್ಲೆಯಾಗಿದ್ದು, ಕೃಷಿ ಸಂಸ್ಕರಣೆ, ಸೇವಾವಲಯದಲ್ಲಿ ಕೌಶಲಾಭಿವೃದ್ದಿಗೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವುದರ ಜೊತೆಗೆ ಜಿಲ್ಲೆಯಲ್ಲಿ ಮುಖ್ಯವಾಗಿರುವ ಪ್ರವಾಸೋದ್ಯಮ ಬೆಳವಣಿಗೆ ಸಂಬಂಧ ಸಮಿತಿಯು ಜಿಲ್ಲೆಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದರು. </p>.<p>ಸಮಿತಿಯು ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಅಗತ್ಯ ಇರುವ ತಜ್ಞ ವೈದ್ಯರ ಕೊರತೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ ಸೇರಿದಂತೆ ತೋಟಗಾರಿಕೆ ಇಲಾಖೆ, ಕೌಶಲಾಭಿವೃದ್ದಿ ಇಲಾಖೆಗಳ ಅಗತ್ಯ ಮಾಹಿತಿ ಪಡೆದುಕೊಂಡರು.</p>.<p>ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯಕ್ಕಾಗಿ ಮಹಿಳಾ ವಿವಿಯ ರಿಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರ ಕೋರಿಕೆಗೆ ಸಕಾರತ್ಮಕವಾಗಿ ಸ್ಪಂದಿಸಿ, ಮಹಿಳಾ ಸಬಲೀಕರಣಕ್ಕೆ ಒತ್ತು ಹಾಗೂ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಈ ಅಗತ್ಯತೆಯನ್ನು ಸಮಿತಿ ಗಮನಿಸಿದೆ ಎಂದು ಹೇಳಿದರು.</p>.<p>ಸಭೆಯಲ್ಲಿ ಸಮಿತಿಯ ಸದಸ್ಯರಾದ ಸಂಗೀತಾ ಎನ್.ಕೆ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿ.ಪಂ. ಉಪ ಕಾರ್ಯದರ್ಶಿ ವಿಜಯಕುಮಾರ್ ಆಜೂರ ಉಪಸ್ಥಿತರಿದ್ದರು. </p>.<div><blockquote>ಸರ್ಕಾರದ ಯೋಜನೆಗಳ ಲಾಭ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತಾಗಲು ಅಧಿಕಾರಿಗಳು ಬದ್ದತೆಯಿಂದ ಕಾರ್ಯನಿರ್ವಹಿಸಬೇಕು </blockquote><span class="attribution">ಅಶೋಕ ಮನಗೂಳಿ ಶಾಸಕ ಸಿಂದಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಹಾಗೂ ನೀರಾವರಿ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪೂರಕ ವರದಿಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಸಿಂದಗಿ ಶಾಸಕ ಅಶೋಕ ಮನಗೂಳಿ ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯ, ಕ್ಷೇತ್ರಗಳ ಮೂಲಭೂತ ಸೌಲಭಯ ಕಲ್ಪಿಸಲು ಸಮಿತಿ ಶಿಫಾರಸ್ಸು ಮಾಡಲು ತಿಳಿಸಿದರು. </p>.<p>ಜಿಲ್ಲೆಯ ಪ್ರವಾಸಿ ತಾಣಗಳ ಬೆಳವಣಿಗೆಗೆ, ಕೃಷಿ ಕ್ಷೇತ್ರ, ಯುವಕರಿಗೆ ಉದ್ಯೋಗ, ಕುಡಿಯುವ ನೀರು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ದಿ ದೃಷ್ಠಿಕೋನ ಇಟ್ಟುಕೊಂಡು ಸಮಿತಿ ವರದಿ ನೀಡಬೇಕು ಎಂದು ತಿಳಿಸಿದರು. </p>.<p>ಸಮಿತಿಯ ಸದಸ್ಯರಾದ ಡಾ.ಎಸ್.ಟಿ.ಬಾಗಲಕೋಟೆ ಮಾತನಾಡಿ, ಶಿಕ್ಷಣ, ಆರೋಗ್ಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ ವಲಯಗಳು ಸೇರಿದಂತೆ ವಿವಿಧ ಮಾನದಂಡಗಳ ಆಧಾರ ಮೇಲೆ ಹಿಂದುಳಿದ ತಾಲ್ಲೂಕುಗಳ ಅಬಿವೃದ್ದಿಗೆ ಅಗತ್ಯ ಸೌಲಭ್ಯ ಒದಗಿಸಲು ರಾಜ್ಯಾದ್ಯಂತ ಅಧ್ಯಯನ ಕೈಗೊಂಡಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ ಎಂದರು.</p>.<p>ವಿಜಯಪುರ ಜಿಲ್ಲೆ ಒಳಗೊಂಡಂತೆ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಿತಿ ಅಧ್ಯಯನ ಪೂರ್ಣಗೊಂಡಿದೆ. ಡಾ.ಡಿ.ಎಂ.ನಂಜುಡಪ್ಪ ವರದಿ ಅನುಷ್ಠಾನದಲ್ಲಿ ಆದ ಅಭಿವೃದ್ದಿ ಮತ್ತು ಬದಲಾವಣೆಯ ವಿಷಯಗಳ ಅಧ್ಯಯನ ಮಾಡಿ ಅದಕ್ಕೆ ಪೂರಕವಾಗಿ ಅಸಮತೋಲನ ನಿವಾರಣೆಗೆ ಅಗತ್ಯ ಇರುವ ಅಂಶಗಳ ಸಂಗ್ರಹಿಸಿ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.</p>.<p>ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ.ವಿಶಾಲ್ ಆರ್. ಮಾತನಾಡಿ, ವಿಜಯಪುರ ಕೃಷಿ ಅವಲಂಬಿತ ಜಿಲ್ಲೆಯಾಗಿದ್ದು, ಕೃಷಿ ಸಂಸ್ಕರಣೆ, ಸೇವಾವಲಯದಲ್ಲಿ ಕೌಶಲಾಭಿವೃದ್ದಿಗೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವುದರ ಜೊತೆಗೆ ಜಿಲ್ಲೆಯಲ್ಲಿ ಮುಖ್ಯವಾಗಿರುವ ಪ್ರವಾಸೋದ್ಯಮ ಬೆಳವಣಿಗೆ ಸಂಬಂಧ ಸಮಿತಿಯು ಜಿಲ್ಲೆಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದರು. </p>.<p>ಸಮಿತಿಯು ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಅಗತ್ಯ ಇರುವ ತಜ್ಞ ವೈದ್ಯರ ಕೊರತೆ, ಅಂಗನವಾಡಿ ಕಟ್ಟಡಗಳ ನಿರ್ಮಾಣ ಸೇರಿದಂತೆ ತೋಟಗಾರಿಕೆ ಇಲಾಖೆ, ಕೌಶಲಾಭಿವೃದ್ದಿ ಇಲಾಖೆಗಳ ಅಗತ್ಯ ಮಾಹಿತಿ ಪಡೆದುಕೊಂಡರು.</p>.<p>ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯಕ್ಕಾಗಿ ಮಹಿಳಾ ವಿವಿಯ ರಿಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರ ಕೋರಿಕೆಗೆ ಸಕಾರತ್ಮಕವಾಗಿ ಸ್ಪಂದಿಸಿ, ಮಹಿಳಾ ಸಬಲೀಕರಣಕ್ಕೆ ಒತ್ತು ಹಾಗೂ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಈ ಅಗತ್ಯತೆಯನ್ನು ಸಮಿತಿ ಗಮನಿಸಿದೆ ಎಂದು ಹೇಳಿದರು.</p>.<p>ಸಭೆಯಲ್ಲಿ ಸಮಿತಿಯ ಸದಸ್ಯರಾದ ಸಂಗೀತಾ ಎನ್.ಕೆ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿ.ಪಂ. ಉಪ ಕಾರ್ಯದರ್ಶಿ ವಿಜಯಕುಮಾರ್ ಆಜೂರ ಉಪಸ್ಥಿತರಿದ್ದರು. </p>.<div><blockquote>ಸರ್ಕಾರದ ಯೋಜನೆಗಳ ಲಾಭ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತಾಗಲು ಅಧಿಕಾರಿಗಳು ಬದ್ದತೆಯಿಂದ ಕಾರ್ಯನಿರ್ವಹಿಸಬೇಕು </blockquote><span class="attribution">ಅಶೋಕ ಮನಗೂಳಿ ಶಾಸಕ ಸಿಂದಗಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>