<p><strong>ವಿಜಯಪುರ:</strong> ಜಿಲ್ಲೆಯಲ್ಲಿ ದಾಖಲಾಗುವ ಯಾವುದೇ ಬಾಲ್ಯವಿವಾಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೂಡಲೇ ಕ್ರಮವಹಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಹೇಳಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಭೇಟಿ ಬಚಾವೋ, ಭೇಟಿ ಫಡಾವೋ ಯೋಜನೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಾಲ್ಯವಿವಾಹ ಪ್ರಕರಣಗಳ ಕುರಿತು ದೂರುಗಳು ಬಂದಲ್ಲಿ, ಕೂಡಲೇ ಕ್ರಮವಹಿಸಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳುವಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಪಾತ್ರವೂ ಬಹಳ ಮುಖ್ಯವಾಗಿದ್ದು, ಶಿಕ್ಷಕರು ಹಾಗೂ ಅಧಿಕಾರಿಗಳು ಈ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.</p>.<p>ಬಾಲ್ಯವಿವಾಹ ಸೇರಿದಂತೆ ಹೆಣ್ಣು ಮಕ್ಕಳು ಕಾಣೆಯಾದ ಪ್ರಕರಣಗಳ ಬಗ್ಗೆಯೂ ಹೆಚ್ಚಿನ ಗಮನ ವಹಿಸಿ, ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.</p>.<p>ಹೆಣ್ಣು ಮಕ್ಕಳು ಕಾಣೆಯಾದ ವಿಷಯಕ್ಕೆ ಸಂಬಂಧಪಟ್ಟಂತೆ ಕೂಡಲೇ ಪ್ರಕರಣ ದಾಖಲಾಗಬೇಕು. ಈ ಕುರಿತು ನಿಗದಿತ ಸಮಯದೊಳಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.</p>.<p>ಪ್ರಕರಣದಲ್ಲಿ ಸಂತ್ರಸ್ತರಾದವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು, ದೂರು ದಾಖಲಿಸುವುದಕ್ಕಿಂತ ಅವರು ಇದ್ದ ಸ್ಥಳದಿಂದಲೇ ದೂರು ದಾಖಲಿಸಿಕೊಂಡು ಮುಂದಿನ ಅಗತ್ಯ ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದರು.</p>.<p>ಬಾಲ್ಯವಿವಾಹಗಳ ಪ್ರಕರಣದ ಕುರಿತು ಸಂಬಂಧಪಟ್ಟ ಎಲ್ಲರಿಗೂ ವಿಷಯ ತಲುಪುವ ನಿಟ್ಟಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಸೇರ್ಪಡೆಗೊಳಿಸಿ, ಈ ಮೂಲಕವೂ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಎಂದು ಸಲಹೆ ನೀಡಿದರು.</p>.<p>ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಹಿತ ಕಾಯಲು ಸರ್ವಸನ್ನದ್ಧರಾಗಬೇಕು. ಈ ವಿಷಯದಲ್ಲಿ ಯಾರೂ ಕೂಡ ಬೇಜವಾಬ್ದಾರಿಯುತವಾಗಿ ವರ್ತಿಸಬಾರದು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ, ಮಕ್ಕಳ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಕೂಡಲೇ ಪರಿಹರಿಸಿ, ಈ ವಿಷಯದಲ್ಲಿ ವಿಳಂಬ ಮಾಡಬಾರದು ಎಂದು ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ ಚವ್ಹಾಣ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಂಘ, ಸಂಸ್ಥೆಗಳ ಮುಖ್ಯಸ್ಥರುಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯಲ್ಲಿ ದಾಖಲಾಗುವ ಯಾವುದೇ ಬಾಲ್ಯವಿವಾಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೂಡಲೇ ಕ್ರಮವಹಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಹೇಳಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಸರ್ಕಾರದ ಭೇಟಿ ಬಚಾವೋ, ಭೇಟಿ ಫಡಾವೋ ಯೋಜನೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಾಲ್ಯವಿವಾಹ ಪ್ರಕರಣಗಳ ಕುರಿತು ದೂರುಗಳು ಬಂದಲ್ಲಿ, ಕೂಡಲೇ ಕ್ರಮವಹಿಸಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳುವಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಪಾತ್ರವೂ ಬಹಳ ಮುಖ್ಯವಾಗಿದ್ದು, ಶಿಕ್ಷಕರು ಹಾಗೂ ಅಧಿಕಾರಿಗಳು ಈ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.</p>.<p>ಬಾಲ್ಯವಿವಾಹ ಸೇರಿದಂತೆ ಹೆಣ್ಣು ಮಕ್ಕಳು ಕಾಣೆಯಾದ ಪ್ರಕರಣಗಳ ಬಗ್ಗೆಯೂ ಹೆಚ್ಚಿನ ಗಮನ ವಹಿಸಿ, ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಸಂಬಂಧಪಟ್ಟ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.</p>.<p>ಹೆಣ್ಣು ಮಕ್ಕಳು ಕಾಣೆಯಾದ ವಿಷಯಕ್ಕೆ ಸಂಬಂಧಪಟ್ಟಂತೆ ಕೂಡಲೇ ಪ್ರಕರಣ ದಾಖಲಾಗಬೇಕು. ಈ ಕುರಿತು ನಿಗದಿತ ಸಮಯದೊಳಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.</p>.<p>ಪ್ರಕರಣದಲ್ಲಿ ಸಂತ್ರಸ್ತರಾದವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು, ದೂರು ದಾಖಲಿಸುವುದಕ್ಕಿಂತ ಅವರು ಇದ್ದ ಸ್ಥಳದಿಂದಲೇ ದೂರು ದಾಖಲಿಸಿಕೊಂಡು ಮುಂದಿನ ಅಗತ್ಯ ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದರು.</p>.<p>ಬಾಲ್ಯವಿವಾಹಗಳ ಪ್ರಕರಣದ ಕುರಿತು ಸಂಬಂಧಪಟ್ಟ ಎಲ್ಲರಿಗೂ ವಿಷಯ ತಲುಪುವ ನಿಟ್ಟಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಸೇರ್ಪಡೆಗೊಳಿಸಿ, ಈ ಮೂಲಕವೂ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಎಂದು ಸಲಹೆ ನೀಡಿದರು.</p>.<p>ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಹಿತ ಕಾಯಲು ಸರ್ವಸನ್ನದ್ಧರಾಗಬೇಕು. ಈ ವಿಷಯದಲ್ಲಿ ಯಾರೂ ಕೂಡ ಬೇಜವಾಬ್ದಾರಿಯುತವಾಗಿ ವರ್ತಿಸಬಾರದು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಣ್ಣ ಹೊಸಮನಿ, ಮಕ್ಕಳ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಕೂಡಲೇ ಪರಿಹರಿಸಿ, ಈ ವಿಷಯದಲ್ಲಿ ವಿಳಂಬ ಮಾಡಬಾರದು ಎಂದು ಹೇಳಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ ಚವ್ಹಾಣ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಂಘ, ಸಂಸ್ಥೆಗಳ ಮುಖ್ಯಸ್ಥರುಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>