<p>ತಾಳಿಕೋಟೆ: ‘ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಅವರು ಸದಾ ಸ್ಮರಣೀಯರಾಗಿದ್ದಾರೆ. ಅವರ ಇಡೀ ಬದುಕು ಹೋರಾಟದಿಂದ ಕೂಡಿದೆ. ಕೇವಲ ಜಯಂತಿ ಆಚರಿಸಿದರೆ ಸಾಲದು ಅವರ ಬದುಕಿನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು</p>.<p>ಶಿಕ್ಷಕಿ, ಸಾಹಿತಿ ಮಡಿವಾಳಮ್ಮ ಎಸ್.ಜಿ. ನಾಡಗೌಡ, ತಹಶೀಲ್ದಾರ್ ಗ್ರೇಡ್-2 ಪ್ರದೀಪ ದೇವಗಿರಿಕರ್, ಸಮಾಜದ ಮುಖಂಡರಾದ ಡಿ.ಬಿ.ಹಾದಿಮನಿ, ಗೋಪಾಲ ಕಟ್ಟಿಮನಿ ಹಾಗೂ ರಾಮಣ್ಣ ಕಟ್ಟಿಮನಿ ಮಾತನಾಡಿದರು.</p>.<p>ತಾ.ಪಂ. ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಡಾ.ಶ್ರೀಶೈಲ ಹುಕ್ಕೇರಿ, ಶಿವಲಿಂಗಪ್ಪ ಹಚಡದ, ಮಹೇಶ ಜೋಶಿ, ರಾಜು ವಿಜಾಪುರ, ಯಮನಪ್ಪ ಕಟ್ಟಿಮನಿ, ಬಸ್ಸು ಮಾದರ, ಸಂಜೀವಪ್ಪ ಬರದೇನಾಳ, ಮಾದೇವ ಚಟ್ನಳ್ಳಿ , ದೇವಪ್ಪ ಮಾದರ, ಶೇಕಪ್ಪ ಹೋಳಗಿ, ಕಾಳಪ್ಪ ಮಾದರ, ಶಿವಪ್ಪ ಕಟ್ಟಿಮನಿ, ಪರಶುರಾಮ ಮಾದರ, ಬಾಗಪ್ಪ ಮಸ್ಕನಾಳ, ದ್ಯಾಮಣ್ಣ ಸೋಮನಾಳ, ಯಮನಪ್ಪ ಕೆಸರಟ್ಟಿ ಇದ್ದರು.</p>.<p>ಕಳೆದ ವರ್ಷ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಹಾಗೂ ಚೊಕಾವಿ ಗ್ರಾಮದ ಪ್ರಗತಿಪರ ರೈತ ಹಣಮಂತ್ರಾಯ ನಾಟಿಕರ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಡಾ.ಬಾಬು ಜಗಜೀವನರಾಂ ಚಿತ್ರದ ಮೆರವಣಿಗೆ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-26-1735771311</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ‘ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಅವರು ಸದಾ ಸ್ಮರಣೀಯರಾಗಿದ್ದಾರೆ. ಅವರ ಇಡೀ ಬದುಕು ಹೋರಾಟದಿಂದ ಕೂಡಿದೆ. ಕೇವಲ ಜಯಂತಿ ಆಚರಿಸಿದರೆ ಸಾಲದು ಅವರ ಬದುಕಿನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ಬಿ.ದಮ್ಮೂರಮಠ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು</p>.<p>ಶಿಕ್ಷಕಿ, ಸಾಹಿತಿ ಮಡಿವಾಳಮ್ಮ ಎಸ್.ಜಿ. ನಾಡಗೌಡ, ತಹಶೀಲ್ದಾರ್ ಗ್ರೇಡ್-2 ಪ್ರದೀಪ ದೇವಗಿರಿಕರ್, ಸಮಾಜದ ಮುಖಂಡರಾದ ಡಿ.ಬಿ.ಹಾದಿಮನಿ, ಗೋಪಾಲ ಕಟ್ಟಿಮನಿ ಹಾಗೂ ರಾಮಣ್ಣ ಕಟ್ಟಿಮನಿ ಮಾತನಾಡಿದರು.</p>.<p>ತಾ.ಪಂ. ಇಒ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಡಾ.ಶ್ರೀಶೈಲ ಹುಕ್ಕೇರಿ, ಶಿವಲಿಂಗಪ್ಪ ಹಚಡದ, ಮಹೇಶ ಜೋಶಿ, ರಾಜು ವಿಜಾಪುರ, ಯಮನಪ್ಪ ಕಟ್ಟಿಮನಿ, ಬಸ್ಸು ಮಾದರ, ಸಂಜೀವಪ್ಪ ಬರದೇನಾಳ, ಮಾದೇವ ಚಟ್ನಳ್ಳಿ , ದೇವಪ್ಪ ಮಾದರ, ಶೇಕಪ್ಪ ಹೋಳಗಿ, ಕಾಳಪ್ಪ ಮಾದರ, ಶಿವಪ್ಪ ಕಟ್ಟಿಮನಿ, ಪರಶುರಾಮ ಮಾದರ, ಬಾಗಪ್ಪ ಮಸ್ಕನಾಳ, ದ್ಯಾಮಣ್ಣ ಸೋಮನಾಳ, ಯಮನಪ್ಪ ಕೆಸರಟ್ಟಿ ಇದ್ದರು.</p>.<p>ಕಳೆದ ವರ್ಷ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಹಾಗೂ ಚೊಕಾವಿ ಗ್ರಾಮದ ಪ್ರಗತಿಪರ ರೈತ ಹಣಮಂತ್ರಾಯ ನಾಟಿಕರ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಡಾ.ಬಾಬು ಜಗಜೀವನರಾಂ ಚಿತ್ರದ ಮೆರವಣಿಗೆ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260406-26-1735771311</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>