<p><strong>ತಾಳಿಕೋಟೆ</strong>: ಸಮೀಪದ ಡೋಣಿ ನದಿಯಲ್ಲಿ ಬುಧವಾರ ಯುವಕರಿಬ್ಬರು ಬೈಕ್ ಸಮೇತ ಕೊಚ್ಚಿ ಹೋದ ಸೇತುವೆ ಬಳಿಗೆ ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಗುರುವಾರ ಭೇಟಿ ನೀಡಿದರು.</p>.<p>ತಾಳಿಕೋಟೆಗೆ ಬಂದಿದ್ದ ವಡವಡಗಿ ಗ್ರಾಮದ ಯುವಕರಿಬ್ಬರು ಮರಳಿ ಹೋಗುವಾಗ ಡೋಣಿ ಸೇತುವೆ ಮೇಲಿನ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದರು. ಅವರಲ್ಲಿ ಮಹಾಂತೇಶ ಮಲ್ಲನಗೌಡ ಹೊಸಗೌಡರನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಯುವಕ ಸಂತೋಷ ಹಡಪದ (28) ಇನ್ನೂ ಪತ್ತೆಯಾಗಿಲ್ಲ.</p>.<p>ಶೋಧ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಮಾಹಿತಿ ಪಡೆದ ನಡಹಳ್ಳಿ ಅವರು, ಪ್ರವಾಹದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಜೀವ ರಕ್ಷಕ ಸೌಲಭ್ಯಗಳ ವ್ಯವಸ್ಥೆ ಹಾಗೂ ತಕ್ಷಣದ ಪರಿಹಾರ ಒದಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಆಗ್ರಹಿಸಿದರು.</p>.<p>ಸ್ಥಳದಲ್ಲಿಯೇ ಬೀಡುಬಿಟ್ಟಿರುವ ಯುವಕನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ತಾಲ್ಲೂಕು ಆಡಳಿತ ತುರ್ತು ಜವಾಬ್ದಾರಿ ವಹಿಸಬೇಕು ಎಂದರು.</p>.<p>ತಹಶೀಲ್ದಾರ್ ಡಾ.ವಿನಯಾ ಹೂಗಾರ, ಪಿಎಸೈ ಜ್ಯೋತಿ ಖೋತ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿ, ಪುರಸಭೆ ಸದಸ್ಯ ವಾಸುದೇವ ಹೆಬಸೂರ ಮತ್ತು, ನಿಂಗನಗೌಡ ಕುಂಟೋಜಿ, ಕಳಕೂಸಾ ರಂಗರೇಜ, ಶಿವಶಂಕರ ಹಿರೇಮಠ, ಡಿ.ಕೆ.ಪಾಟೀಲ, ಜಗದೀಶ ಬಿಳೇಭಾವಿ, ಪ್ರಭು ಬಿಳೇಭಾವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ</strong>: ಸಮೀಪದ ಡೋಣಿ ನದಿಯಲ್ಲಿ ಬುಧವಾರ ಯುವಕರಿಬ್ಬರು ಬೈಕ್ ಸಮೇತ ಕೊಚ್ಚಿ ಹೋದ ಸೇತುವೆ ಬಳಿಗೆ ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಗುರುವಾರ ಭೇಟಿ ನೀಡಿದರು.</p>.<p>ತಾಳಿಕೋಟೆಗೆ ಬಂದಿದ್ದ ವಡವಡಗಿ ಗ್ರಾಮದ ಯುವಕರಿಬ್ಬರು ಮರಳಿ ಹೋಗುವಾಗ ಡೋಣಿ ಸೇತುವೆ ಮೇಲಿನ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದರು. ಅವರಲ್ಲಿ ಮಹಾಂತೇಶ ಮಲ್ಲನಗೌಡ ಹೊಸಗೌಡರನನ್ನು ರಕ್ಷಿಸಲಾಗಿದ್ದು ಇನ್ನೊಬ್ಬ ಯುವಕ ಸಂತೋಷ ಹಡಪದ (28) ಇನ್ನೂ ಪತ್ತೆಯಾಗಿಲ್ಲ.</p>.<p>ಶೋಧ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಮಾಹಿತಿ ಪಡೆದ ನಡಹಳ್ಳಿ ಅವರು, ಪ್ರವಾಹದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ಜೀವ ರಕ್ಷಕ ಸೌಲಭ್ಯಗಳ ವ್ಯವಸ್ಥೆ ಹಾಗೂ ತಕ್ಷಣದ ಪರಿಹಾರ ಒದಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಆಗ್ರಹಿಸಿದರು.</p>.<p>ಸ್ಥಳದಲ್ಲಿಯೇ ಬೀಡುಬಿಟ್ಟಿರುವ ಯುವಕನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ತಾಲ್ಲೂಕು ಆಡಳಿತ ತುರ್ತು ಜವಾಬ್ದಾರಿ ವಹಿಸಬೇಕು ಎಂದರು.</p>.<p>ತಹಶೀಲ್ದಾರ್ ಡಾ.ವಿನಯಾ ಹೂಗಾರ, ಪಿಎಸೈ ಜ್ಯೋತಿ ಖೋತ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿ, ಪುರಸಭೆ ಸದಸ್ಯ ವಾಸುದೇವ ಹೆಬಸೂರ ಮತ್ತು, ನಿಂಗನಗೌಡ ಕುಂಟೋಜಿ, ಕಳಕೂಸಾ ರಂಗರೇಜ, ಶಿವಶಂಕರ ಹಿರೇಮಠ, ಡಿ.ಕೆ.ಪಾಟೀಲ, ಜಗದೀಶ ಬಿಳೇಭಾವಿ, ಪ್ರಭು ಬಿಳೇಭಾವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>