<p><strong>ತಾಳಿಕೋಟೆ</strong>: ಮಳೆಯಿಂದಾಗಿ ಪಟ್ಟಣದ ಮೂಲಕ ಹಾಯ್ದುಹೋಗುವ ರಾಜ್ಯ ಹೆದ್ದಾರಿಯಲ್ಲಿರುವ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಟೀಷರ ಕಾಲದ ಸೇತುವೆ ಸೋಮವಾರವೂ ಜಲಾವೃತವಾಗಿದ್ದು ಕಳೆದ ಐದು ದಿನಗಳಿಂದ ರಸ್ತೆ ಸಂಪರ್ಕ ಸ್ಥಗಿತವಾಗಿದೆ.</p>.<p>ಈ ಹಿನ್ನೆಲೆಯಲ್ಲಿ ಡೋಣಿ ನದಿಗೆ ಅಡ್ಡಲಾಗಿ ಹಡಗಿನಾಳ ಮಾರ್ಗದಲ್ಲಿ ನಿರ್ಮಿಸಿರುವ ಮೇಲು ಸೇತುವೆ ಬಳಸಿ ಮೂಕಿಹಾಳ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ವಿಜಯಪುರ, ಬಸವನಬಾಗೇವಾಡಿ ಸುತ್ತಮುತ್ತಲ ಊರುಗಳಿಗೆ ಹೋಗಲು 15ಕಿಮೀ ಸುತ್ತುಹಾಕಿ ಹೋಗುವುದು ಮುಂದುವರೆದಿದೆ.</p>.<p>ವಾಹನಗಳ ದಟ್ಟಣೆಯಿಂದ ಮೂಕಿಹಾಳ ಸೋಗಲಿ ಹಳ್ಳದ ಸೇತುವೆ ಬಳಿ ಅಪಾಯಕಾರಿಯಾಗುವಂತಹ ಆಳದ ಹೊಂಡಗಳಾಗಿದ್ದು ಸ್ವಲ್ಪ ಜಾಗರೂಕತೆ ತಪ್ಪಿದರೂ ವಾಹನ ಪಲ್ಟಿಯಾಗುವ ಸಾಧ್ಯತೆಗಳಿವೆ ಎಂದಯ ಮಿಣಜಗಿ ಗ್ರಾಮದ ಪ್ರಮುಖ ಬಸನಗೌಡ ಬಾಗೇವಾಡಿ ಆತಂಕ ವ್ಯಕ್ತಪಡಿಸಿದರು.</p>.<p>ಮೂಕಿಹಾಳ ಬಳಿಯ ಸೋಗಲಿ ಹಳ್ಳವು ಸಹ ಪದೇಪದೇ ಪ್ರವಾಹದ ನೀರಿನಲ್ಲಿ ಮುಳುಗಡೆಯಾಗುತ್ತಿದೆ. ಆದ್ದರಿಂದ ಈ ಸೇತುವೆಯನ್ನು ಮೇಲುಸೇತುವೆಯಾಗಿ ನಿರ್ಮಿಸಬೇಕು ಎಂದು ಮೂಕಿಹಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಚ್.ಪಾಟೀಲ ಒತ್ತಾಯಿಸಿದರು. ಹೊಸಸೇತುವೆ ನಿರ್ಮಾಣದವರೆಗೆ ತಾಳಿಕೋಟೆ ಸಂಪರ್ಕಿಸುವ ಎರಡು ಮಾರ್ಗಗಳಲ್ಲಿ ಕನಿಷ್ಠ ಒಂದಾದರೂ ಸಂಚಾರಕ್ಕೆ ಲಭ್ಯವಾಗುತ್ತದೆ ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ</strong>: ಮಳೆಯಿಂದಾಗಿ ಪಟ್ಟಣದ ಮೂಲಕ ಹಾಯ್ದುಹೋಗುವ ರಾಜ್ಯ ಹೆದ್ದಾರಿಯಲ್ಲಿರುವ ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಟೀಷರ ಕಾಲದ ಸೇತುವೆ ಸೋಮವಾರವೂ ಜಲಾವೃತವಾಗಿದ್ದು ಕಳೆದ ಐದು ದಿನಗಳಿಂದ ರಸ್ತೆ ಸಂಪರ್ಕ ಸ್ಥಗಿತವಾಗಿದೆ.</p>.<p>ಈ ಹಿನ್ನೆಲೆಯಲ್ಲಿ ಡೋಣಿ ನದಿಗೆ ಅಡ್ಡಲಾಗಿ ಹಡಗಿನಾಳ ಮಾರ್ಗದಲ್ಲಿ ನಿರ್ಮಿಸಿರುವ ಮೇಲು ಸೇತುವೆ ಬಳಸಿ ಮೂಕಿಹಾಳ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ವಿಜಯಪುರ, ಬಸವನಬಾಗೇವಾಡಿ ಸುತ್ತಮುತ್ತಲ ಊರುಗಳಿಗೆ ಹೋಗಲು 15ಕಿಮೀ ಸುತ್ತುಹಾಕಿ ಹೋಗುವುದು ಮುಂದುವರೆದಿದೆ.</p>.<p>ವಾಹನಗಳ ದಟ್ಟಣೆಯಿಂದ ಮೂಕಿಹಾಳ ಸೋಗಲಿ ಹಳ್ಳದ ಸೇತುವೆ ಬಳಿ ಅಪಾಯಕಾರಿಯಾಗುವಂತಹ ಆಳದ ಹೊಂಡಗಳಾಗಿದ್ದು ಸ್ವಲ್ಪ ಜಾಗರೂಕತೆ ತಪ್ಪಿದರೂ ವಾಹನ ಪಲ್ಟಿಯಾಗುವ ಸಾಧ್ಯತೆಗಳಿವೆ ಎಂದಯ ಮಿಣಜಗಿ ಗ್ರಾಮದ ಪ್ರಮುಖ ಬಸನಗೌಡ ಬಾಗೇವಾಡಿ ಆತಂಕ ವ್ಯಕ್ತಪಡಿಸಿದರು.</p>.<p>ಮೂಕಿಹಾಳ ಬಳಿಯ ಸೋಗಲಿ ಹಳ್ಳವು ಸಹ ಪದೇಪದೇ ಪ್ರವಾಹದ ನೀರಿನಲ್ಲಿ ಮುಳುಗಡೆಯಾಗುತ್ತಿದೆ. ಆದ್ದರಿಂದ ಈ ಸೇತುವೆಯನ್ನು ಮೇಲುಸೇತುವೆಯಾಗಿ ನಿರ್ಮಿಸಬೇಕು ಎಂದು ಮೂಕಿಹಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಚ್.ಪಾಟೀಲ ಒತ್ತಾಯಿಸಿದರು. ಹೊಸಸೇತುವೆ ನಿರ್ಮಾಣದವರೆಗೆ ತಾಳಿಕೋಟೆ ಸಂಪರ್ಕಿಸುವ ಎರಡು ಮಾರ್ಗಗಳಲ್ಲಿ ಕನಿಷ್ಠ ಒಂದಾದರೂ ಸಂಚಾರಕ್ಕೆ ಲಭ್ಯವಾಗುತ್ತದೆ ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>