<p>ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ನಿರ್ಮಾಣ ಸಾರ್ವಜನಿಕರಿಗೆ ದೂರವಾಗುತ್ತದೆಂದು ಪಟ್ಟಣದ ವ್ಯಾಪ್ತಿಯಲ್ಲಿಯೇ ಕಟ್ಟಡ ನಿರ್ಮಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಶುಕ್ರವಾರಕ್ಕೆ 59 ದಿನಗಳನ್ನು ಪೂರೈಸಿತು.</p>.<p>ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ ಮಲ್ಲಿಕಾರ್ಜುನ ಬಂಗ್ಲೆ ಮಾತನಾಡಿ,ಜನಪರ ಹೋರಾಟಗಳನ್ನು ಕಾನೂನು ಬಳಸಿ ಹತ್ತಿಕ್ಕಲಾಗದು ಎಂದರು.</p>.<p>‘ಶಾಸಕರು ಸ್ಥಳಕ್ಕೆ ಬಂದು ಸೌಹಾರ್ದಯುತವಾಗಿ ಮಾತನಾಡಿ, ಹತ್ತಿರದ ಸರ್ಕಾರಿ ಸ್ಥಳದಲ್ಲಿಯೇ ಪ್ರಜಾಸೌಧ ನಿರ್ಮಿಸಿಕೊಡಿ, ನಾವೆಲ್ಲ ಹೋರಾಟಗಾರರ ಜೊತೆ ನಿಲ್ಲುತ್ತಿದ್ದೇವೆ. ಉಪವಾಸ ಸತ್ಯಾಗ್ರಹ ನಡೆದರೆ ನಾವೂ ಭಾಗವಹಿಸುತ್ತೇವೆ’ ಎಂದು ಹೇಳಿದರು.</p>.<p>ಇವರೊಂದಿಗೆ ರಾಜ್ಯ ಉಪಾಧ್ಯಕ್ಷ ಎಸ್.ಎಸ್.ಪಾಟೀಲ ಧಾರವಾಡ ಜಿಲ್ಲಾಧ್ಯಕ್ಷ ಸಂಗನಗೌಡ ಹೂವನ್ನವರ, ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದು, ಜಿಲ್ಲಾ ಉಪಾಧ್ಯಕ್ಷ ಸಿದ್ದು ಕಲ್ಲೂರ, ಬಸವರಾಜ ಪಡಶೆಟ್ಟಿ, ಅಶೋಕ ಕಲ್ಯಾಣಶೆಟ್ಟಿ ಹಾಗೂ ಹೋರಾಟ ಸಮಿತಿಯವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-3156817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ತಾಲ್ಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ನಿರ್ಮಾಣ ಸಾರ್ವಜನಿಕರಿಗೆ ದೂರವಾಗುತ್ತದೆಂದು ಪಟ್ಟಣದ ವ್ಯಾಪ್ತಿಯಲ್ಲಿಯೇ ಕಟ್ಟಡ ನಿರ್ಮಿಸಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಶುಕ್ರವಾರಕ್ಕೆ 59 ದಿನಗಳನ್ನು ಪೂರೈಸಿತು.</p>.<p>ಹೋರಾಟದಲ್ಲಿ ಭಾಗವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ ಮಲ್ಲಿಕಾರ್ಜುನ ಬಂಗ್ಲೆ ಮಾತನಾಡಿ,ಜನಪರ ಹೋರಾಟಗಳನ್ನು ಕಾನೂನು ಬಳಸಿ ಹತ್ತಿಕ್ಕಲಾಗದು ಎಂದರು.</p>.<p>‘ಶಾಸಕರು ಸ್ಥಳಕ್ಕೆ ಬಂದು ಸೌಹಾರ್ದಯುತವಾಗಿ ಮಾತನಾಡಿ, ಹತ್ತಿರದ ಸರ್ಕಾರಿ ಸ್ಥಳದಲ್ಲಿಯೇ ಪ್ರಜಾಸೌಧ ನಿರ್ಮಿಸಿಕೊಡಿ, ನಾವೆಲ್ಲ ಹೋರಾಟಗಾರರ ಜೊತೆ ನಿಲ್ಲುತ್ತಿದ್ದೇವೆ. ಉಪವಾಸ ಸತ್ಯಾಗ್ರಹ ನಡೆದರೆ ನಾವೂ ಭಾಗವಹಿಸುತ್ತೇವೆ’ ಎಂದು ಹೇಳಿದರು.</p>.<p>ಇವರೊಂದಿಗೆ ರಾಜ್ಯ ಉಪಾಧ್ಯಕ್ಷ ಎಸ್.ಎಸ್.ಪಾಟೀಲ ಧಾರವಾಡ ಜಿಲ್ಲಾಧ್ಯಕ್ಷ ಸಂಗನಗೌಡ ಹೂವನ್ನವರ, ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದು, ಜಿಲ್ಲಾ ಉಪಾಧ್ಯಕ್ಷ ಸಿದ್ದು ಕಲ್ಲೂರ, ಬಸವರಾಜ ಪಡಶೆಟ್ಟಿ, ಅಶೋಕ ಕಲ್ಯಾಣಶೆಟ್ಟಿ ಹಾಗೂ ಹೋರಾಟ ಸಮಿತಿಯವರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-3156817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>