<p>ತಾಳಿಕೋಟೆ: ಪಟ್ಟಣದ ನಿವೃತ್ತ ಶಿಕ್ಷಕ ಜಿ.ಎಸ್.ಜಮ್ಮಲದಿನ್ನಿ ದಂಪತಿ ತಮ್ಮ 40ನೇ ವಿವಾಹ ವಾರ್ಷಿಕೋತ್ಸವವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾರೆ.</p>.<p>ವಿಶ್ವ ಕಾರ್ಮಿಕ ದಿನದಂದೇ ತಮ್ಮ 40ನೇ ವಿವಾಹ ವಾರ್ಷಿಕೋತ್ಸವ ಕೂಡಿ ಬಂದಿರುವುದರಿಂದ ಈ ಮಹತ್ವದ ದಿನವನ್ನು ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷಿ ಕಾರ್ಮಿಕರು, ಪೌರಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರನ್ನು ಶುಕ್ರವಾರ ಗೌರವಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿದ್ದಾರೆ.</p>.<p>ಕಾಯಕ ನಂಬಿ ಬದುಕುತ್ತಿರುವ ಈ ಕ್ಷೇತ್ರದ ಎಂಟು ಜನ ಕಾಯಕಯೋಗಿಗಳನ್ನು ತಮ್ಮ ಮನೆಗೆ ಆಮಂತ್ರಿಸಿ ಅವರನ್ನು ಗೌರವಿಸಿ ಸನ್ಮಾನಿಸಿದ್ದಾರೆ. ಬಸವಾದಿ ಪ್ರಮಥರು ಕಾಯಕದಲ್ಲಿ ಕೈಲಾಸ ಕಂಡವರು, ಯಾವ ವೃತ್ತಿಯಾದರೂ ಚಿಕ್ಕದಲ್ಲ, ಅಗೌರವವಲ್ಲ, ಅದು ನ್ಯಾಯಸಮ್ಮತವಾಗಿರಬೇಕು ಎಂಬುದಾಗಿತ್ತು. ಅದರಂತೆ ಶ್ರಮಿಕರನ್ನು ನಮ್ಮ ವಿವಾಹ ವಾರ್ಷಿಕೋತ್ಸವದಂದು ಗೌರವಿಸಿದರೆ ಈ ದಿನದ ಮಹತ್ವ ಹೆಚ್ಚುತ್ತದೆ ಎಂದು ಜಿ.ಎಸ್. ಜಮ್ಮಲದಿನ್ನಿಯವರು ತಿಳಿಸಿದರು. ತನ್ಮೂಲಕ ಸಮಾಜದಲ್ಲಿ ಇತರರಿಗೂ ಮಾದರಿ ಕೆಲಸ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-26-1985148058</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ಪಟ್ಟಣದ ನಿವೃತ್ತ ಶಿಕ್ಷಕ ಜಿ.ಎಸ್.ಜಮ್ಮಲದಿನ್ನಿ ದಂಪತಿ ತಮ್ಮ 40ನೇ ವಿವಾಹ ವಾರ್ಷಿಕೋತ್ಸವವನ್ನು ಅತ್ಯಂತ ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾರೆ.</p>.<p>ವಿಶ್ವ ಕಾರ್ಮಿಕ ದಿನದಂದೇ ತಮ್ಮ 40ನೇ ವಿವಾಹ ವಾರ್ಷಿಕೋತ್ಸವ ಕೂಡಿ ಬಂದಿರುವುದರಿಂದ ಈ ಮಹತ್ವದ ದಿನವನ್ನು ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೃಷಿ ಕಾರ್ಮಿಕರು, ಪೌರಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರನ್ನು ಶುಕ್ರವಾರ ಗೌರವಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿದ್ದಾರೆ.</p>.<p>ಕಾಯಕ ನಂಬಿ ಬದುಕುತ್ತಿರುವ ಈ ಕ್ಷೇತ್ರದ ಎಂಟು ಜನ ಕಾಯಕಯೋಗಿಗಳನ್ನು ತಮ್ಮ ಮನೆಗೆ ಆಮಂತ್ರಿಸಿ ಅವರನ್ನು ಗೌರವಿಸಿ ಸನ್ಮಾನಿಸಿದ್ದಾರೆ. ಬಸವಾದಿ ಪ್ರಮಥರು ಕಾಯಕದಲ್ಲಿ ಕೈಲಾಸ ಕಂಡವರು, ಯಾವ ವೃತ್ತಿಯಾದರೂ ಚಿಕ್ಕದಲ್ಲ, ಅಗೌರವವಲ್ಲ, ಅದು ನ್ಯಾಯಸಮ್ಮತವಾಗಿರಬೇಕು ಎಂಬುದಾಗಿತ್ತು. ಅದರಂತೆ ಶ್ರಮಿಕರನ್ನು ನಮ್ಮ ವಿವಾಹ ವಾರ್ಷಿಕೋತ್ಸವದಂದು ಗೌರವಿಸಿದರೆ ಈ ದಿನದ ಮಹತ್ವ ಹೆಚ್ಚುತ್ತದೆ ಎಂದು ಜಿ.ಎಸ್. ಜಮ್ಮಲದಿನ್ನಿಯವರು ತಿಳಿಸಿದರು. ತನ್ಮೂಲಕ ಸಮಾಜದಲ್ಲಿ ಇತರರಿಗೂ ಮಾದರಿ ಕೆಲಸ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-26-1985148058</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>