<p><strong>ತಾಳಿಕೋಟೆ: ‘</strong>ಧರ್ಮ ಎಂದರೆ ಮತವಲ್ಲ, ಎಲ್ಲರಿಗೂ ಒಳಿತು ಮಾಡುವ ಗುಣಮೌಲ್ಯ. ಇದೇ ಈ ನಾಡಿನ ಮಹಾತ್ಮರ, ಸಂತರ, ಶರಣರ ಬದುಕಿನ ಆದರ್ಶಗಳಾಗಿದ್ದವು. ಅವುಗಳನ್ನು ಅಳವಡಿಸಿಕೊಂಡು ನಡೆದರೆ ತನಗೂ, ಎಲ್ಲರಿಗೂ ಸುಖ ಶಾಂತಿ ಹಾಗೂ ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನಾವದಗಿ ಗ್ರಾಮದ ಪರ್ವತೇಶ್ವರ ಬ್ರಹನ್ಮಠದ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರಹಮ್ಮಿಕೊಂಡಿದ್ದ ಗುಡ್ಡಾಪುರದ ದಾನಮ್ಮ ದೇವಿ ಪುರಾಣ ಮಹೋತ್ಸವದಲ್ಲಿ ತೊಟ್ಟಿಲೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಬದುಕು ಎಷ್ಟು ಶ್ರೀಮಂತವಾಗಿದೆ ಎನ್ನುವುದಕ್ಕಿಂತ ಎಷ್ಟು ನೆಮ್ಮದಿಯಿಂದ ಕೂಡಿದೆ ಎಂಬುದು ಮುಖ್ಯ. ಸದಾ ಅನ್ಯರ ಕುರಿತು ಚಿಂತಿಸದೆ ನಮ್ಮ ಕುರಿತು ಚಿಂತಿಸುವ ಅಗತ್ಯವಿದೆ. ಆಧ್ಯಾತ್ಮಿಕ ಬದುಕಿನೊಂದಿಗೆ ಸತ್ಯ, ಧರ್ಮದ ಮಾರ್ಗದಲ್ಲಿ ನಡೆದರೆ ಸುಖ ಶಾಂತಿ ದೊರಕುತ್ತದೆ’ ಎಂದರು.</p>.<p>‘ರಾಜೇಂದ್ರ ಒಡೆಯರ್ ಶಿವಾಚಾರ್ಯರು ಈ ಭಾಗದ ಭಕ್ತರನ್ನು ಸಂಸ್ಕರಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಧರ್ಮ ಜಾಗೃತಿ ಕಾರ್ಯ ಎಲ್ಲರಿಗೂ ಅನುಕರಣೀಯವಾಗಿದೆ. ಅವರ ಗುರು ಪಟ್ಟಾಧಿಕಾರದ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಗೊಳಿಸಿದಂತೆ ಅವರು ಮಾಡುವ ಎಲ್ಲ ಧರ್ಮ ಕಾರ್ಯಗಳಲ್ಲಿ ನಿಮ್ಮೆಲ್ಲರ ಸಹಕಾರ ಅವರೊಂದಿಗಿರಲಿ’ ಎಂದರು.</p>.<p>ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಸ್ವಾಮೀಜಿ, ಚಬನೂರಿನ ರಾಮಲಿಂಗಯ್ಯ ಸ್ವಾಮೀಜಿ, ಸಿಂಧನೂರಿನ ಗುರುಮೂರ್ತಯ್ಯ ಹಿರೇಮಠ, ಸಾಹಿತಿ ಬಸವರಾಜ ಗೊರಜಿ, ಪುರಾಣಿಕ ರಾಚಯ್ಯ ಹಿರೇಮಠ, ಸಂಗೀತಗಾರ ಸೋಮಯ್ಯ ಸ್ವಾಮಿ, ತಬಲವಾದಕ ಮಹಾಂತೇಶ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ: ‘</strong>ಧರ್ಮ ಎಂದರೆ ಮತವಲ್ಲ, ಎಲ್ಲರಿಗೂ ಒಳಿತು ಮಾಡುವ ಗುಣಮೌಲ್ಯ. ಇದೇ ಈ ನಾಡಿನ ಮಹಾತ್ಮರ, ಸಂತರ, ಶರಣರ ಬದುಕಿನ ಆದರ್ಶಗಳಾಗಿದ್ದವು. ಅವುಗಳನ್ನು ಅಳವಡಿಸಿಕೊಂಡು ನಡೆದರೆ ತನಗೂ, ಎಲ್ಲರಿಗೂ ಸುಖ ಶಾಂತಿ ಹಾಗೂ ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನಾವದಗಿ ಗ್ರಾಮದ ಪರ್ವತೇಶ್ವರ ಬ್ರಹನ್ಮಠದ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರ ಗುರು ಪಟ್ಟಾಧಿಕಾರದ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ಶುಕ್ರವಾರಹಮ್ಮಿಕೊಂಡಿದ್ದ ಗುಡ್ಡಾಪುರದ ದಾನಮ್ಮ ದೇವಿ ಪುರಾಣ ಮಹೋತ್ಸವದಲ್ಲಿ ತೊಟ್ಟಿಲೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಬದುಕು ಎಷ್ಟು ಶ್ರೀಮಂತವಾಗಿದೆ ಎನ್ನುವುದಕ್ಕಿಂತ ಎಷ್ಟು ನೆಮ್ಮದಿಯಿಂದ ಕೂಡಿದೆ ಎಂಬುದು ಮುಖ್ಯ. ಸದಾ ಅನ್ಯರ ಕುರಿತು ಚಿಂತಿಸದೆ ನಮ್ಮ ಕುರಿತು ಚಿಂತಿಸುವ ಅಗತ್ಯವಿದೆ. ಆಧ್ಯಾತ್ಮಿಕ ಬದುಕಿನೊಂದಿಗೆ ಸತ್ಯ, ಧರ್ಮದ ಮಾರ್ಗದಲ್ಲಿ ನಡೆದರೆ ಸುಖ ಶಾಂತಿ ದೊರಕುತ್ತದೆ’ ಎಂದರು.</p>.<p>‘ರಾಜೇಂದ್ರ ಒಡೆಯರ್ ಶಿವಾಚಾರ್ಯರು ಈ ಭಾಗದ ಭಕ್ತರನ್ನು ಸಂಸ್ಕರಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಧರ್ಮ ಜಾಗೃತಿ ಕಾರ್ಯ ಎಲ್ಲರಿಗೂ ಅನುಕರಣೀಯವಾಗಿದೆ. ಅವರ ಗುರು ಪಟ್ಟಾಧಿಕಾರದ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಗೊಳಿಸಿದಂತೆ ಅವರು ಮಾಡುವ ಎಲ್ಲ ಧರ್ಮ ಕಾರ್ಯಗಳಲ್ಲಿ ನಿಮ್ಮೆಲ್ಲರ ಸಹಕಾರ ಅವರೊಂದಿಗಿರಲಿ’ ಎಂದರು.</p>.<p>ರಾಜ ಗುರು ರಾಜೇಂದ್ರ ಒಡೆಯರ ಶಿವಾಚಾರ್ಯ ಸ್ವಾಮೀಜಿ, ಚಬನೂರಿನ ರಾಮಲಿಂಗಯ್ಯ ಸ್ವಾಮೀಜಿ, ಸಿಂಧನೂರಿನ ಗುರುಮೂರ್ತಯ್ಯ ಹಿರೇಮಠ, ಸಾಹಿತಿ ಬಸವರಾಜ ಗೊರಜಿ, ಪುರಾಣಿಕ ರಾಚಯ್ಯ ಹಿರೇಮಠ, ಸಂಗೀತಗಾರ ಸೋಮಯ್ಯ ಸ್ವಾಮಿ, ತಬಲವಾದಕ ಮಹಾಂತೇಶ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>