<p>ತಾಳಿಕೋಟೆ: ಮಹಾತ್ಮರು, ದಾರ್ಶನಿಕರು, ಶರಣರು ನಮ್ಮನ್ನು ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ತರುತ್ತಾರೆ. ಅವರ ಜೀವನ ಚರಿತ್ರೆ ತಿಳಿದುಕೊಳ್ಳುವ ಪ್ರಯತ್ನ ನಾವೆಲ್ಲರೂ ಮಾಡಬೇಕು. ಅವರ ಆದರ್ಶ ಬದುಕು ನಮಗೆ ದಾರಿದೀಪವಾಗಿದೆ ಎಂದು ನಾವದಗಿ ಬೃಹನ್ಮಠದ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಸುಕ್ಷೇತ್ರ ಶಳ್ಳಗಿ ಗ್ರಾಮದಲ್ಲಿ ಬಸವಂತ್ರಾಯ ಹಾಗೂ ಪರಮಣ್ಣ ಮುತ್ಯಾ ದೇವಸ್ಥಾನದ 2ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡ ಕಲ್ಬುರ್ಗಿ ಶರಣ ಬಸವೇಶ್ವರ ಪುರಾಣ ಪ್ರಾರಂಭೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>ಮಾಗಣಗೇರಿಯ ವಿಶ್ವರಾಧ್ಯ ಶಿವಾಚಾರ್ಯ ಸ್ವಾಮೀಜಿ, ಇಂತಹ ಪುರಾಣ ಪ್ರವಚನಗಳ ಮೂಲಕ ಮಹಾತ್ಮರ ಜೀವನವನ್ನು ತಿಳಿದುಕೊಳ್ಳುವುದರಿಂದ ಬದುಕು ಸಾರ್ಥಕವಾಗುತ್ತದೆ. ಜಾತ್ರೆ ಪುರಾಣ ಪ್ರವಚನಗಳು ನಮ್ಮ ಮಧ್ಯ ಪ್ರೀತಿ ವಿಶ್ವಾಸ ಹಾಗೂ ಭ್ರಾತೃತ್ವವನ್ನು ಬೆಳೆಸುತ್ತವೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಿ ಎಂದು ಸಲಹೆ ನೀಡಿದರು.</p>.<p>ಪುರಾಣಿಕ ವೇದ ಮೂರ್ತಿ ಬಸಯ್ಯ ಸೋಮಶೇಖರ ಮಠ(ಯಾಳಗಿ) ಅವರು ಮೊದಲು ದಿನದ ಪುರಾಣದಲ್ಲಿ ಶ್ರೀ ಶರಣ ಬಸವೇಶ್ವರರ ಬಾಲ್ಯದ ಕುರಿತು ವಿವರಿಸಿದರು. ವೇ.ಮೂ.ಮಲ್ಲಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು.</p>.<p>ಎಪಿಎಂಸಿ ಮಾಜಿ ಅಧ್ಯಕ್ಷ ಕೆ ಕೆ ನಾಡಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವೇದ ಮೂರ್ತಿ ಮಲ್ಲಯ್ಯಸ್ವಾಮಿ ಹಿರೇಮಠ, ಮಲ್ಲಯ್ಯ ಸ್ವಾಮಿ ಆರ್ ಮಠ, ಪರಮಣ್ಣ ಶರಣರು, ಕೆ ಸಿ ದೇಸಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-1973552867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾಳಿಕೋಟೆ: ಮಹಾತ್ಮರು, ದಾರ್ಶನಿಕರು, ಶರಣರು ನಮ್ಮನ್ನು ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ತರುತ್ತಾರೆ. ಅವರ ಜೀವನ ಚರಿತ್ರೆ ತಿಳಿದುಕೊಳ್ಳುವ ಪ್ರಯತ್ನ ನಾವೆಲ್ಲರೂ ಮಾಡಬೇಕು. ಅವರ ಆದರ್ಶ ಬದುಕು ನಮಗೆ ದಾರಿದೀಪವಾಗಿದೆ ಎಂದು ನಾವದಗಿ ಬೃಹನ್ಮಠದ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಸುಕ್ಷೇತ್ರ ಶಳ್ಳಗಿ ಗ್ರಾಮದಲ್ಲಿ ಬಸವಂತ್ರಾಯ ಹಾಗೂ ಪರಮಣ್ಣ ಮುತ್ಯಾ ದೇವಸ್ಥಾನದ 2ನೇ ವರ್ಷದ ಜಾತ್ರಾ ಮಹೋತ್ಸವ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡ ಕಲ್ಬುರ್ಗಿ ಶರಣ ಬಸವೇಶ್ವರ ಪುರಾಣ ಪ್ರಾರಂಭೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.</p>.<p>ಮಾಗಣಗೇರಿಯ ವಿಶ್ವರಾಧ್ಯ ಶಿವಾಚಾರ್ಯ ಸ್ವಾಮೀಜಿ, ಇಂತಹ ಪುರಾಣ ಪ್ರವಚನಗಳ ಮೂಲಕ ಮಹಾತ್ಮರ ಜೀವನವನ್ನು ತಿಳಿದುಕೊಳ್ಳುವುದರಿಂದ ಬದುಕು ಸಾರ್ಥಕವಾಗುತ್ತದೆ. ಜಾತ್ರೆ ಪುರಾಣ ಪ್ರವಚನಗಳು ನಮ್ಮ ಮಧ್ಯ ಪ್ರೀತಿ ವಿಶ್ವಾಸ ಹಾಗೂ ಭ್ರಾತೃತ್ವವನ್ನು ಬೆಳೆಸುತ್ತವೆ. ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಿ ಎಂದು ಸಲಹೆ ನೀಡಿದರು.</p>.<p>ಪುರಾಣಿಕ ವೇದ ಮೂರ್ತಿ ಬಸಯ್ಯ ಸೋಮಶೇಖರ ಮಠ(ಯಾಳಗಿ) ಅವರು ಮೊದಲು ದಿನದ ಪುರಾಣದಲ್ಲಿ ಶ್ರೀ ಶರಣ ಬಸವೇಶ್ವರರ ಬಾಲ್ಯದ ಕುರಿತು ವಿವರಿಸಿದರು. ವೇ.ಮೂ.ಮಲ್ಲಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು.</p>.<p>ಎಪಿಎಂಸಿ ಮಾಜಿ ಅಧ್ಯಕ್ಷ ಕೆ ಕೆ ನಾಡಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವೇದ ಮೂರ್ತಿ ಮಲ್ಲಯ್ಯಸ್ವಾಮಿ ಹಿರೇಮಠ, ಮಲ್ಲಯ್ಯ ಸ್ವಾಮಿ ಆರ್ ಮಠ, ಪರಮಣ್ಣ ಶರಣರು, ಕೆ ಸಿ ದೇಸಾಯಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-26-1973552867</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>