ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೋವಿಡ್‌ ಲಸಿಕೆ ಪಡೆಯಲು ತಾಂಡಾ ವಾಸಿಗಳಿಗೆ ಸಲಹೆ

ತಾಂಡಾ ಅಭಿವೃದ್ಧಿ ನಿಗಮದ ನಡೆ ತಾಂಡಾ ಕಡೆ ಅಭಿಯಾನಕ್ಕೆ ಚಾಲನೆ
Last Updated 19 ಜೂನ್ 2021, 11:13 IST
ಅಕ್ಷರ ಗಾತ್ರ

ವಿಜಯಪುರ: ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮದಿಂದ ಕೂಡಗಿ ತಾಂಡಾದಲ್ಲಿ ಹಮ್ಮಿಕೊಂಡಿದ್ದ ‘ತಾಂಡಾ ಅಭಿವೃದ್ಧಿ ನಿಗಮದ ನಡೆ ತಾಂಡಾ ಕಡೆ’ ಕಾರ್ಯಕ್ರಮಕ್ಕೆನಿಗಮದ ಅಧ್ಯಕ್ಷರಾದ ಕುಡಚಿ ಶಾಸಕ ಪಿ.ರಾಜೀವ್ ಚಾಲನೆ ನೀಡಿದರು.

ತಾಂಡಾ ಅಭಿವೃದ್ಧಿ ನಿಗಮವು ತಾಂಡಾಗಳ ಜನರ ಸುರಕ್ಷತೆಗಾಗಿ ಕೋವಿಡ್‌ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಪ್ರತಿ ತಾಂಡಾದಲ್ಲೂ ಈ ಅಭಿಯಾನ ನಡೆಯಲಿದೆ.ತಾಂಡಾ ವಾಸಿಗಳು ಕಡ್ಡಾಯವಾಗಿ ಕೋವಿಡ್‌ ಲಸಿಕೆ ಪಡೆಯಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸಬಾರದು. ಹಬ್ಬ, ಜಾತ್ರೆ, ಧಾರ್ಮಿಕ ಆಚರಣೆಗಳನ್ನು ಸದ್ಯ ಮಾಡದೇ ಸರ್ಕಾರದ ಕೋವಿಡ್‌ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಹೇಳಿದರು.

ತಾಂಡಾಗಳ ಅಭಿವೃದ್ಧಿಗೆ ನಿಗಮವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ವಿಜಯಪುರದಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆಯಮಧುಮೇಹ ತಜ್ಞರುಡಾ.ಬಾಬುರಾಜೇಂದ್ರ ನಾಯಿಕ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ತಡೆಗೆ ಸಾಕಷ್ಟು ಆದ್ಯತೆ ನೀಡಿದೆ. ಜೂನ್‌ 21ರಿಂದ 18 ವರ್ಷ ಮೇಲ್ಪಟ್ಟವರಿಗೂ ಉಚಿತ ಲಸಿಕೆ ನೀಡುತ್ತಿದೆ. ಪ್ರತಿಯೊಬ್ಬರೂ ಕೋವಿಡ್‌ ಲಸಿಕೆ ಪಡೆದು, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಜಗನು ಮಹಾರಾಜರು ಸಾನಿಧ್ಯ ವಹಿಸಿದ್ದರು.ಕೋವಿಡ್ ಅರಿವು ಮತ್ತು ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದಸಂಚಾಲಕ,ತಾಂಡಾ ಅಬಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಲ್. ಶಿವಶಂಕರ ನಾಯ್ಕ, ಸೋಮಲಿಂಗ ಸ್ವಾಮೀಜಿ, ಗೋಪಾಲ ಮಹಾರಾಜ, ಗ್ರಾಮ ಪಂಚಾಯತಿ ಅಧ್ಯಕ್ಷ ಶೇಕುಬಾಯಿ ಅರ್ಜುನ ರಾಠೋಡ, ಮತ್ತು ಕಂದಾಯ ಉಪ ವಿಭಾಗಾಧಿಕಾರಿ ಬಲರಾಮ ಲಮಾಣಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸಂತೋಷ ನಾಯಕ, ವಿಜಯಪುರ ವಲಯ ಅಬಿವೃದ್ಧಿ ಅಧಿಕಾರಿ ವಸಂತ ಪವಾರ, ವೈದ್ಯರಾದ ಡಾ.ರವಿ ನಾಯಿಕ, ಪಿ.ಎಸ್. ಐ. ರೇಣುಕಾ ಜಕನೂರ, ಗ್ರಾಮ ಪಂಚಾಯ್ತಿ ಅಬಿವೃದ್ಧಿ ಅಧಿಕಾರಿ ಎ.ಎಸ್. ಕೊಟ್ಯಾಳ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗೋವಿಂದರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT