<p><strong>ವಿಜಯಪುರ:</strong> ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು, ವ್ಯಕ್ತಿ ಎಷ್ಟೇ ದೊಡ್ಡವನಾದರೂ ಶಿಕ್ಷಕರ ಮುಂದೆ ತಲೆಬಾಗಲೇಬೇಕು ಎಂದುನಿವೃತ್ತ ಪೊಲೀಸ್ ಅಧಿಕಾರಿ ಬಿ.ಆರ್.ಚೌಕಿಮಠ ಹೇಳಿದರು.</p>.<p>ಇಟ್ಟಂಗಿಹಾಳದ ಎಕ್ಸಲಂಟ್ ಕ್ಯಾಂಪಸ್ನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದಶಿಕ್ಷಕರಿಗೆ ಸನ್ಮಾನ ಹಾಗೂ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಇಂದಿನ ವಿದ್ಯಾರ್ಥಿಗಳನ್ನು ತಯಾರಿಸಲು ಶಿಕ್ಷಕರು ಉಪನ್ಯಾಸ ವಿಧಾನದಿಂದ ಪ್ರಾಯೋಗಿಕ ವಿಧಾನಕ್ಕೆ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಸಂಸ್ಥೆಯ ಅಧ್ಯಕ್ಷ ಬಸವರಾಜ ಕೌಲಗಿ, ಶಿಕ್ಷಕರ ಸಾಮರ್ಥ್ಯ ಅಗಾಧವಾದದ್ದು: ಅವರು ದೇಶವನ್ನು ಕಟ್ಟುವ ರೂವಾರಿಗಳು ಎಂದರು.</p>.<p>ಬಾಲಗಾಂವ -ಕಾತ್ರಾಳ ಆಶ್ರಮದ ಡಾ.ಅಮೃತಾನಂದ ಯತಿ, ಕೇವಲ ಅರ್ಥ ಸಂಗ್ರಹದ ಹಿಂದೆ ಬೆನ್ನು ಹತ್ತದೆ, ಆತ್ಮ ಸಂತೃಪ್ತಿಗಾಗಿ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ನಿವೃತ್ತ ಶಿಕ್ಷಕರಾದ ರಾಜಶೇಖರ ಕೌಲಗಿ, ಪಂಚಾಕ್ಷರಯ್ಯ ಹಿರೇಮಠ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಮೀನಾಕ್ಷಿ ಪಾಟೀಲ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ನಿರ್ದೇಶಕರಾದ ದಯಾನಂದ ಕೆಲೂರ, ಮಂಜುನಾಥ ಕೌಲಗಿ, ಸ್ನೇಹಲತಾ ಹಿರೇಮನಿ, ವಿ.ಆರ್. ಹಿರೇಮಠ, ಬಿ.ಎಸ್. ಹತ್ತಿ, ಎಸ್.ಬಿ. ಅಲ್ಲವಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಶಿಕ್ಷಕ ವೃತ್ತಿ ಶ್ರೇಷ್ಠವಾದದ್ದು, ವ್ಯಕ್ತಿ ಎಷ್ಟೇ ದೊಡ್ಡವನಾದರೂ ಶಿಕ್ಷಕರ ಮುಂದೆ ತಲೆಬಾಗಲೇಬೇಕು ಎಂದುನಿವೃತ್ತ ಪೊಲೀಸ್ ಅಧಿಕಾರಿ ಬಿ.ಆರ್.ಚೌಕಿಮಠ ಹೇಳಿದರು.</p>.<p>ಇಟ್ಟಂಗಿಹಾಳದ ಎಕ್ಸಲಂಟ್ ಕ್ಯಾಂಪಸ್ನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದಶಿಕ್ಷಕರಿಗೆ ಸನ್ಮಾನ ಹಾಗೂ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಇಂದಿನ ವಿದ್ಯಾರ್ಥಿಗಳನ್ನು ತಯಾರಿಸಲು ಶಿಕ್ಷಕರು ಉಪನ್ಯಾಸ ವಿಧಾನದಿಂದ ಪ್ರಾಯೋಗಿಕ ವಿಧಾನಕ್ಕೆ ತಮ್ಮನ್ನು ತಾವು ನವೀಕರಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಸಂಸ್ಥೆಯ ಅಧ್ಯಕ್ಷ ಬಸವರಾಜ ಕೌಲಗಿ, ಶಿಕ್ಷಕರ ಸಾಮರ್ಥ್ಯ ಅಗಾಧವಾದದ್ದು: ಅವರು ದೇಶವನ್ನು ಕಟ್ಟುವ ರೂವಾರಿಗಳು ಎಂದರು.</p>.<p>ಬಾಲಗಾಂವ -ಕಾತ್ರಾಳ ಆಶ್ರಮದ ಡಾ.ಅಮೃತಾನಂದ ಯತಿ, ಕೇವಲ ಅರ್ಥ ಸಂಗ್ರಹದ ಹಿಂದೆ ಬೆನ್ನು ಹತ್ತದೆ, ಆತ್ಮ ಸಂತೃಪ್ತಿಗಾಗಿ ಕೆಲಸ ಮಾಡಬೇಕು ಎಂದು ಹೇಳಿದರು.</p>.<p>ನಿವೃತ್ತ ಶಿಕ್ಷಕರಾದ ರಾಜಶೇಖರ ಕೌಲಗಿ, ಪಂಚಾಕ್ಷರಯ್ಯ ಹಿರೇಮಠ ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಮೀನಾಕ್ಷಿ ಪಾಟೀಲ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಸ್ಥೆಯ ನಿರ್ದೇಶಕರಾದ ದಯಾನಂದ ಕೆಲೂರ, ಮಂಜುನಾಥ ಕೌಲಗಿ, ಸ್ನೇಹಲತಾ ಹಿರೇಮನಿ, ವಿ.ಆರ್. ಹಿರೇಮಠ, ಬಿ.ಎಸ್. ಹತ್ತಿ, ಎಸ್.ಬಿ. ಅಲ್ಲವಗೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>