<p><strong>ಇಂಡಿ:</strong> ಯಾವುದೇ ಶಿಕ್ಷಣ ಸಂಸ್ಥೆಯ ಪ್ರಗತಿಯಲ್ಲಿ ಆಡಳಿತ ಮಂಡಳಿ ಅಷ್ಟೇ ಅಲ್ಲ. ಅಲ್ಲಿನ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂಬುದಕ್ಕೆ ಎಚ್.ಎಂ.ಬಿಳ್ವಾರ ಅವರ ಸೇವೆಯೇ ಸಾಕ್ಷಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.</p>.<p>ನಗರದ ಅಂಜುಮನ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಹುಮಾಯುನ ಬಿಳವಾರ ಅವರ ನಿವೃತ್ತಿ ಅಂಗವಾಗಿ ಅಂಜುಮನ್ ಸಂಸ್ಥೆಯಿಂದ ಶನಿವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಶಾಕೀರ ಮಾಲಾನಾ ಕಾಸ್ಮಿ ಮಾತನಾಡಿ, ಶಿಕ್ಷಣ ಕ್ಷೇತ್ರದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಸದಾ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸಿದ ದೈಹಿಕ ಶಿಕ್ಷಕ ಬಿಳವಾರ ಗುರುಗಳ ದೀರ್ಘಕಾಲದ ಸೇವೆ ಸ್ಮರಣೀಯ ಎಂದರು.</p>.<p>ನಿವೃತ್ತ ಶಿಕ್ಷಕ ಹುಮಾಯುನ ಬಿಳವಾರ, ಮುಖ್ಯಗುರು ಮುಜಿಲ ಬಾಗವಾನ ಮಾತನಾಡಿದರು. ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ಇಲಿಯಾಸ ಬೋರಾಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಯಿದಾ ಮುಜಾವರ, ಜಗದೀಶ ಕ್ಷತ್ರಿಮ ಫಾರುಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ:</strong> ಯಾವುದೇ ಶಿಕ್ಷಣ ಸಂಸ್ಥೆಯ ಪ್ರಗತಿಯಲ್ಲಿ ಆಡಳಿತ ಮಂಡಳಿ ಅಷ್ಟೇ ಅಲ್ಲ. ಅಲ್ಲಿನ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂಬುದಕ್ಕೆ ಎಚ್.ಎಂ.ಬಿಳ್ವಾರ ಅವರ ಸೇವೆಯೇ ಸಾಕ್ಷಿಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.</p>.<p>ನಗರದ ಅಂಜುಮನ್ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಹುಮಾಯುನ ಬಿಳವಾರ ಅವರ ನಿವೃತ್ತಿ ಅಂಗವಾಗಿ ಅಂಜುಮನ್ ಸಂಸ್ಥೆಯಿಂದ ಶನಿವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಶಾಕೀರ ಮಾಲಾನಾ ಕಾಸ್ಮಿ ಮಾತನಾಡಿ, ಶಿಕ್ಷಣ ಕ್ಷೇತ್ರದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಸದಾ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸಿದ ದೈಹಿಕ ಶಿಕ್ಷಕ ಬಿಳವಾರ ಗುರುಗಳ ದೀರ್ಘಕಾಲದ ಸೇವೆ ಸ್ಮರಣೀಯ ಎಂದರು.</p>.<p>ನಿವೃತ್ತ ಶಿಕ್ಷಕ ಹುಮಾಯುನ ಬಿಳವಾರ, ಮುಖ್ಯಗುರು ಮುಜಿಲ ಬಾಗವಾನ ಮಾತನಾಡಿದರು. ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ಇಲಿಯಾಸ ಬೋರಾಮಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಯಿದಾ ಮುಜಾವರ, ಜಗದೀಶ ಕ್ಷತ್ರಿಮ ಫಾರುಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>