<p><strong>ಚಡಚಣ:</strong> ‘ಶಿಕ್ಷಕರು ಕಚೇರಿಗೆ ಅಲಯುವಂತಾಗದೇ, ಅವರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸಬೇಕು’ ಎಂದು ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು.</p>.<p>ಪಟ್ಟಣದ ಎಂಇಎಸ್ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಗುರು ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನೌಕರರ ಸಂಪೂರ್ಣ ಮಾಹಿತಿ ಒಳಗೊಂಡ ‘ಸೇವಾ ಪುಸ್ತಕ’ ನೌಕರರ ಆತ್ಮ. ಆದ್ದರಿಂದ ನೌಕರರ ಸೇವಾ ಪುಸ್ತಕದಲ್ಲಿ ಸರಿಯಾದ ಮಾಹಿತಿ ಇರುವಂತೆ ನೋಡಿಕೊಳ್ಳಬೇಕು .ಆ ನಿಟ್ಟಿನಲ್ಲಿ ಗುರುಸ್ಪಂದನ ಕಾರ್ಯಕ್ರಮ ಆಯೋಜಿಸಿ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಈ ಕಾರ್ಯ ಶ್ಲಾಘನೀಯ’ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಸ್.ಸೊನ್ನಗಿ, ‘ಮುಂದಿನ ದಿನಗಳಲ್ಲಿ ಶಿಕ್ಷಕರ ಸೇವಾ ಪುಸ್ತಕ ಸಂಪೂರ್ಣ ಡಿಜಿಟಲೀಕರಣ ಆಗಲಿದೆ. ಆದ್ದರಿಂದ ಶಿಕ್ಷಕರು ತಮಗೆ ಈಗ ಒದಗಿಸಲಾದ ಸೇವಾ ಪುಸ್ತಕದಲ್ಲಿ ತಮ್ಮ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಶಿಕ್ಷಕರ ಸೊಸಾಯಿಟಿಸ್ನ ಎಸ್. ಪಾಟೀಲ, ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವಂತ ಉಮರಾಣಿ , ನಿವೃತ್ ಪ್ರಾಚಾರ್ಯ ಎಸ್.ಎಂ ಚೋಳಕೆ ಮಾತನಾಡಿದರು.</p>.<p>ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ್ ಮಜ್ಜಗಿ, ಕಾರ್ಯದರ್ಶಿ ವಿಠ್ಠಲ ಕಾಂಬಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಉಪಾಧ್ಯಕ್ಷ ಎಸ್.ಜೆ. ಪಾಟೀಲ, ಸಂಘಟನೆಯ ಪದಾಧಿಕಾರಿಗಳು ಇದ್ದರು.</p>.<div><blockquote>ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ. ಶಿಕ್ಷಕರು ಪ್ರಾಮಾಣಿಕವಾಗಿ ಪಾಠಬೋಧನೆ ಮಾಡಿ ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು </blockquote><span class="attribution">ಚಿದಾನಂದ ಕಟ್ಟಿಮನಿ ಬಿಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಡಚಣ:</strong> ‘ಶಿಕ್ಷಕರು ಕಚೇರಿಗೆ ಅಲಯುವಂತಾಗದೇ, ಅವರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸಬೇಕು’ ಎಂದು ಶಾಸಕ ವಿಠ್ಠಲ ಕಟಕಧೊಂಡ ಹೇಳಿದರು.</p>.<p>ಪಟ್ಟಣದ ಎಂಇಎಸ್ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಗುರು ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನೌಕರರ ಸಂಪೂರ್ಣ ಮಾಹಿತಿ ಒಳಗೊಂಡ ‘ಸೇವಾ ಪುಸ್ತಕ’ ನೌಕರರ ಆತ್ಮ. ಆದ್ದರಿಂದ ನೌಕರರ ಸೇವಾ ಪುಸ್ತಕದಲ್ಲಿ ಸರಿಯಾದ ಮಾಹಿತಿ ಇರುವಂತೆ ನೋಡಿಕೊಳ್ಳಬೇಕು .ಆ ನಿಟ್ಟಿನಲ್ಲಿ ಗುರುಸ್ಪಂದನ ಕಾರ್ಯಕ್ರಮ ಆಯೋಜಿಸಿ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಈ ಕಾರ್ಯ ಶ್ಲಾಘನೀಯ’ ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಸ್.ಸೊನ್ನಗಿ, ‘ಮುಂದಿನ ದಿನಗಳಲ್ಲಿ ಶಿಕ್ಷಕರ ಸೇವಾ ಪುಸ್ತಕ ಸಂಪೂರ್ಣ ಡಿಜಿಟಲೀಕರಣ ಆಗಲಿದೆ. ಆದ್ದರಿಂದ ಶಿಕ್ಷಕರು ತಮಗೆ ಈಗ ಒದಗಿಸಲಾದ ಸೇವಾ ಪುಸ್ತಕದಲ್ಲಿ ತಮ್ಮ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಶಿಕ್ಷಕರ ಸೊಸಾಯಿಟಿಸ್ನ ಎಸ್. ಪಾಟೀಲ, ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವಂತ ಉಮರಾಣಿ , ನಿವೃತ್ ಪ್ರಾಚಾರ್ಯ ಎಸ್.ಎಂ ಚೋಳಕೆ ಮಾತನಾಡಿದರು.</p>.<p>ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ್ ಮಜ್ಜಗಿ, ಕಾರ್ಯದರ್ಶಿ ವಿಠ್ಠಲ ಕಾಂಬಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಉಪಾಧ್ಯಕ್ಷ ಎಸ್.ಜೆ. ಪಾಟೀಲ, ಸಂಘಟನೆಯ ಪದಾಧಿಕಾರಿಗಳು ಇದ್ದರು.</p>.<div><blockquote>ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ. ಶಿಕ್ಷಕರು ಪ್ರಾಮಾಣಿಕವಾಗಿ ಪಾಠಬೋಧನೆ ಮಾಡಿ ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು </blockquote><span class="attribution">ಚಿದಾನಂದ ಕಟ್ಟಿಮನಿ ಬಿಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>