<p><strong>ಮುದ್ದೇಬಿಹಾಳ(ವಿಜಯಪುರ): </strong>ಆಲಮಟ್ಟಿ ಜಲಾಶಯದಿಂದ ಹೆಚ್ಚು ನೀರು ಹೊರಗೆ ಹರಿಸಿದ್ದರಿಂದ ತಾಲ್ಲೂಕಿನ ತಂಗಡಗಿ ಸಮೀಪದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ.</p>.<p>ಪ್ರವಾಹದಿಂದ ತೊಂದರೆಗೊಳಗಾಗುವ ತಾಲ್ಲೂಕಿನ ಕುಂಚಗನೂರ ಹಾಗೂ ಕಮಲದಿನ್ನಿ ಗ್ರಾಮಗಳಿಗೆ ಬುಧವಾರ ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆಲಮಟ್ಟಿ ಜಲಾಶಯದಿಂದ ಈಗ 3.80 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಸದ್ಯಕ್ಕೆ ತಾಲ್ಲೂಕಿನ ಯಾವುದೇ ಗ್ರಾಮಗಳ ಜನರಿಗೆ ತೊಂದರೆಯಾಗಿಲ್ಲ. ತೀರಾ ತೊಂದರೆಯಾದರೆ ಆಯಾ ಗ್ರಾಮದ ಶಾಲೆಗಳಲ್ಲಿ ಕಾಳಜಿ ಕೇಂದ್ರ ತೆಗೆಯಲಾಗುವುದು ಎಂದರು.</p>.<p>ಈ ಸಂಬಂಧ ಬಿಸಿಯೂಟದ ಸಿಬ್ಬಂದಿಗೆ ತಯಾರಿರುವಂತೆ ಸೂಚಿಸಲಾಗಿದೆ ಎಂದರು.</p>.<p>ಬಹಳಷ್ಟು ಮನೆಗಳಿಗೆ ನೀರು ನುಗ್ಗಿದರೆ ಕುಂಚಗನೂರ ಗ್ರಾಮದಲ್ಲಿ, ಕಮಲದಿನ್ನಿಯ ಜನರನ್ನು ತಂಗಡಗಿಗೆ, ನಾಗರಾಳ ಹಾಗೂ ಹಂಡರಗಲ್ಲದ ಜನರನ್ನು ಯರಝರಿ ಗ್ರಾಮಕ್ಕೆ, ದೇವೂರ ಗ್ರಾಮದ ಜನರನ್ನು ನೇಬಗೇರಿ ಗ್ರಾಮದ ಶಾಲೆಗಳಿಗೆ ಸ್ಥಳಾಂತರಿಸಲು ಯೋಜಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇ.ಒ ಹೊಕ್ರಾಣಿ, ಪಿ.ಎಸ್ಐ ಎಂ.ಬಿ.ಬಿರಾದಾರ, ಪಿ.ಡಿ.ಒ ಉಮೇಶ ರಾಠೋಡ, ಪ್ರವಾಹ ನೋಡಲ್ ಅಧಿಕಾರಿ ವಿಶ್ವನಾಥ ಬಡಿಗೇರ, ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಗ್ರಾಮ ಲೆಕ್ಕಿಗ ಸಚಿನ ಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ(ವಿಜಯಪುರ): </strong>ಆಲಮಟ್ಟಿ ಜಲಾಶಯದಿಂದ ಹೆಚ್ಚು ನೀರು ಹೊರಗೆ ಹರಿಸಿದ್ದರಿಂದ ತಾಲ್ಲೂಕಿನ ತಂಗಡಗಿ ಸಮೀಪದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ.</p>.<p>ಪ್ರವಾಹದಿಂದ ತೊಂದರೆಗೊಳಗಾಗುವ ತಾಲ್ಲೂಕಿನ ಕುಂಚಗನೂರ ಹಾಗೂ ಕಮಲದಿನ್ನಿ ಗ್ರಾಮಗಳಿಗೆ ಬುಧವಾರ ತಹಶೀಲ್ದಾರ್ ಬಿ.ಎಸ್.ಕಡಕಭಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆಲಮಟ್ಟಿ ಜಲಾಶಯದಿಂದ ಈಗ 3.80 ಲಕ್ಷ ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಸದ್ಯಕ್ಕೆ ತಾಲ್ಲೂಕಿನ ಯಾವುದೇ ಗ್ರಾಮಗಳ ಜನರಿಗೆ ತೊಂದರೆಯಾಗಿಲ್ಲ. ತೀರಾ ತೊಂದರೆಯಾದರೆ ಆಯಾ ಗ್ರಾಮದ ಶಾಲೆಗಳಲ್ಲಿ ಕಾಳಜಿ ಕೇಂದ್ರ ತೆಗೆಯಲಾಗುವುದು ಎಂದರು.</p>.<p>ಈ ಸಂಬಂಧ ಬಿಸಿಯೂಟದ ಸಿಬ್ಬಂದಿಗೆ ತಯಾರಿರುವಂತೆ ಸೂಚಿಸಲಾಗಿದೆ ಎಂದರು.</p>.<p>ಬಹಳಷ್ಟು ಮನೆಗಳಿಗೆ ನೀರು ನುಗ್ಗಿದರೆ ಕುಂಚಗನೂರ ಗ್ರಾಮದಲ್ಲಿ, ಕಮಲದಿನ್ನಿಯ ಜನರನ್ನು ತಂಗಡಗಿಗೆ, ನಾಗರಾಳ ಹಾಗೂ ಹಂಡರಗಲ್ಲದ ಜನರನ್ನು ಯರಝರಿ ಗ್ರಾಮಕ್ಕೆ, ದೇವೂರ ಗ್ರಾಮದ ಜನರನ್ನು ನೇಬಗೇರಿ ಗ್ರಾಮದ ಶಾಲೆಗಳಿಗೆ ಸ್ಥಳಾಂತರಿಸಲು ಯೋಜಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇ.ಒ ಹೊಕ್ರಾಣಿ, ಪಿ.ಎಸ್ಐ ಎಂ.ಬಿ.ಬಿರಾದಾರ, ಪಿ.ಡಿ.ಒ ಉಮೇಶ ರಾಠೋಡ, ಪ್ರವಾಹ ನೋಡಲ್ ಅಧಿಕಾರಿ ವಿಶ್ವನಾಥ ಬಡಿಗೇರ, ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಗ್ರಾಮ ಲೆಕ್ಕಿಗ ಸಚಿನ ಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>