<p><strong>ತಾಳಿಕೋಟೆ</strong>: ಕಲಿಕೆಯ ಐದು ರಚನಾತ್ಮಕ ಹಂತಗಳನ್ನು ಒಳಗೊಂಡಿರುವ 5ಇ ವಿಧಾನದಲ್ಲಿ ತೊಡಗಿಸಿಕೊಳ್ಳುವಿಕೆ, ಅನ್ವೇಷಿಸುವಿಕೆಸ, ವಿವರಿಸುವಿಕೆ, ವಿಸ್ತರಿಸುವಿಕೆ, ಮತ್ತು ಮೌಲ್ಯಮಾಪನಕ್ಕೆ ಅವಕಾಶ ಇರುವುದರಿಂದ ಪರಿಣಾಮಕಾರಿ ಬೋಧನೆಯಾಗುತ್ತದೆ ಎಂದು ಎಸ್.ಕೆ. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ.ಬಂಟನೂರ ಹೇಳಿದರು.</p>.<p>ಪಟ್ಟಣದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐ. ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ 5ಇ ಆಧಾರಿತ ಪಾಠ ಯೋಜನೆ ಕುರಿತು ಹಮ್ಮಿಕೊಂಡ ನಾಲ್ಕು ದಿನಗಳ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.</p>.<p>ಕಾರ್ಯಗಾರವನ್ನು ಉದ್ಘಾಟಿಸಿ ಅಜೀಂ ಪ್ರೇಮಜಿ ಫೌಂಡೇಶನ್ದ ಚೇತನ್ ಹಿರೇಮಠ ಮಾತನಾಡಿ, ಹಣೆಬರಹವನ್ನು ನಂಬಿ ಕುಳಿತರೆ ಏನೂ ಸಾಧನೆಯಾಗದು, ನಮ್ಮ ಪ್ರಯತ್ನಗಳಿಂದ ಮಾತ್ರ ಯಶ ಸಾಧ್ಯವಿದೆ. ಕಲಿಕೆಯನ್ನು ಹೆಚ್ಚು ರೂಡಿಗತ ಮಾಡಿಕೊಂಡರೆ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.</p>.<p>ಐಕ್ಯೂಎ.ಸಿ ಸಂಘಟಕ ಯು. ಎನ್. ಮಂಗೊಂಡ, 5ಈ ಪಾಠ ಯೋಜನಾ ಕಾರ್ಯಾಗಾರ ಸಂಘಟಕ ವೈ.ಎಚ್. ಅಂಗಡಿಗೇರಿ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪಾರ್ವತಿ ಸಂಗಡಿಗರು ಪ್ರಾರ್ಥಿಸಿದರು. ರೇಷ್ಮಾ ಚಲವಾದಿ ಸ್ವಾಗತಿಸಿದರು. ಕೀರ್ತಿ ನಿರೂಪಿಸಿದರು. ಐಶ್ವರ್ಯ ದೊಡಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ</strong>: ಕಲಿಕೆಯ ಐದು ರಚನಾತ್ಮಕ ಹಂತಗಳನ್ನು ಒಳಗೊಂಡಿರುವ 5ಇ ವಿಧಾನದಲ್ಲಿ ತೊಡಗಿಸಿಕೊಳ್ಳುವಿಕೆ, ಅನ್ವೇಷಿಸುವಿಕೆಸ, ವಿವರಿಸುವಿಕೆ, ವಿಸ್ತರಿಸುವಿಕೆ, ಮತ್ತು ಮೌಲ್ಯಮಾಪನಕ್ಕೆ ಅವಕಾಶ ಇರುವುದರಿಂದ ಪರಿಣಾಮಕಾರಿ ಬೋಧನೆಯಾಗುತ್ತದೆ ಎಂದು ಎಸ್.ಕೆ. ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ.ಬಂಟನೂರ ಹೇಳಿದರು.</p>.<p>ಪಟ್ಟಣದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐ. ಕ್ಯೂ.ಎ.ಸಿ. ಘಟಕದ ಅಡಿಯಲ್ಲಿ 5ಇ ಆಧಾರಿತ ಪಾಠ ಯೋಜನೆ ಕುರಿತು ಹಮ್ಮಿಕೊಂಡ ನಾಲ್ಕು ದಿನಗಳ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು.</p>.<p>ಕಾರ್ಯಗಾರವನ್ನು ಉದ್ಘಾಟಿಸಿ ಅಜೀಂ ಪ್ರೇಮಜಿ ಫೌಂಡೇಶನ್ದ ಚೇತನ್ ಹಿರೇಮಠ ಮಾತನಾಡಿ, ಹಣೆಬರಹವನ್ನು ನಂಬಿ ಕುಳಿತರೆ ಏನೂ ಸಾಧನೆಯಾಗದು, ನಮ್ಮ ಪ್ರಯತ್ನಗಳಿಂದ ಮಾತ್ರ ಯಶ ಸಾಧ್ಯವಿದೆ. ಕಲಿಕೆಯನ್ನು ಹೆಚ್ಚು ರೂಡಿಗತ ಮಾಡಿಕೊಂಡರೆ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.</p>.<p>ಐಕ್ಯೂಎ.ಸಿ ಸಂಘಟಕ ಯು. ಎನ್. ಮಂಗೊಂಡ, 5ಈ ಪಾಠ ಯೋಜನಾ ಕಾರ್ಯಾಗಾರ ಸಂಘಟಕ ವೈ.ಎಚ್. ಅಂಗಡಿಗೇರಿ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಪಾರ್ವತಿ ಸಂಗಡಿಗರು ಪ್ರಾರ್ಥಿಸಿದರು. ರೇಷ್ಮಾ ಚಲವಾದಿ ಸ್ವಾಗತಿಸಿದರು. ಕೀರ್ತಿ ನಿರೂಪಿಸಿದರು. ಐಶ್ವರ್ಯ ದೊಡಮನಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>