<p><strong>ವಿಜಯಪುರ</strong>: ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಪ್ರಕರಣವು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರ ಮಧ್ಯಸ್ಥಿಕೆಯಲ್ಲಿ ಬಗೆಹರಿದಿದೆ.</p>.<p>ಗ್ರಾಮಸ್ಥರು, ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮದಲ್ಲಿ ಶಾಂತಿ ಸಂಧಾನ ಸಭೆ ನಡೆಸಿ, ಪರಸ್ಪರ ಸೌಹಾರ್ದದಿಂದ ಇರುವಂತೆ ಸೂಚಿಸಲಾಯಿತು.</p>.<p>ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಸರ್ಕಾರದ ನಿಯಮಾವಳಿಯಂತೆ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ದೌರ್ಜನ್ಯಕ್ಕೊಳಗಾದ ಸಂತ್ರಸ್ತನಿಗೆ ಈಗಾಗಲೇ ₹ 2 ಲಕ್ಷ ಮಂಜೂರು ಮಾಡಲಾಗಿದೆ. ಈ ಸಂಬಂಧ ₹ 50 ಸಾವಿರ ಮೊತ್ತದ ಚೆಕ್ ನೀಡಲಾಗಿದೆ. ಮಿಣಜಗಿ ಪರಿಶಿಷ್ಟ ಕಾಲೊನಿಯ ಪ್ರತಿಯೊಬ್ಬರಿಗೂ 2 ಕೆ.ಜಿ.ಯಂತೆ ಅಕ್ಕಿ, ಬೇಳೆ, ಬೆಲ್ಲ, ಅವಲಕ್ಕಿ, ರವಾ ಇನ್ನಿತರ ಆಹಾರ ಕಿಟ್ ವಿತರಿಸಲಾಗಿದೆ ಎಂದು ಹೇಳಿದರು.</p>.<p>ಶಾಸಕರ ಶಿಫಾರಸಿನ ಮೇರೆಗೆ ಮಿಣಜಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಪ್ರಾರಂಭಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು.</p>.<p>ಗ್ರಾಮದ ಪರಿಶಿಷ್ಟ ಜಾತಿ ಜನರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಒದಗಿಸಲು 4 ಎಕರೆ ಸರ್ಕಾರಿ ಜಮೀನು ನೀಡಲು ತಾಳಿಕೋಟಿ ತಹಶೀಲ್ದಾರರಿಗೆ ಸೂಚಿಸಲಾಗಿದೆ ಎಂದರು.</p>.<p>ಇದೇ ಸಂದರ್ಭದಲ್ಲಿ ತಹಶೀಲ್ದಾರರು 2 ಎಕರೆ ಜಮೀನು ಮಂಜೂರು ಮಾಡುವುದಾಗಿ ತಿಳಿಸಿದರು.</p>.<p>ಪರಿಶಿಷ್ಟ ಕಾಲೊನಿಯ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಒದಗಿಸಲು ಪಿಡಿಒ ಹಾಗೂ ತಾಳಿಕೋಟಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಾಬ್ ಕಾರ್ಡ್ ಒದಗಿಸಲು ಸಹ ಸೂಚಿಸಲಾಯಿತು.</p>.<p>ಒಳಚರಂಡಿ ವ್ಯವಸ್ಥೆ ಹಾಗೂ ಕುಡಿಯುವ ನೀರು ಒದಗಿಸಲು ಮುದ್ದೇಬಿಹಾಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಜಿಲ್ಲಾಧಿಕಾರಿಸೂಚಿಸಿದರು.</p>.<p>ಮಿಣಜಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಪ್ರತ್ಯೇಕ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಸೂಚಿಸಿದರು.<br /><br />ಪ್ರಕರಣ ಸಂಬಂಧ ಈಗಾಗಲೇ 5 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕಾಗಿ ತನಿಖೆ ಜಾರಿಯಲ್ಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ತಾಳಿಕೋಟಿ ತಾಲ್ಲೂಕಿನ ಮಿಣಜಗಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದೌರ್ಜನ್ಯ ಪ್ರಕರಣವು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಅವರ ಮಧ್ಯಸ್ಥಿಕೆಯಲ್ಲಿ ಬಗೆಹರಿದಿದೆ.</p>.<p>ಗ್ರಾಮಸ್ಥರು, ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮದಲ್ಲಿ ಶಾಂತಿ ಸಂಧಾನ ಸಭೆ ನಡೆಸಿ, ಪರಸ್ಪರ ಸೌಹಾರ್ದದಿಂದ ಇರುವಂತೆ ಸೂಚಿಸಲಾಯಿತು.</p>.<p>ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಸರ್ಕಾರದ ನಿಯಮಾವಳಿಯಂತೆ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ದೌರ್ಜನ್ಯಕ್ಕೊಳಗಾದ ಸಂತ್ರಸ್ತನಿಗೆ ಈಗಾಗಲೇ ₹ 2 ಲಕ್ಷ ಮಂಜೂರು ಮಾಡಲಾಗಿದೆ. ಈ ಸಂಬಂಧ ₹ 50 ಸಾವಿರ ಮೊತ್ತದ ಚೆಕ್ ನೀಡಲಾಗಿದೆ. ಮಿಣಜಗಿ ಪರಿಶಿಷ್ಟ ಕಾಲೊನಿಯ ಪ್ರತಿಯೊಬ್ಬರಿಗೂ 2 ಕೆ.ಜಿ.ಯಂತೆ ಅಕ್ಕಿ, ಬೇಳೆ, ಬೆಲ್ಲ, ಅವಲಕ್ಕಿ, ರವಾ ಇನ್ನಿತರ ಆಹಾರ ಕಿಟ್ ವಿತರಿಸಲಾಗಿದೆ ಎಂದು ಹೇಳಿದರು.</p>.<p>ಶಾಸಕರ ಶಿಫಾರಸಿನ ಮೇರೆಗೆ ಮಿಣಜಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಪ್ರಾರಂಭಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು.</p>.<p>ಗ್ರಾಮದ ಪರಿಶಿಷ್ಟ ಜಾತಿ ಜನರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಒದಗಿಸಲು 4 ಎಕರೆ ಸರ್ಕಾರಿ ಜಮೀನು ನೀಡಲು ತಾಳಿಕೋಟಿ ತಹಶೀಲ್ದಾರರಿಗೆ ಸೂಚಿಸಲಾಗಿದೆ ಎಂದರು.</p>.<p>ಇದೇ ಸಂದರ್ಭದಲ್ಲಿ ತಹಶೀಲ್ದಾರರು 2 ಎಕರೆ ಜಮೀನು ಮಂಜೂರು ಮಾಡುವುದಾಗಿ ತಿಳಿಸಿದರು.</p>.<p>ಪರಿಶಿಷ್ಟ ಕಾಲೊನಿಯ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಒದಗಿಸಲು ಪಿಡಿಒ ಹಾಗೂ ತಾಳಿಕೋಟಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಾಬ್ ಕಾರ್ಡ್ ಒದಗಿಸಲು ಸಹ ಸೂಚಿಸಲಾಯಿತು.</p>.<p>ಒಳಚರಂಡಿ ವ್ಯವಸ್ಥೆ ಹಾಗೂ ಕುಡಿಯುವ ನೀರು ಒದಗಿಸಲು ಮುದ್ದೇಬಿಹಾಳ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಜಿಲ್ಲಾಧಿಕಾರಿಸೂಚಿಸಿದರು.</p>.<p>ಮಿಣಜಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಯಲ್ಲಿ ಪ್ರತ್ಯೇಕ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಸೂಚಿಸಿದರು.<br /><br />ಪ್ರಕರಣ ಸಂಬಂಧ ಈಗಾಗಲೇ 5 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕಾಗಿ ತನಿಖೆ ಜಾರಿಯಲ್ಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>