<p><strong>ವಿಜಯಪುರ: </strong>ಕೋವಿಡ್-19 ಲಸಿಕೆ ಅಭಿಯಾನದಡಿಜಿಲ್ಲೆಯಲ್ಲಿ ಏಪ್ರಿಲ್ 11 ಮತ್ತು 12ರಂದು ಕೋವಿಡ್ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ಪ್ರಸ್ತುತ ಜಿಲ್ಲೆಯಲ್ಲಿ 30 ಸಾವಿರ ಕೋವಿಡ್ 19 ಲಸಿಕೆಯ ಡೋಸ್ ದಾಸ್ತಾನು ಇದ್ದು, ಪ್ರತಿ ದಿನ 10 ಸಾವಿರ ಡೋಸ್ ಲಸಿಕೆ ನೀಡುವ ಗುರಿ ನಿಗದಿಪಡಿಸಿದೆ ಎಂದರು.</p>.<p>ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ನಾಲ್ಕನೇ ಹಂತದ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವ ಸಮಯದಲ್ಲಿ ನೋಂದಣಿ ಮಾಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. 45 ವರ್ಷ ವಯಸ್ಸಿನ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದೆ ಎಂದರು.</p>.<p>ಈಗಾಗಲೇ ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್-19 ಲಸಿಕೆ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಇನ್ನು ಮುಂದೆ ಗ್ರಾಮೀಣ ಪ್ರದೇಶದ ಆಯ್ದ ಉಪಕೇಂದ್ರಗಳಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಲಸಿಕೆ ಹಾಕಲಾಗುವುದು. ಪ್ರತಿ ದಿನ ಪ್ರತಿ ಉಪಕೇಂದ್ರಗಳಲ್ಲಿ 100 ಡೋಸ್ ಲಸಿಕೆ ಹಾಕುವ ಗುರಿ ನಿಗದಿಪಡಿಸಿದೆ ಎಂದರು.</p>.<p>ಸ್ಥಳೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಎನ್ಜಿಒ ಸಿಬ್ಬಂದಿ ಸಹಾಯದಿಂದ ಕೋವಿಡ್ 19 ಆ್ಯಪ್ನಲ್ಲಿ ಫಲಾನುಭವಿಗಳ ಎಂಟ್ರಿ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.</p>.<p>ಕೋವಿಡ್ -19 ಲಸಿಕೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸಂಪೂರ್ಣ ಉಚಿತವಾಗಿದ್ದು. ಸಾರ್ವಜನಿಕರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಸಾರ್ವಜನಿಕರಿಗೆ ಕೋವಿಡ್ -19 ಲಸಿಕೆಯ ಕುರಿತು ಮನವೊಲಿಸಿ ಲಸಿಕೆ ಹಾಕಿಸಿಕೊಳ್ಳಲು ಆರೋಗ್ಯ ಸಹಾಯಕರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಉಪಕೇಂದ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆಯನ್ನು ಬೆಳ್ಳಿಗೆ 10 ರಿಂದ ಸಂಜೆ 4 ರ ವರೆಗೆ ಹಾಕಲಾಗುವುದು ಎಂದರು.</p>.<p>ಜಿಲ್ಲೆಯ ಇಲ್ಲಿಯವರೆಗೆ 76,637 ಹಿರಿಯ ನಾಗರಿಕರಿಗೆ ಹಾಗೂ 45 ರಿಂದ 60 ವರ್ಷದ ವಯಸ್ಸಿನ 62,827 ಜನರಿಗೆ ಕೂಡ ಲಸಿಕೆ ನೀಡಲಾಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೂ ಮತ್ತು ಆರೋಗ್ಯ ಕಾರ್ಯಕರ್ತರಿಗೂ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>***</p>.<p>ಮುಂಬರುವ ದಿನಗಳಲ್ಲಿ ರಾಜ್ಯದಿಂದ ಜಿಲ್ಲೆಗೆ ಅಗತ್ಯವಿರುವ ಲಸಿಕೆ ಸರಬರಾಜು ಮಾಡುವ ಸಾಧ್ಯತೆ ಇದ್ದು, ಲಸಿಕಾ ಕಾರ್ಯಕ್ರಮ ಮುಂದುವರೆಸಲಾಗುವುದು</p>.<p>ಪಿ.ಸುನೀಲ್ ಕುಮಾರ್,ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಕೋವಿಡ್-19 ಲಸಿಕೆ ಅಭಿಯಾನದಡಿಜಿಲ್ಲೆಯಲ್ಲಿ ಏಪ್ರಿಲ್ 11 ಮತ್ತು 12ರಂದು ಕೋವಿಡ್ ಲಸಿಕಾ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p>ಪ್ರಸ್ತುತ ಜಿಲ್ಲೆಯಲ್ಲಿ 30 ಸಾವಿರ ಕೋವಿಡ್ 19 ಲಸಿಕೆಯ ಡೋಸ್ ದಾಸ್ತಾನು ಇದ್ದು, ಪ್ರತಿ ದಿನ 10 ಸಾವಿರ ಡೋಸ್ ಲಸಿಕೆ ನೀಡುವ ಗುರಿ ನಿಗದಿಪಡಿಸಿದೆ ಎಂದರು.</p>.<p>ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ನಾಲ್ಕನೇ ಹಂತದ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವ ಸಮಯದಲ್ಲಿ ನೋಂದಣಿ ಮಾಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. 45 ವರ್ಷ ವಯಸ್ಸಿನ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದೆ ಎಂದರು.</p>.<p>ಈಗಾಗಲೇ ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳಲ್ಲಿ ಕೋವಿಡ್-19 ಲಸಿಕೆ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಇನ್ನು ಮುಂದೆ ಗ್ರಾಮೀಣ ಪ್ರದೇಶದ ಆಯ್ದ ಉಪಕೇಂದ್ರಗಳಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಲಸಿಕೆ ಹಾಕಲಾಗುವುದು. ಪ್ರತಿ ದಿನ ಪ್ರತಿ ಉಪಕೇಂದ್ರಗಳಲ್ಲಿ 100 ಡೋಸ್ ಲಸಿಕೆ ಹಾಕುವ ಗುರಿ ನಿಗದಿಪಡಿಸಿದೆ ಎಂದರು.</p>.<p>ಸ್ಥಳೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಎನ್ಜಿಒ ಸಿಬ್ಬಂದಿ ಸಹಾಯದಿಂದ ಕೋವಿಡ್ 19 ಆ್ಯಪ್ನಲ್ಲಿ ಫಲಾನುಭವಿಗಳ ಎಂಟ್ರಿ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.</p>.<p>ಕೋವಿಡ್ -19 ಲಸಿಕೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸಂಪೂರ್ಣ ಉಚಿತವಾಗಿದ್ದು. ಸಾರ್ವಜನಿಕರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.</p>.<p>ಸಾರ್ವಜನಿಕರಿಗೆ ಕೋವಿಡ್ -19 ಲಸಿಕೆಯ ಕುರಿತು ಮನವೊಲಿಸಿ ಲಸಿಕೆ ಹಾಕಿಸಿಕೊಳ್ಳಲು ಆರೋಗ್ಯ ಸಹಾಯಕರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಉಪಕೇಂದ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆಯನ್ನು ಬೆಳ್ಳಿಗೆ 10 ರಿಂದ ಸಂಜೆ 4 ರ ವರೆಗೆ ಹಾಕಲಾಗುವುದು ಎಂದರು.</p>.<p>ಜಿಲ್ಲೆಯ ಇಲ್ಲಿಯವರೆಗೆ 76,637 ಹಿರಿಯ ನಾಗರಿಕರಿಗೆ ಹಾಗೂ 45 ರಿಂದ 60 ವರ್ಷದ ವಯಸ್ಸಿನ 62,827 ಜನರಿಗೆ ಕೂಡ ಲಸಿಕೆ ನೀಡಲಾಗಿದೆ. ಮುಂಚೂಣಿ ಕಾರ್ಯಕರ್ತೆಯರಿಗೂ ಮತ್ತು ಆರೋಗ್ಯ ಕಾರ್ಯಕರ್ತರಿಗೂ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>***</p>.<p>ಮುಂಬರುವ ದಿನಗಳಲ್ಲಿ ರಾಜ್ಯದಿಂದ ಜಿಲ್ಲೆಗೆ ಅಗತ್ಯವಿರುವ ಲಸಿಕೆ ಸರಬರಾಜು ಮಾಡುವ ಸಾಧ್ಯತೆ ಇದ್ದು, ಲಸಿಕಾ ಕಾರ್ಯಕ್ರಮ ಮುಂದುವರೆಸಲಾಗುವುದು</p>.<p>ಪಿ.ಸುನೀಲ್ ಕುಮಾರ್,ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>