<p><strong>ವಿಜಯಪುರ:</strong> ‘ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಹೀಗಾಗಿ ಶಾಸಕರ ನಿಧಿಯನ್ನು ಸಮುದಾಯ ಭವನಗಳಿಗೆ ಬದಲಾಗಿ ಶಿಕ್ಷಣಕ್ಕೆ ಮೀಸಲಿಡಲು ತೀರ್ಮಾನಿಸಿದ್ದೇನೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.</p>.<p>ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿದ್ದಪ್ಪ ಭೀಮರಾಯ ಕಲ್ಲೂರ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಸಕರ ನಿಧಿ ₹2 ಕೋಟಿಯಲ್ಲಿ ₹ 70 ಲಕ್ಷಕ್ಕೂ ಅಧಿಕ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವೆ. ಮುಂದೆಯೂ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶಾಸಕರ ನಿಧಿ ಮೀಸಲಿಡುವೆ ಎಂದ ಅವರು ಹೇಳಿದರು.</p>.<p>ಹಿರೇಮಸಳಿ ನೂತನ ಗ್ರಂಥಾಲಯಕ್ಕೆ ₹ 2 ಲಕ್ಷ ಮೊತ್ತದಲ್ಲಿ ಆಯ್ದ ಪುಸ್ತಕ ಖರೀದಿಸಿ ಕೊಡುವುದಾಗಿ ಭರವಸೆ ನೀಡಿದರು.</p>.<p>ಇಂಡಿ ವಿಧಾನಸಭೆ ಕ್ಷೇತ್ರ ಸರ್ವಾಂಗೀಣ ಪ್ರಗತಿ ಸಾಧಿಸುತ್ತಿದೆ. ಲಿಂಬೆ ಅಭಿವೃದ್ಧಿ ನಿಗಮ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯಿಂದಾಗಿ ಸಾಕಷ್ಟು ಅನುಕೂಲವಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳುವೆ. ಗ್ರಾಮಸ್ಥರ ಮನವಿ ಮೇರೆಗೆ ಹಿರೇಮಸಳಿ ಹಳ್ಳದ ಸೇತುವೆ ನಿರ್ಮಿಸುವ ಭರವಸೆ ನೀಡಿದರು.</p>.<p>ಮಾಜಿ ಶಾಸಕ ಆರ್.ಆರ್. ಕಲ್ಲೂರ ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಶಾಸಕನಾಗಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿರುವೆ. ಇದೀಗ ಶಾಸಕ ಯಶವಂತರಾಯಗೌಡ ಪಾಟೀಲ ಆ ಅಭಿವೃದ್ಧಿ ಕಾರ್ಯ ಮುನ್ನಡೆಸುತ್ತಿದ್ದಾರೆ. ಅವರು ಇನ್ನೊಮ್ಮೆ ಶಾಸಕರಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮೆರೆಯಬೇಕು ಎಂದರು.</p>.<p>ಶರಣಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು.ಖ್ಯಾತ ವೈದ್ಯ ಡಾ.ಎಂ.ಎಸ್. ಕಲ್ಲೂರ,ಸಿದ್ರಾಯ ಭಾವಿಕಟ್ಟಿ, ಎಸ್. ಬಿ. ಕಲ್ಲೂರ, ಪುಂಡಲಿಕ ಕಪಾಲಿ, ಎಂ.ಐ. ಬಗಲಿ, ಪೀರು ಮನಮಿ, ಮಹಾದೇವಪ್ಪ ಏವೂರ, ಪರಶುರಾಮ ಭಾಸಗಿ, ಶಿಕ್ಷಕ ಐ.ಎಸ್. ಮಾಶಾಳ, ಪ್ರವೀಣ ಮನಮಿ, ಪಿಡಿಒ ಸಿದ್ರಾಮ ಸಿನಿಖೇಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯ. ಹೀಗಾಗಿ ಶಾಸಕರ ನಿಧಿಯನ್ನು ಸಮುದಾಯ ಭವನಗಳಿಗೆ ಬದಲಾಗಿ ಶಿಕ್ಷಣಕ್ಕೆ ಮೀಸಲಿಡಲು ತೀರ್ಮಾನಿಸಿದ್ದೇನೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.</p>.<p>ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಿದ್ದಪ್ಪ ಭೀಮರಾಯ ಕಲ್ಲೂರ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಶಾಸಕರ ನಿಧಿ ₹2 ಕೋಟಿಯಲ್ಲಿ ₹ 70 ಲಕ್ಷಕ್ಕೂ ಅಧಿಕ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವೆ. ಮುಂದೆಯೂ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶಾಸಕರ ನಿಧಿ ಮೀಸಲಿಡುವೆ ಎಂದ ಅವರು ಹೇಳಿದರು.</p>.<p>ಹಿರೇಮಸಳಿ ನೂತನ ಗ್ರಂಥಾಲಯಕ್ಕೆ ₹ 2 ಲಕ್ಷ ಮೊತ್ತದಲ್ಲಿ ಆಯ್ದ ಪುಸ್ತಕ ಖರೀದಿಸಿ ಕೊಡುವುದಾಗಿ ಭರವಸೆ ನೀಡಿದರು.</p>.<p>ಇಂಡಿ ವಿಧಾನಸಭೆ ಕ್ಷೇತ್ರ ಸರ್ವಾಂಗೀಣ ಪ್ರಗತಿ ಸಾಧಿಸುತ್ತಿದೆ. ಲಿಂಬೆ ಅಭಿವೃದ್ಧಿ ನಿಗಮ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯಿಂದಾಗಿ ಸಾಕಷ್ಟು ಅನುಕೂಲವಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳುವೆ. ಗ್ರಾಮಸ್ಥರ ಮನವಿ ಮೇರೆಗೆ ಹಿರೇಮಸಳಿ ಹಳ್ಳದ ಸೇತುವೆ ನಿರ್ಮಿಸುವ ಭರವಸೆ ನೀಡಿದರು.</p>.<p>ಮಾಜಿ ಶಾಸಕ ಆರ್.ಆರ್. ಕಲ್ಲೂರ ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಶಾಸಕನಾಗಿ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿರುವೆ. ಇದೀಗ ಶಾಸಕ ಯಶವಂತರಾಯಗೌಡ ಪಾಟೀಲ ಆ ಅಭಿವೃದ್ಧಿ ಕಾರ್ಯ ಮುನ್ನಡೆಸುತ್ತಿದ್ದಾರೆ. ಅವರು ಇನ್ನೊಮ್ಮೆ ಶಾಸಕರಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮೆರೆಯಬೇಕು ಎಂದರು.</p>.<p>ಶರಣಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು.ಖ್ಯಾತ ವೈದ್ಯ ಡಾ.ಎಂ.ಎಸ್. ಕಲ್ಲೂರ,ಸಿದ್ರಾಯ ಭಾವಿಕಟ್ಟಿ, ಎಸ್. ಬಿ. ಕಲ್ಲೂರ, ಪುಂಡಲಿಕ ಕಪಾಲಿ, ಎಂ.ಐ. ಬಗಲಿ, ಪೀರು ಮನಮಿ, ಮಹಾದೇವಪ್ಪ ಏವೂರ, ಪರಶುರಾಮ ಭಾಸಗಿ, ಶಿಕ್ಷಕ ಐ.ಎಸ್. ಮಾಶಾಳ, ಪ್ರವೀಣ ಮನಮಿ, ಪಿಡಿಒ ಸಿದ್ರಾಮ ಸಿನಿಖೇಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>