<p><strong>ತಾಳಿಕೋಟೆ:</strong> ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ. ಸಾಗರ ಬಣ) ಜಿಲ್ಲಾ ಘಟಕ ಹಾಗೂ ಕಲಕೇರಿ ಗ್ರಾಮ ಘಟಕದ ವತಿಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಮಂಗಳವಾರವೂ ಮುಂದುವರಿಯಿತು.</p>.<p>‘ಕಲಕೇರಿ ಭಾಗದ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಲಕೇರಿ ಸುತ್ತಲಿನ ಅಸ್ಕಿ, ಹುಣಶಾಳ, ಬೂದಿಹಾಳ ಕೆರೆಗಳಿಗೂ ನೀರು ತುಂಬಿಸಬೇಕು. ಬೂದಿಹಾಳ–ಪೀರಾಪೂರ ಏತ ನೀರಾವರಿಯಡಿ ರೈತರಿಗೆ ಪರಿಹಾರ ನೀಡಬೇಕು. ಜಲಜೀವನ್ ಮಿಷನ್ ಕಾಮಗಾರಿ ಕಳಪೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಈ ಕಾಮಗಾರಿಗಾಗಿ ಅಗೆದಿರುವ ಸಿಸಿ ರಸ್ತೆ ದುರಸ್ತಿಯಾಗಬೇಕು’ ಎಂದು ಧರಣಿನಿರತರು ಆಗ್ರಹಿಸಿದರು.</p>.<p>‘ಕೃಷಿ ಕೆಲಸಗಳಿಗೆ ನಿತ್ಯ 7 ತಾಸು 3 ಪೇಸ್ ಹಾಗೂ ರಾತ್ರಿ 2 ಪೇಸ್ ವಿದ್ಯುತ್ ನೀಡಬೇಕು. ಹಾಳಾದ ರಸ್ತೆಗಳನ್ನು ದುರಸ್ತಿ ಮಾಡಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಸಂಖ್ಯೆ ಹೆಚ್ಚಿಸಿ, ಪ್ರತಿ ತಿಂಗಳು ಸಮಪರ್ಕವಾಗಿ ವೇತನ ನೀಡಬೇಕು. ನರೇಗಾ ಯೋಜನೆಯಡಿ ರೈತರ ಜಮೀನಿನಲ್ಲಿ ಕೆಲಸ ಮಾಡಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಕಲಕೇರಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಪ್ರಾರಂಭಿಸಬೇಕು. ಜನ ವಸತಿ ಪ್ರದೇಶದಿಂದ ಮದ್ಯ ಮಾರಾಟ ಅಂಗಡಿ ಸ್ಥಳಾಂತರಿಸಬೇಕು. ಮಟ್ಕಾ ಮತ್ತು ಮದ್ಯ ಅಕ್ರಮ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಸ್. ಮಸಳಿ ಅವರು ಸೋಮವಾರ ಪ್ರತಿಭಟನಕಾರರನ್ನು ಭೇಟಿಯಾಗಿ ಮನೊಲಿಸಲು ಯತ್ನಿಸಿದರು. ಬೇಡಿಕೆ ಈಡೇರುವವರೆಗೆ ಧರಣಿ ಮುಂದುವರಿಸುವುದಾಗಿ ಪ್ರತಿಭಟನಕಾರರು ಪಟ್ಟುಹಿಡಿದರು. </p>.<p>ಯಮನೂರಿ ಸಿಂದಗಿರಿ, ಪ್ರಕಾಶ ನಾಟಿಕಾರ, ಬಸವರಾಜ ಗುಡಸಲಮನಿ, ಆನಂದ ಹೊಸಮನಿ, ಸೋಮು ಹೊಸಮನಿ, ದೇವಿಂದ್ರ ವಡ್ಡರ, ಸಿದ್ದು ರಾಯಣ್ಣವರ, ವೈ.ಸಿ. ಮಯೂರ, ಸಂತೋಷ ಮನಗೇರಿ, ಪರಶುರಾಮ ಬ್ಯಾಕೋಡ, ಸೋಮಶೇಖರ ಬಡಿಗೇರ, ಯಮನೂರಿ ಸಿಂಧಗಿರಿ, ಮಲ್ಲಪ್ಪ ನಡುವಿನಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಳಿಕೋಟೆ:</strong> ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ. ಸಾಗರ ಬಣ) ಜಿಲ್ಲಾ ಘಟಕ ಹಾಗೂ ಕಲಕೇರಿ ಗ್ರಾಮ ಘಟಕದ ವತಿಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಮಂಗಳವಾರವೂ ಮುಂದುವರಿಯಿತು.</p>.<p>‘ಕಲಕೇರಿ ಭಾಗದ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಕಲಕೇರಿ ಸುತ್ತಲಿನ ಅಸ್ಕಿ, ಹುಣಶಾಳ, ಬೂದಿಹಾಳ ಕೆರೆಗಳಿಗೂ ನೀರು ತುಂಬಿಸಬೇಕು. ಬೂದಿಹಾಳ–ಪೀರಾಪೂರ ಏತ ನೀರಾವರಿಯಡಿ ರೈತರಿಗೆ ಪರಿಹಾರ ನೀಡಬೇಕು. ಜಲಜೀವನ್ ಮಿಷನ್ ಕಾಮಗಾರಿ ಕಳಪೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಈ ಕಾಮಗಾರಿಗಾಗಿ ಅಗೆದಿರುವ ಸಿಸಿ ರಸ್ತೆ ದುರಸ್ತಿಯಾಗಬೇಕು’ ಎಂದು ಧರಣಿನಿರತರು ಆಗ್ರಹಿಸಿದರು.</p>.<p>‘ಕೃಷಿ ಕೆಲಸಗಳಿಗೆ ನಿತ್ಯ 7 ತಾಸು 3 ಪೇಸ್ ಹಾಗೂ ರಾತ್ರಿ 2 ಪೇಸ್ ವಿದ್ಯುತ್ ನೀಡಬೇಕು. ಹಾಳಾದ ರಸ್ತೆಗಳನ್ನು ದುರಸ್ತಿ ಮಾಡಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಸಂಖ್ಯೆ ಹೆಚ್ಚಿಸಿ, ಪ್ರತಿ ತಿಂಗಳು ಸಮಪರ್ಕವಾಗಿ ವೇತನ ನೀಡಬೇಕು. ನರೇಗಾ ಯೋಜನೆಯಡಿ ರೈತರ ಜಮೀನಿನಲ್ಲಿ ಕೆಲಸ ಮಾಡಲು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ಕಲಕೇರಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಪ್ರಾರಂಭಿಸಬೇಕು. ಜನ ವಸತಿ ಪ್ರದೇಶದಿಂದ ಮದ್ಯ ಮಾರಾಟ ಅಂಗಡಿ ಸ್ಥಳಾಂತರಿಸಬೇಕು. ಮಟ್ಕಾ ಮತ್ತು ಮದ್ಯ ಅಕ್ರಮ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಸ್. ಮಸಳಿ ಅವರು ಸೋಮವಾರ ಪ್ರತಿಭಟನಕಾರರನ್ನು ಭೇಟಿಯಾಗಿ ಮನೊಲಿಸಲು ಯತ್ನಿಸಿದರು. ಬೇಡಿಕೆ ಈಡೇರುವವರೆಗೆ ಧರಣಿ ಮುಂದುವರಿಸುವುದಾಗಿ ಪ್ರತಿಭಟನಕಾರರು ಪಟ್ಟುಹಿಡಿದರು. </p>.<p>ಯಮನೂರಿ ಸಿಂದಗಿರಿ, ಪ್ರಕಾಶ ನಾಟಿಕಾರ, ಬಸವರಾಜ ಗುಡಸಲಮನಿ, ಆನಂದ ಹೊಸಮನಿ, ಸೋಮು ಹೊಸಮನಿ, ದೇವಿಂದ್ರ ವಡ್ಡರ, ಸಿದ್ದು ರಾಯಣ್ಣವರ, ವೈ.ಸಿ. ಮಯೂರ, ಸಂತೋಷ ಮನಗೇರಿ, ಪರಶುರಾಮ ಬ್ಯಾಕೋಡ, ಸೋಮಶೇಖರ ಬಡಿಗೇರ, ಯಮನೂರಿ ಸಿಂಧಗಿರಿ, ಮಲ್ಲಪ್ಪ ನಡುವಿನಕೇರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>