<p><strong>ವಿಜಯಪುರ</strong>: ‘ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಚಹಾ ಮಾರಾಟ ಮಾಡಿರುವುದು ಗೊತ್ತಿಲ್ಲ. ಆದರೆ, ದೇಶವನ್ನು ಮಾರಾಟ ಮಾಡುವುದರಲ್ಲಿ ಅನುಮಾನವಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಅದಾನಿ, ಅಂಬಾನಿ ಈ ದೇಶದ ಮಾಲೀಕರಾಗುವ ಕಾಲ ದೂರ ಉಳಿದಿಲ್ಲ. ಈಗಾಗಲೇ ಇವರ ಒಡತನಕ್ಕೆ ವಿಮಾನ ನಿಲ್ದಾಣ, ಬಂದರ್, ತೈಲ ಕಂಪನಿಗಳನ್ನು ಮೋದಿ ಅವರು ಮಾರಾಟ ಮಾಡಿದ್ದಾರೆ. ರೈಲ್ವೆಯನ್ನು ಖಾಸಗಿಕರಣ ಮಾಡಿದ್ದಾರೆ. ಇನ್ನು ದೇಶದ ಜನರನ್ನು ಇವರಿಗೆ ಒತ್ತೆ ಇಡುವುದು ಮಾತ್ರ ಬಾಕಿ ಇದೆ ಎಂದರು.</p>.<p>ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಧೂಳಿಪಟವಾಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸೂರ್ಯ, ಚಂದ್ರರಷ್ಟೇ ನಿಶ್ಚಿತ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಬಿಜೆಪಿ ಎಷ್ಟು ದಿನ ಅಧಿಕಾರದಲ್ಲಿ ಇರುತ್ತದೆಯೋ ಅಷ್ಟು ದಿನ ರಾಜ್ಯದ ಜನತೆಗೆ ಸಂಕಷ್ಟ ತಪ್ಪಿದಲ್ಲ. ಬಿಜೆಪಿಯವರು ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ರಾಜ್ಯದ ಜನತೆಗೆ ಅಷ್ಟು ಅನುಕೂಲ ಎಂದರು.</p>.<p class="Subhead"><strong>ಎಲ್ಲರಿಗೂ ಲಸಿಕೆ ಹಾಕಿಸಿ:</strong> ದೇಶದಲ್ಲಿ ಇದುವರೆಗೆ ಶೇ 5ರಷ್ಟು ಜನರಿಗೆ ಮಾತ್ರ ಕೋವಿಡ್ ಲಸಿಕೆ ಹಾಕಲಾಗಿದೆ. ಮೂರನೇ ಅಲೆ ಭಯ ವ್ಯಾಪಕವಾಗಿದೆ. ಆದಷ್ಟು ಶೀಘ್ರ ದೇಶದ 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರಿಗೆ ತ್ವರಿತವಾಗಿ ಲಸಿಕೆ ನೀಡಲು ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಕೇಂದ್ರ ಸರ್ಕಾರ ದೇಶದ ಜನರಿಗೆ ಕೋವಿಡ್ ಲಸಿಕೆ ಹಾಕುವುದನ್ನು ಬಿಟ್ಟು 196 ದೇಶಗಳಿಗೆ ಲಸಿಕೆಯನ್ನು ರಫ್ತು ಮಾಡಿದರು. ದೇಶದ ಜನರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಆರೋಪಿಸಿದರು.</p>.<p>ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಇದುವರೆಗೆ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಎರಡನೇ ಅಲೆಯ ಸಂದರ್ಭದಲ್ಲಿ ಪರಿಸ್ಥಿತಿ ಏನಿತ್ತೋ ಅದೇ ಪರಿಸ್ಥಿತಿ ಈಗಲೂ ಇದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕೋವಿಡ್ನಿಂದ ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕೋಟ್ಯಂತರ ಜನ ನಿರುದ್ಯೋಗಿಗಳಾಗಿದ್ದಾರೆ ಎಂದು ಅರೋಪಿಸಿದರು.</p>.<p class="Subhead"><strong>ಸರ್ಕಾರ ವಿಫಲ: </strong>ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಳುಗಡೆಯಾಗಲಿರುವ ಕೃಷಿ ಭೂಮಿ ಸ್ವಾಧೀನವಾಗಬೇಕಿದೆ, ಮನೆಗಳಿಗೆ ಪರಿಹಾರ ನೀಡಬೇಕಿದೆ. ಆದರೆ, ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p>ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯೋಜನೆಯ ಅನುಷ್ಠಾನಕ್ಕೆ ಮೊದಲ ಆದ್ಯತೆ ನೀಡಲಿದೆ. ಇದರಿಂದ ವಿಜಯಪುರ ಜಿಲ್ಲೆ ಸಂಪೂರ್ಣ ನೀರಾವರಿಗೆ ಒಳಪಡಲಿದೆ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಅಲಗೂರ, ಮಹಿಳಾ ಕಾಂಗ್ರೆಸ್ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ವಿಠಲ ಕಟಕದೊಂಡ, ಎಸ್.ಎಂ.ಪಾಟೀಲ ಗಣಿಯಾರ, ರಫೀಕ್ ಟಪಾಲ್, ಉಸ್ಮಾನ್ ಪಟೇಲ್, ಜಮೀರ್ ಅಹ್ಮದ್ ಭಕ್ಷಿ, ಆರ್.ಪಿ.ಶಹಾಪೂರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<p>***</p>.<p><strong>ಕಾಂಗ್ರೆಸ್ನಲ್ಲಿ ವಲಸೆ ಬಂದವರು, ಮೂಲ ಕಾಂಗ್ರೆಸಿಗರು ಎಂಬುದಿಲ್ಲ. ಒಂದೇ ಬಣ ಇದೆ. ಯಾವುದೇ ಭಿನ್ನಾಭಿಪ್ರಾಯವಿಲ್ಲ</strong></p>.<p><strong>–ಎಸ್.ಆರ್.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಚಹಾ ಮಾರಾಟ ಮಾಡಿರುವುದು ಗೊತ್ತಿಲ್ಲ. ಆದರೆ, ದೇಶವನ್ನು ಮಾರಾಟ ಮಾಡುವುದರಲ್ಲಿ ಅನುಮಾನವಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಅದಾನಿ, ಅಂಬಾನಿ ಈ ದೇಶದ ಮಾಲೀಕರಾಗುವ ಕಾಲ ದೂರ ಉಳಿದಿಲ್ಲ. ಈಗಾಗಲೇ ಇವರ ಒಡತನಕ್ಕೆ ವಿಮಾನ ನಿಲ್ದಾಣ, ಬಂದರ್, ತೈಲ ಕಂಪನಿಗಳನ್ನು ಮೋದಿ ಅವರು ಮಾರಾಟ ಮಾಡಿದ್ದಾರೆ. ರೈಲ್ವೆಯನ್ನು ಖಾಸಗಿಕರಣ ಮಾಡಿದ್ದಾರೆ. ಇನ್ನು ದೇಶದ ಜನರನ್ನು ಇವರಿಗೆ ಒತ್ತೆ ಇಡುವುದು ಮಾತ್ರ ಬಾಕಿ ಇದೆ ಎಂದರು.</p>.<p>ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಧೂಳಿಪಟವಾಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸೂರ್ಯ, ಚಂದ್ರರಷ್ಟೇ ನಿಶ್ಚಿತ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಬಿಜೆಪಿ ಎಷ್ಟು ದಿನ ಅಧಿಕಾರದಲ್ಲಿ ಇರುತ್ತದೆಯೋ ಅಷ್ಟು ದಿನ ರಾಜ್ಯದ ಜನತೆಗೆ ಸಂಕಷ್ಟ ತಪ್ಪಿದಲ್ಲ. ಬಿಜೆಪಿಯವರು ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ರಾಜ್ಯದ ಜನತೆಗೆ ಅಷ್ಟು ಅನುಕೂಲ ಎಂದರು.</p>.<p class="Subhead"><strong>ಎಲ್ಲರಿಗೂ ಲಸಿಕೆ ಹಾಕಿಸಿ:</strong> ದೇಶದಲ್ಲಿ ಇದುವರೆಗೆ ಶೇ 5ರಷ್ಟು ಜನರಿಗೆ ಮಾತ್ರ ಕೋವಿಡ್ ಲಸಿಕೆ ಹಾಕಲಾಗಿದೆ. ಮೂರನೇ ಅಲೆ ಭಯ ವ್ಯಾಪಕವಾಗಿದೆ. ಆದಷ್ಟು ಶೀಘ್ರ ದೇಶದ 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹರಿಗೆ ತ್ವರಿತವಾಗಿ ಲಸಿಕೆ ನೀಡಲು ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಕೇಂದ್ರ ಸರ್ಕಾರ ದೇಶದ ಜನರಿಗೆ ಕೋವಿಡ್ ಲಸಿಕೆ ಹಾಕುವುದನ್ನು ಬಿಟ್ಟು 196 ದೇಶಗಳಿಗೆ ಲಸಿಕೆಯನ್ನು ರಫ್ತು ಮಾಡಿದರು. ದೇಶದ ಜನರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ ಆರೋಪಿಸಿದರು.</p>.<p>ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಇದುವರೆಗೆ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಎರಡನೇ ಅಲೆಯ ಸಂದರ್ಭದಲ್ಲಿ ಪರಿಸ್ಥಿತಿ ಏನಿತ್ತೋ ಅದೇ ಪರಿಸ್ಥಿತಿ ಈಗಲೂ ಇದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಕೋವಿಡ್ನಿಂದ ದೇಶದ ಅರ್ಥವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕೋಟ್ಯಂತರ ಜನ ನಿರುದ್ಯೋಗಿಗಳಾಗಿದ್ದಾರೆ ಎಂದು ಅರೋಪಿಸಿದರು.</p>.<p class="Subhead"><strong>ಸರ್ಕಾರ ವಿಫಲ: </strong>ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಳುಗಡೆಯಾಗಲಿರುವ ಕೃಷಿ ಭೂಮಿ ಸ್ವಾಧೀನವಾಗಬೇಕಿದೆ, ಮನೆಗಳಿಗೆ ಪರಿಹಾರ ನೀಡಬೇಕಿದೆ. ಆದರೆ, ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p>ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯೋಜನೆಯ ಅನುಷ್ಠಾನಕ್ಕೆ ಮೊದಲ ಆದ್ಯತೆ ನೀಡಲಿದೆ. ಇದರಿಂದ ವಿಜಯಪುರ ಜಿಲ್ಲೆ ಸಂಪೂರ್ಣ ನೀರಾವರಿಗೆ ಒಳಪಡಲಿದೆ ಎಂದು ಹೇಳಿದರು.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಅಲಗೂರ, ಮಹಿಳಾ ಕಾಂಗ್ರೆಸ್ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರೀಫ್, ವಿಠಲ ಕಟಕದೊಂಡ, ಎಸ್.ಎಂ.ಪಾಟೀಲ ಗಣಿಯಾರ, ರಫೀಕ್ ಟಪಾಲ್, ಉಸ್ಮಾನ್ ಪಟೇಲ್, ಜಮೀರ್ ಅಹ್ಮದ್ ಭಕ್ಷಿ, ಆರ್.ಪಿ.ಶಹಾಪೂರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<p>***</p>.<p><strong>ಕಾಂಗ್ರೆಸ್ನಲ್ಲಿ ವಲಸೆ ಬಂದವರು, ಮೂಲ ಕಾಂಗ್ರೆಸಿಗರು ಎಂಬುದಿಲ್ಲ. ಒಂದೇ ಬಣ ಇದೆ. ಯಾವುದೇ ಭಿನ್ನಾಭಿಪ್ರಾಯವಿಲ್ಲ</strong></p>.<p><strong>–ಎಸ್.ಆರ್.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>