<p><strong>ವಿಜಯಪುರ</strong>: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಆದೇಶವನ್ನು ಏಪ್ರಿಲ್ 10 ರೊಳಗಾಗಿ ಹಿಂಪಡೆಯದಿದ್ದರೆ ಜನಾಂದೋಲನ ನಡೆಸುವುದಾಗಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.</p><p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಂಚಮಸಾಲಿ ಸಮಾಜದ ಶಾಸಕರಾದ ಯತ್ನಾಳರಿಗೆ ಅನ್ಯಾಯವಾಗಿರುವುದರ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಆದರೆ, ಕೆಲವರು ನಮ್ಮ ಸಮಾಜದ ವಿಷಯದಲ್ಲಿ ಮೂಗು ತೂರಿಸುತ್ತಿರುವುದು ಖಂಡನೀಯ ಎಂದರು.</p><p>ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅನ್ಯಾಯವಾದರೂ ನಾನು ಅವರ ಪರವಾಗಿ ನಿಲ್ಲುವೆ. ನಾನೊಬ್ಬನೇ ಅಲ್ಲ, ಎಲ್ಲ ಸಮಾಜದ ಶ್ರೀಗಳು ಸಹ ತಮ್ಮ ಸಮಾಜಕ್ಕೆ ಅನ್ಯಾಯವಾದಾಗ ಪ್ರತಿಭಟನೆ ಮಾಡಿರುವ ಉದಾಹರಣೆ ಇದೆ ಎಂದು ಹೇಳಿದರು. </p><p>ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಕಳಕಳಿ ಹೊಂದಿರುವ ಜನಪರ ನಾಯಕ ಯತ್ನಾಳ ಅವರ ಬೆನ್ನಿಗೆ ನಿಂತಿದ್ದೇನೆ, ಉಚ್ಛಾಟನೆ ಮಾಡಿರುವುದನ್ನು ಖಂಡಿಸಿದ್ದೇನೆ ಎಂದರು.</p><p>ಕಾರಣವಿಲ್ಲದೇ ಒಬ್ಬ ಪ್ರಭಾವಿ ನಾಯಕನನ್ನು ಉಚ್ಛಾಟನೆ ಮಾಡಿರುವುದು ಸಮಸ್ತ ಪಂಚಮಸಾಲಿ ಸಮಾಜದ ಜನರ ಭಾವನೆಗಳಿಗೆ ನೋವು ತರಿಸಿದೆ. ಪಂಚಮಸಾಲಿ ಸಮಾಜ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.</p><p>ಯತ್ನಾಳ ಅವರ ಉಚ್ಚಾಟನೆ ವಿರುದ್ಧ ನಡೆಯುವ ಹೋರಾಟ ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿ ಪಕ್ಷದ ವಿರುದ್ಧ ನಾವು ಹೋರಾಟ ಮಾಡುತ್ತಿಲ್ಲ, ಯತ್ನಾಳರ ಉಚ್ಚಾಟನೆಗೆ ಕಾರಣರಾದ ವ್ಯಕ್ತಿಯ ವಿರುದ್ಧ ನಾವು ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಶ್ರೀಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಆದೇಶವನ್ನು ಏಪ್ರಿಲ್ 10 ರೊಳಗಾಗಿ ಹಿಂಪಡೆಯದಿದ್ದರೆ ಜನಾಂದೋಲನ ನಡೆಸುವುದಾಗಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.</p><p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಂಚಮಸಾಲಿ ಸಮಾಜದ ಶಾಸಕರಾದ ಯತ್ನಾಳರಿಗೆ ಅನ್ಯಾಯವಾಗಿರುವುದರ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಆದರೆ, ಕೆಲವರು ನಮ್ಮ ಸಮಾಜದ ವಿಷಯದಲ್ಲಿ ಮೂಗು ತೂರಿಸುತ್ತಿರುವುದು ಖಂಡನೀಯ ಎಂದರು.</p><p>ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅನ್ಯಾಯವಾದರೂ ನಾನು ಅವರ ಪರವಾಗಿ ನಿಲ್ಲುವೆ. ನಾನೊಬ್ಬನೇ ಅಲ್ಲ, ಎಲ್ಲ ಸಮಾಜದ ಶ್ರೀಗಳು ಸಹ ತಮ್ಮ ಸಮಾಜಕ್ಕೆ ಅನ್ಯಾಯವಾದಾಗ ಪ್ರತಿಭಟನೆ ಮಾಡಿರುವ ಉದಾಹರಣೆ ಇದೆ ಎಂದು ಹೇಳಿದರು. </p><p>ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಕಳಕಳಿ ಹೊಂದಿರುವ ಜನಪರ ನಾಯಕ ಯತ್ನಾಳ ಅವರ ಬೆನ್ನಿಗೆ ನಿಂತಿದ್ದೇನೆ, ಉಚ್ಛಾಟನೆ ಮಾಡಿರುವುದನ್ನು ಖಂಡಿಸಿದ್ದೇನೆ ಎಂದರು.</p><p>ಕಾರಣವಿಲ್ಲದೇ ಒಬ್ಬ ಪ್ರಭಾವಿ ನಾಯಕನನ್ನು ಉಚ್ಛಾಟನೆ ಮಾಡಿರುವುದು ಸಮಸ್ತ ಪಂಚಮಸಾಲಿ ಸಮಾಜದ ಜನರ ಭಾವನೆಗಳಿಗೆ ನೋವು ತರಿಸಿದೆ. ಪಂಚಮಸಾಲಿ ಸಮಾಜ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.</p><p>ಯತ್ನಾಳ ಅವರ ಉಚ್ಚಾಟನೆ ವಿರುದ್ಧ ನಡೆಯುವ ಹೋರಾಟ ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿ ಪಕ್ಷದ ವಿರುದ್ಧ ನಾವು ಹೋರಾಟ ಮಾಡುತ್ತಿಲ್ಲ, ಯತ್ನಾಳರ ಉಚ್ಚಾಟನೆಗೆ ಕಾರಣರಾದ ವ್ಯಕ್ತಿಯ ವಿರುದ್ಧ ನಾವು ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಶ್ರೀಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>