ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಆವರಿಸಿದ ದಟ್ಟ ಮಂಜು, ಶೀತಗಾಳಿ

Last Updated 15 ಜನವರಿ 2022, 4:39 IST
ಅಕ್ಷರ ಗಾತ್ರ

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರ ದಟ್ಟ ಮಂಜು ಆವರಿಸಿದೆ. ಜೊತೆಗೆ ಶೀತಗಾಳಿ ಬೀಸುತ್ತಿದೆ.

ಬೆಳಿಗ್ಗೆ 10 ಗಂಟೆಯಾದರೂ ಸೂರ್ಯನ ದರ್ಶನವಿಲ್ಲ. ಶೀತ ಗಾಳಿ, ಮೈ ಕೊರೆಯುವ ಚಳಿಯ ಕಾರಣಕ್ಕೆ ಜನ ಮನೆಯಿಂದ ಹೊರಬರಲು ಅಂಜುವಂತಾಗಿದೆ.

ತಾಪಮಾನ 8 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದ್ದು, ಚಳಿಯಿಂದ ಪಾರಾಗಲು ಜನ ಹೆಚ್ಚೆಚ್ಚು
ಟೀ, ಕಾಫಿ ಹೀರುತ್ತಿದ್ದಾರೆ. ಬಹುತೇಕರು ಶ್ವೆಟರ್, ಟೊಪ್ಪಿ ಮೊರೆ ಹೋಗಿದ್ದಾರೆ.

ಬೆಳ್ಳಂಬೆಳಿಗ್ಗೆ ಹಾಲು, ದಿನಪತ್ರಿಕೆ ವಿತರಕರು ಚಳಿಯಿಂದ ತೊಂದರೆಗೆ ಒಳಗಾಗಿದ್ದಾರೆ. ನಿಗದಿತ ಸಮಯಕ್ಕಿಂತ ವಿಳಂಬವಾಗಿ ಹಾಲು, ಪತ್ರಿಕೆಗಳನ್ನು ವಿತರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT