ವಿಜಯಪುರ: ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆದ ಆಶ್ರಮಕ್ಕೆ ಬುಧವಾರ ಬೆಳಿಗ್ಗೆಯಿಂದಲೇ ಸಹಸ್ರಾರು ಭಕ್ತರು ಭೇಟಿ ನೀಡಿ ಚಿತಾಭಸ್ಮದ ದರ್ಶನ ಪಡೆಯುತ್ತಿದ್ದಾರೆ.
ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದವರು, ಪಡೆಯಲಾಗದವರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಆಶ್ರಮಕ್ಕೆ ಬಂದು ಸರದಿಯಲ್ಲಿ ನಿಂತು ಚಿತಾಭಸ್ಮಕ್ಕೆ ಕೈಮುಗಿದು, ಕಂಬನಿ ಮಿಡಿಯುತ್ತಿದ್ದಾರೆ.
ಆಶ್ರಮದ ಗಿಡಮರಗಳ ಕೆಳಗೆ ಕುಳಿತು ಸಿದ್ದೇಶ್ವರ ಶ್ರೀಗಳ ಗುಣಗಾನ, ಭಜನೆ ಮಾಡುತ್ತಿದ್ದಾರೆ.
ಶ್ರೀಗಳು ದೈಹಿಕವಾಗಿ ನಮ್ಮ ನಡುವೆ ಇಲ್ಲವಾದರೂ, ಅವರ ಪ್ರವಚನಗಳು, ನೀತಿ ಬೋಧನೆಗಳು, ವಿಚಾರಗಳು ನಮ್ಮಲ್ಲಿ ನಿರಂತರವಾಗಿರುತ್ತದೆ ಎಂದರು.