ವಿಜಯಪುರ: ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿ ಸಾವಿಗೀಡಾಗಿರುವ ಘಟನೆ ಸಿಂದಗಿ ತಾಲ್ಲೂಕಿನ ಯರಗಲ್ ಕ್ರಾಸ್ ಬಳಿ ಮಂಗಳವಾರ ನಡೆದಿದೆ.
ಅಪಘಾತದಲ್ಲಿ ಬಿ.ಬಿ ಇಂಗಳಗಿ ಗ್ರಾಮದ ಮಹಾಂತೇಶ ಕಾಸಣ್ಣ ಹಡಪದ (27), ಸದ್ದಾಂ ಬಂದಗಿಸಾಬ್ ನಾಯ್ಕೋಡಿ (27), ಮಂಜುನಾಥ ದೇವಪ್ಪ ದೊಡ್ಡಮನಿ (24) ಮೃತಪಟ್ಟಿರುವ ದುರ್ದೈವಿಗಳು.
ಟ್ಯಾಂಕರ್ ಚಾಲಕ ಅಪಘಾತವಾದ ಬಳಿಕ ಪರಾರಿಯಾಗಿದ್ದಾನೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.