ಚಿಕ್ಕಗಲಗಲಿಯಿಂದ ನಂದಿ ಸಕ್ಕರೆ ಕಾರ್ಖಾನೆ ಕಡೆಗೆ ಹೊರಟ ಹೊಂಡಾ ಶೈನ್ ಬೈಕ್ನಲ್ಲಿ ಹೊರಟ ಗಲಗಲಿ ಗ್ರಾಮದ ನಿವಾಸಿಗಳಾದ ಲಕ್ಷಣ ಮಾದರ, ಕಾಶಿ ಬಾತಿ ಮಾದರ ಹಾಗೂ ನಂದಿ ಸಕ್ಕರೆ ಕಾರ್ಖಾನೆ ಕಡೆಯಿಂದ ಚಿಕ್ಕಗಲಗಲಿ ಕಡೆಗೆ ಪಲ್ಸರ್ ಬೈಕ್ನಲ್ಲಿ ಹೊರಟ ಅನೀಲ ಮೇಲಗೇರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿವಪೂಜಯ್ಯ ಹಿರೇಮಠ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಬಬಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.