ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿ ಉಗುರು ಪ್ರಕರಣ: ಬಿಜೆಪಿ ಮುಖಂಡನ ಮನೆಯಲ್ಲಿ ಪರಿಶೀಲನೆ

Published 26 ಅಕ್ಟೋಬರ್ 2023, 20:07 IST
Last Updated 26 ಅಕ್ಟೋಬರ್ 2023, 20:07 IST
ಅಕ್ಷರ ಗಾತ್ರ

ವಿಜಯಪುರ: ಬಿಜೆಪಿ ಮುಖಂಡ ಹಾಗೂ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ ಪುತ್ರ ಶಾಶ್ವತಗೌಡ ಪಾಟೀಲ ಅವರು ಪೆಂಡೆಂಟ್‌ನಲ್ಲಿ ಹುಲಿ ಉಗುರು ಹಾಕಿದ ಚಿತ್ರ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಬಬಲೇಶ್ವರ ನಾಕಾ ಬಳಿ ಇರುವ ಅವರ ಮನೆಯ ಮೇಲೆ ಗುರುವಾರ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲಿಸಿದರು.

‘ವಿಜುಗೌಡರ ಮನೆಯಲ್ಲಿ ಪರಿಶೀಲಿಸಿದಾಗ ಎರಡು ಹುಲಿ ಉಗುರು ಪತ್ತೆಯಾಗಿವೆ. ಅವುಗಳನ್ನು ವಶಕ್ಕೆ ಪಡೆದು, ಅಸಲಿ ಅಥವಾ ನಕಲಿ ಎಂಬುದನ್ನು ಖಚಿತ ಪಡಿಸಿಕೊಳ್ಳಲು ಹೈದರಾಬಾದ್‌ನಲ್ಲಿರುವ ಅರಣ್ಯ ಇಲಾಖೆಯ ಸಿಸಿಎಂಬಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ ತಿಳಿಸಿದರು.

‘ಹುಲಿ ಉಗುರು ಮಾದರಿಯನ್ನು ಏಳು ವರ್ಷಗಳ ಹಿಂದೆ ನಾನೇ ಖರೀದಿಸಿ, ಚಿನ್ನದಲ್ಲಿ ಪೆಂಡೆಂಟ್ ಮಾಡಿಸಿ, ನನ್ನ ಮಗ ಶಾಶ್ವತಗೌಡ ಪಾಟೀಲನಿಗೆ ನೀಡಿದ್ದೆ. ಅದು ಹುಲಿಯ ಅಸಲಿ ಉಗುರು ಅಲ್ಲ’ ಎಂದು ವಿಜುಗೌಡ ಪಾಟೀಲ ತಿಳಿಸಿದರು.

‘ಅರಣ್ಯ ಇಲಾಖೆಯ ಯಾವುದೇ ತನಿಖೆಗೆ ನಾವು ಸಿದ್ಧ. ನಮ್ಮ ಮಗನ ಪೋಟೋ ಇಟ್ಟುಕೊಂಡು ಕೆಲವರು ಚಿಲ್ಲರೆ ರಾಜಕಾರಣ ನಡೆಸಿದ್ದಾರೆ. ಅವರದ್ದು ನನ್ನ ಬಳಿ ಬಹಳ ಇದೆ’ ಎಂದರು.

ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ ಅರಣ್ಯಾಧಿಕಾರಿಗಳು
ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ ಅರಣ್ಯಾಧಿಕಾರಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT