<p><strong>ವಿಜಯಪುರ: </strong>ಅನಾರೋಗ್ಯದಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ನಿನ್ನೆ ತಡ ರಾತ್ರಿ ನಿಧನರಾಗಿರುವ ಸಿಂದಗಿಯ ಜೆಡಿಎಸ್ ಹಿರಿಯ ಎಂ.ಸಿ.ಮನಗೂಳಿ( 85) ಅವರ ಅಂತ್ಯಕ್ರಿಯೆ ಜ.29ರಂದು ಬೆಳಿಗ್ಗೆ 11ಕ್ಕೆ ಸಿಂದಗಿ ಪಟ್ಟಣದಲ್ಲಿ ನೆರವೇರಲಿದೆ.</p>.<p>ಬೆಂಗಳೂರಿನ ಅಪೋಲೊ ಆಸ್ಪತ್ರೆಯಿಂದ ರಸ್ತೆ ಮೂಲಕ ಮನಗೂಳಿ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದ್ದು, ಮಧ್ಯಾಹ್ನ 3 ಗಂಟೆಗೆ ಸಿಂದಗಿ ತಲುಪುವ ಸಾಧ್ಯತೆ ಇದೆ.<br />ಆರಂಭದಲ್ಲಿ ಶಾಸಕರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಕುಟುಂಬದವರ ಹಾಗೂ ಸಂಬಂಧಿಕರ ದರ್ಶನಕ್ಕೆ ಇಡಲಾಗುವುದು, ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಅವರ ಶಿಕ್ಷಣ ಸಂಸ್ಥೆಯಾದ ಶಿಕ್ಷಣ ಪ್ರಸಾರಕ ಮಂಡಳಿಯಲ್ಲಿ(ಎಚ್.ಜಿ.ಕಾಲೇಜ್) ಇಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.<br />ಶುಕ್ರವಾರ ಬೆಳಿಗ್ಗೆ 11ಕ್ಕೆ ಶಿಕ್ಷಣ ಸಂಸ್ಥೆಯ ಆವರಣದಲ್ಲೇ ಅಂತಿಮ ಸಂಸ್ಕಾರ ನಡೆಯಲಿದೆ.</p>.<p>ಸಕಲ ಸರ್ಕಾರಿ ಗೌರವಗಳೊಂದಿಗೆ, ಪರಸ್ಪರ ಅಂತರವನ್ನು ಕಾಪಾಡಿಕೊಂಡು ಹಾಗೂ ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಅಂತಿಮ ಸಂಸ್ಕಾರ ನೆರವೇರಿಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.</p>.<p>ಅವರಿಗೆ ಪತ್ನಿ ಸಿದ್ದಮ್ಮ, ಪುತ್ರರಾದ<br />ಡಾ. ಅರವಿಂದ ಮನಗೂಳಿ, ಅಶೋಕ ಮನಗೂಳಿ, ಡಾ. ಶಾಂತವೀರ ಮನಗೂಳಿ ( ಸಿಂದಗಿ ಪುರಸಭೆ ಅಧ್ಯಕ್ಷ), ಡಾ. ಚನ್ನವೀರ ಮನಗೂಳಿ ಹಾಗೂ ಪುತ್ರಿ ಅನ್ನಪೂರ್ಣ ನಿಡೋಣಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಅನಾರೋಗ್ಯದಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ನಿನ್ನೆ ತಡ ರಾತ್ರಿ ನಿಧನರಾಗಿರುವ ಸಿಂದಗಿಯ ಜೆಡಿಎಸ್ ಹಿರಿಯ ಎಂ.ಸಿ.ಮನಗೂಳಿ( 85) ಅವರ ಅಂತ್ಯಕ್ರಿಯೆ ಜ.29ರಂದು ಬೆಳಿಗ್ಗೆ 11ಕ್ಕೆ ಸಿಂದಗಿ ಪಟ್ಟಣದಲ್ಲಿ ನೆರವೇರಲಿದೆ.</p>.<p>ಬೆಂಗಳೂರಿನ ಅಪೋಲೊ ಆಸ್ಪತ್ರೆಯಿಂದ ರಸ್ತೆ ಮೂಲಕ ಮನಗೂಳಿ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದ್ದು, ಮಧ್ಯಾಹ್ನ 3 ಗಂಟೆಗೆ ಸಿಂದಗಿ ತಲುಪುವ ಸಾಧ್ಯತೆ ಇದೆ.<br />ಆರಂಭದಲ್ಲಿ ಶಾಸಕರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಕುಟುಂಬದವರ ಹಾಗೂ ಸಂಬಂಧಿಕರ ದರ್ಶನಕ್ಕೆ ಇಡಲಾಗುವುದು, ಬಳಿಕ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಅವರ ಶಿಕ್ಷಣ ಸಂಸ್ಥೆಯಾದ ಶಿಕ್ಷಣ ಪ್ರಸಾರಕ ಮಂಡಳಿಯಲ್ಲಿ(ಎಚ್.ಜಿ.ಕಾಲೇಜ್) ಇಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.<br />ಶುಕ್ರವಾರ ಬೆಳಿಗ್ಗೆ 11ಕ್ಕೆ ಶಿಕ್ಷಣ ಸಂಸ್ಥೆಯ ಆವರಣದಲ್ಲೇ ಅಂತಿಮ ಸಂಸ್ಕಾರ ನಡೆಯಲಿದೆ.</p>.<p>ಸಕಲ ಸರ್ಕಾರಿ ಗೌರವಗಳೊಂದಿಗೆ, ಪರಸ್ಪರ ಅಂತರವನ್ನು ಕಾಪಾಡಿಕೊಂಡು ಹಾಗೂ ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಅಂತಿಮ ಸಂಸ್ಕಾರ ನೆರವೇರಿಸುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.</p>.<p>ಅವರಿಗೆ ಪತ್ನಿ ಸಿದ್ದಮ್ಮ, ಪುತ್ರರಾದ<br />ಡಾ. ಅರವಿಂದ ಮನಗೂಳಿ, ಅಶೋಕ ಮನಗೂಳಿ, ಡಾ. ಶಾಂತವೀರ ಮನಗೂಳಿ ( ಸಿಂದಗಿ ಪುರಸಭೆ ಅಧ್ಯಕ್ಷ), ಡಾ. ಚನ್ನವೀರ ಮನಗೂಳಿ ಹಾಗೂ ಪುತ್ರಿ ಅನ್ನಪೂರ್ಣ ನಿಡೋಣಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>