<p><strong>ವಿಜಯಪುರ:</strong> ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಸುರಿದ ಮಳೆಯು ಬಿತ್ತನೆಗೆ ಮುಂದಾದ ರೈತರ ಮೊಗದಲ್ಲಿ ಹರ್ಷ ಮೂಡಿಸಿದೆ.</p>.<p>ಬೆಳಿಗ್ಗೆಯಿಂದಲೇ ಸಂಜೆಯವರೆಗೆ ಧಗೆ ಹಾಗೂ ಬಿಸಿಲಿನ ವಾತಾವರಣ ನಿರ್ಮಾಣವಾಗಿತ್ತು, ಸಂಜೆ 4ರ ನಂತರ ದಟ್ಟವಾದ ಮೋಡಗಳು ಆವರಿಸಿದ್ದು, ಸಂಜೆ 6ರ ನಂತರ ನಗರದ ಹಲವು ಭಾಗಗಳಲ್ಲಿ ಪ್ರಾರಂಭವಾದ ಮಳೆ ಸುಮಾರು ಅರ್ಧ ಗಂಟೆ ಕಾಲ ಭರ್ಜರಿಯಾಗಿ ಸುರಿಯಿತು.</p>.<p>ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವಣ ಹಾಗೂ ಬಿಸಿಲಿನ ಧಗೆ ಇತ್ತು. ಭಾನುವಾರ ಸಂಜೆ ಸುರಿದ ಮಳೆ ಜಿಲ್ಲೆ ಜನರಿಗೆ ತಂಪೆರೆದಿದೆ.</p>.<p>ನಗರದಲ್ಲಿ ಸುರಿದ ಮಳೆಗೆ ಪಾದಚಾರಿಗಳು ಹಾಗೂ ಬೈಕ್ ಸವಾರರು ಅಲ್ಲಲ್ಲಿ ಮರದ ಕೆಳಗೆ ನಿಂತು ಮಳೆಯಿಂದ ರಕ್ಷಣೆ ಪಡೆದರೆ, ಕೆಲವರು ಮಳೆಯಲ್ಲಿ ನೆನೆಯುತ್ತ ಬೈಕ್ನಲ್ಲಿ ತೆರಳಿದರು. ಕೆಲವೆಡೆ ವಿದ್ಯುತ್ ಪೂರೈಕೆಯು ತಾತ್ಕಾಲಿಕವಾಗಿ ಸ್ಥಗಿತವಾಯಿತು.</p>.<p>ಜಿಲ್ಲೆಯ ತಿಕೋಟಾ, ಕಲಕೇರಿ, ತಾಂಬಾ, ತಾಳಿಕೋಟೆ, ಸಿಂದಗಿ, ಬಸವನಬಾಗೇವಾಡಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ. ಬಿರುಗಾಳಿಗೆ ಅನೇಕ ಪತ್ರಾಸ್ಗಳು ಹಾರಿವೆ.</p>.<p><strong>ಮಳೆಗೆ ಅವಾಂತರ</strong>: ಭಾರಿ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಜೀರಂಕಲಗಿ ಗ್ರಾಮದ ವಿಠ್ಠಲ ಭೀಮಣ್ಣ ಕನ್ನೂರ ಅವರ ಮೇಲೆ ಪತ್ರಾಸ್ ಶೆಡ್ ಹಾರಿ ಬಿದ್ದು ಗಾಯವಾಗಿದೆ. ಕಲಕೇರಿ ಗ್ರಾಮದಲ್ಲಿ ಮಲ್ಲಪ್ಪ ಅಡಿಯಪ್ಪ ಮದರಿ ಅವರ ಎಮ್ಮೆ ಸಿಡಿಲು ಬಿಡಿದು ಸ್ಥಳದಲ್ಲಿಯೇ ಮೃತಪಟ್ಟಿದೆ.</p>.<p>ಬಿರುಗಾಳಿ ಸಹಿತ ಮಳೆಗೆ ರೂಡಗಿ ಗ್ರಾಮದ ಹಾಗೂ ಸುತ್ತಲಿನ ಪ್ರದೇಶದಲ್ಲಿ ಸೂಮಾರು 50-60 ವಿದ್ಯುತ್ ಕಂಬಗಳು ನೆಲಕಚ್ಚಿವೆ. ರೂಡಗಿ ಹಾಗೂ ಸುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜು ತೊಂದರೆಯಾಗಿದ್ದು, ಆದ್ಯತೆ ಮೇರೆಗೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಸುರಿದ ಮಳೆಯು ಬಿತ್ತನೆಗೆ ಮುಂದಾದ ರೈತರ ಮೊಗದಲ್ಲಿ ಹರ್ಷ ಮೂಡಿಸಿದೆ.</p>.<p>ಬೆಳಿಗ್ಗೆಯಿಂದಲೇ ಸಂಜೆಯವರೆಗೆ ಧಗೆ ಹಾಗೂ ಬಿಸಿಲಿನ ವಾತಾವರಣ ನಿರ್ಮಾಣವಾಗಿತ್ತು, ಸಂಜೆ 4ರ ನಂತರ ದಟ್ಟವಾದ ಮೋಡಗಳು ಆವರಿಸಿದ್ದು, ಸಂಜೆ 6ರ ನಂತರ ನಗರದ ಹಲವು ಭಾಗಗಳಲ್ಲಿ ಪ್ರಾರಂಭವಾದ ಮಳೆ ಸುಮಾರು ಅರ್ಧ ಗಂಟೆ ಕಾಲ ಭರ್ಜರಿಯಾಗಿ ಸುರಿಯಿತು.</p>.<p>ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವಣ ಹಾಗೂ ಬಿಸಿಲಿನ ಧಗೆ ಇತ್ತು. ಭಾನುವಾರ ಸಂಜೆ ಸುರಿದ ಮಳೆ ಜಿಲ್ಲೆ ಜನರಿಗೆ ತಂಪೆರೆದಿದೆ.</p>.<p>ನಗರದಲ್ಲಿ ಸುರಿದ ಮಳೆಗೆ ಪಾದಚಾರಿಗಳು ಹಾಗೂ ಬೈಕ್ ಸವಾರರು ಅಲ್ಲಲ್ಲಿ ಮರದ ಕೆಳಗೆ ನಿಂತು ಮಳೆಯಿಂದ ರಕ್ಷಣೆ ಪಡೆದರೆ, ಕೆಲವರು ಮಳೆಯಲ್ಲಿ ನೆನೆಯುತ್ತ ಬೈಕ್ನಲ್ಲಿ ತೆರಳಿದರು. ಕೆಲವೆಡೆ ವಿದ್ಯುತ್ ಪೂರೈಕೆಯು ತಾತ್ಕಾಲಿಕವಾಗಿ ಸ್ಥಗಿತವಾಯಿತು.</p>.<p>ಜಿಲ್ಲೆಯ ತಿಕೋಟಾ, ಕಲಕೇರಿ, ತಾಂಬಾ, ತಾಳಿಕೋಟೆ, ಸಿಂದಗಿ, ಬಸವನಬಾಗೇವಾಡಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ. ಬಿರುಗಾಳಿಗೆ ಅನೇಕ ಪತ್ರಾಸ್ಗಳು ಹಾರಿವೆ.</p>.<p><strong>ಮಳೆಗೆ ಅವಾಂತರ</strong>: ಭಾರಿ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಜೀರಂಕಲಗಿ ಗ್ರಾಮದ ವಿಠ್ಠಲ ಭೀಮಣ್ಣ ಕನ್ನೂರ ಅವರ ಮೇಲೆ ಪತ್ರಾಸ್ ಶೆಡ್ ಹಾರಿ ಬಿದ್ದು ಗಾಯವಾಗಿದೆ. ಕಲಕೇರಿ ಗ್ರಾಮದಲ್ಲಿ ಮಲ್ಲಪ್ಪ ಅಡಿಯಪ್ಪ ಮದರಿ ಅವರ ಎಮ್ಮೆ ಸಿಡಿಲು ಬಿಡಿದು ಸ್ಥಳದಲ್ಲಿಯೇ ಮೃತಪಟ್ಟಿದೆ.</p>.<p>ಬಿರುಗಾಳಿ ಸಹಿತ ಮಳೆಗೆ ರೂಡಗಿ ಗ್ರಾಮದ ಹಾಗೂ ಸುತ್ತಲಿನ ಪ್ರದೇಶದಲ್ಲಿ ಸೂಮಾರು 50-60 ವಿದ್ಯುತ್ ಕಂಬಗಳು ನೆಲಕಚ್ಚಿವೆ. ರೂಡಗಿ ಹಾಗೂ ಸುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜು ತೊಂದರೆಯಾಗಿದ್ದು, ಆದ್ಯತೆ ಮೇರೆಗೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>