<p><strong>ವಿಜಯಪುರ:</strong> ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ತರಬೇತಿ ನಿರತ ವಿಮಾನವೊಂದು ಪತನವಾಗಿದೆ. ಅದರಲ್ಲಿದ್ದ ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>‘ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ‘ರೆಡ್ ಬರ್ಡ್’ ಏವಿಯೇಷನ್ಗೆ ಸೇರಿದ ಈ ವಿಮಾನವು ಮಂಗಳೂರು ಗ್ರಾಮದ ಹೊಲದಲ್ಲಿ ಪತನವಾಗಿದೆ. ಕ್ಯಾಪ್ಟನ್ ಕುನಾಲ್ ಮಲ್ಹೋತ್ರಾ ಮತ್ತು ತರಬೇತಿ ನಿರತ ಪೈಲಟ್ ಗೌತಮ್ ಶಂಕರ್ ಪಿ.ಆರ್. ವಿಮಾನದಿಂದ ಜಿಗಿದು ಪಾರಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p>.<p>‘ವಿಮಾನವು ತಲೆ ಕೆಳಗಾಗಿ ಮುರಿದು ಬಿದ್ದಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ’ ಎಂದು ನಿಂಬರಗಿ ಹೇಳಿದ್ದಾರೆ.</p>.<p>ವಿಮಾನ ಪತನವಾಗಿರುವ ಸ್ಥಳದಲ್ಲಿ ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ನೋಡಲು ಸೇರಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ತರಬೇತಿ ನಿರತ ವಿಮಾನವೊಂದು ಪತನವಾಗಿದೆ. ಅದರಲ್ಲಿದ್ದ ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>‘ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ‘ರೆಡ್ ಬರ್ಡ್’ ಏವಿಯೇಷನ್ಗೆ ಸೇರಿದ ಈ ವಿಮಾನವು ಮಂಗಳೂರು ಗ್ರಾಮದ ಹೊಲದಲ್ಲಿ ಪತನವಾಗಿದೆ. ಕ್ಯಾಪ್ಟನ್ ಕುನಾಲ್ ಮಲ್ಹೋತ್ರಾ ಮತ್ತು ತರಬೇತಿ ನಿರತ ಪೈಲಟ್ ಗೌತಮ್ ಶಂಕರ್ ಪಿ.ಆರ್. ವಿಮಾನದಿಂದ ಜಿಗಿದು ಪಾರಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p>.<p>‘ವಿಮಾನವು ತಲೆ ಕೆಳಗಾಗಿ ಮುರಿದು ಬಿದ್ದಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ’ ಎಂದು ನಿಂಬರಗಿ ಹೇಳಿದ್ದಾರೆ.</p>.<p>ವಿಮಾನ ಪತನವಾಗಿರುವ ಸ್ಥಳದಲ್ಲಿ ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ನೋಡಲು ಸೇರಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>