<p><strong>ವಿಜಯಪುರ</strong>: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಡೀ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.ಇದನ್ನು ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳರು ಇದ್ದಾರೆ ಎಂಬುದು ಗೊತ್ತಾಗುತ್ತದೆ ಎಂದ ಯತ್ನಾಳ ಹೇಳಿದರು.</p>.<p>ಎಡಿಜಿಪಿ ಒಬ್ಬರನ್ನೇ ಬಂಧಿಸಿ ಎಫ್ಐಆರ್ ಮಾಡಿದ್ದೀರಾ? ಕೇವಲ ಎಡಿಜಿಪಿ ಮಾತ್ರ ಇದರಲ್ಲಿ ಶಾಮೀಲಾಗಿಲ್ಲ,<br />ಇದರ ಹಿಂದೆ ದೊಡ್ಡ ಕಳ್ಳರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>ಪಿಎಸ್ಐಹುದ್ದೆಗಾಗಿ ₹70 ಲಕ್ಷದಿಂದ ₹80 ಲಕ್ಷ ಹಣ ಕೊಟ್ಟಿದ್ದಾರೆ. ಅವರ ಕುಟುಂಬವೇ ಹಾಳಾಗಿ ಹೋಗುತ್ತವೆ. ಹಣವನ್ನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು.</p>.<p>ಇಡೀ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕೊಡಬೇಕು ಎಂದು ಗೃಹ ಸಚಿವರಿಗೆ ಆಗ್ರಹಿಸಿದ ಯತ್ನಾಳ, ಇಂಥ ಘಟನೆಗಳಿಂದಲೇ ಭ್ರಷ್ಟಾಚಾರ ಬೆಳೆದಿದೆ. ಪೊಲೀಸ್ ಆಧಿಕಾರಿಗಳ ವರ್ಗಾವಣೆಗೂ ಹಣ ತಿಂದರೆ ಪ್ರಾಮಾಣಿಕತೆ ಬೆಳೆಸಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ಚಿತ್ರದುರ್ಗದಮುರುಘಾ ಶ್ರೀಗಳ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿ, ಬಂಧನವಾಗಿರುವುದರಿಂದ ಅವರಬದಲಾಗಿ ಬೇರೆ ಸ್ವಾಮೀಜಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸ್ವಾಮೀಜಿಗಳನ್ನು ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು, ತಾತ್ಕಾಲಿಕ ಮೇಲುಸ್ತುವಾರಿ ಸಮಿತಿ ರಚನೆ ಮಾಡಬೇಕು ಎಂದು ಈಗಾಗಲೇಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದೇನೆ ಎಂದರು.</p>.<p>ಘಟನೆಯಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಬಹಳ ಅಪಮಾನವಾಗಿದೆ. ಸ್ವಯಂ ಪ್ರೇರಣೆಯಿಂದ ಪೀಠ ತ್ಯಾಗ ಮಾಡದಿದ್ದರೆ ಭಕ್ತರೇ ಅವರನ್ನು ಉಚ್ಛಾಟನೆ ಮಾಡಬೇಕಾಗುತ್ತದೆ. ಮಠದಲ್ಲಿ ಅವ್ಯವಹಾರವಾಗಿದ್ದು ಅದರ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.</p>.<p>ಸ್ವಾಮೀಜಿ ವಿರುದ್ಧ ಪೋಕ್ರೊ ಕಾಯ್ದೆಯಡಿ ದೂರು ದಾಖಲಾದರೂ ಪೊಲೀಸ್ ಇಲಾಖೆ ಆರು ದಿನ ಕಾಲ ಸ್ವಾಮೀಜಿಯನ್ನು ಯಾಕೆ ಬಂಧಿಸಿಲ್ಲ ಎಂದು ಅವರು ಪ್ರಶ್ನಿಸಿದರು.</p>.<p>****</p>.<p>ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಎರಡು ಬಾರಿ ಕಳೆದುಕೊಳ್ಳಲು ಅವರ ಪುತ್ರ ವಿಜಯೇಂದ್ರ ಮುಖ್ಯಕಾರಣ. ಅಪ್ಪನ ಅಧಿಕಾರವನ್ನು ಮಗ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಪರಿಣಾಮ</p>.<p>–ಬಸನಗೌಡ ಪಾಟೀಲ ಯತ್ನಾಳ, ಶಾಸಕ ವಿಜಯಪುರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಡೀ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.ಇದನ್ನು ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳರು ಇದ್ದಾರೆ ಎಂಬುದು ಗೊತ್ತಾಗುತ್ತದೆ ಎಂದ ಯತ್ನಾಳ ಹೇಳಿದರು.</p>.<p>ಎಡಿಜಿಪಿ ಒಬ್ಬರನ್ನೇ ಬಂಧಿಸಿ ಎಫ್ಐಆರ್ ಮಾಡಿದ್ದೀರಾ? ಕೇವಲ ಎಡಿಜಿಪಿ ಮಾತ್ರ ಇದರಲ್ಲಿ ಶಾಮೀಲಾಗಿಲ್ಲ,<br />ಇದರ ಹಿಂದೆ ದೊಡ್ಡ ಕಳ್ಳರಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>ಪಿಎಸ್ಐಹುದ್ದೆಗಾಗಿ ₹70 ಲಕ್ಷದಿಂದ ₹80 ಲಕ್ಷ ಹಣ ಕೊಟ್ಟಿದ್ದಾರೆ. ಅವರ ಕುಟುಂಬವೇ ಹಾಳಾಗಿ ಹೋಗುತ್ತವೆ. ಹಣವನ್ನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು.</p>.<p>ಇಡೀ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕೊಡಬೇಕು ಎಂದು ಗೃಹ ಸಚಿವರಿಗೆ ಆಗ್ರಹಿಸಿದ ಯತ್ನಾಳ, ಇಂಥ ಘಟನೆಗಳಿಂದಲೇ ಭ್ರಷ್ಟಾಚಾರ ಬೆಳೆದಿದೆ. ಪೊಲೀಸ್ ಆಧಿಕಾರಿಗಳ ವರ್ಗಾವಣೆಗೂ ಹಣ ತಿಂದರೆ ಪ್ರಾಮಾಣಿಕತೆ ಬೆಳೆಸಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ಚಿತ್ರದುರ್ಗದಮುರುಘಾ ಶ್ರೀಗಳ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿ, ಬಂಧನವಾಗಿರುವುದರಿಂದ ಅವರಬದಲಾಗಿ ಬೇರೆ ಸ್ವಾಮೀಜಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಸ್ವಾಮೀಜಿಗಳನ್ನು ಪೀಠತ್ಯಾಗ ಮಾಡಲು ನಿರ್ದೇಶಿಸಬೇಕು, ತಾತ್ಕಾಲಿಕ ಮೇಲುಸ್ತುವಾರಿ ಸಮಿತಿ ರಚನೆ ಮಾಡಬೇಕು ಎಂದು ಈಗಾಗಲೇಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಹಾಗೂ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದೇನೆ ಎಂದರು.</p>.<p>ಘಟನೆಯಿಂದ ವೀರಶೈವ ಲಿಂಗಾಯತ ಸಮುದಾಯಕ್ಕೆ ಬಹಳ ಅಪಮಾನವಾಗಿದೆ. ಸ್ವಯಂ ಪ್ರೇರಣೆಯಿಂದ ಪೀಠ ತ್ಯಾಗ ಮಾಡದಿದ್ದರೆ ಭಕ್ತರೇ ಅವರನ್ನು ಉಚ್ಛಾಟನೆ ಮಾಡಬೇಕಾಗುತ್ತದೆ. ಮಠದಲ್ಲಿ ಅವ್ಯವಹಾರವಾಗಿದ್ದು ಅದರ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.</p>.<p>ಸ್ವಾಮೀಜಿ ವಿರುದ್ಧ ಪೋಕ್ರೊ ಕಾಯ್ದೆಯಡಿ ದೂರು ದಾಖಲಾದರೂ ಪೊಲೀಸ್ ಇಲಾಖೆ ಆರು ದಿನ ಕಾಲ ಸ್ವಾಮೀಜಿಯನ್ನು ಯಾಕೆ ಬಂಧಿಸಿಲ್ಲ ಎಂದು ಅವರು ಪ್ರಶ್ನಿಸಿದರು.</p>.<p>****</p>.<p>ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಎರಡು ಬಾರಿ ಕಳೆದುಕೊಳ್ಳಲು ಅವರ ಪುತ್ರ ವಿಜಯೇಂದ್ರ ಮುಖ್ಯಕಾರಣ. ಅಪ್ಪನ ಅಧಿಕಾರವನ್ನು ಮಗ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಪರಿಣಾಮ</p>.<p>–ಬಸನಗೌಡ ಪಾಟೀಲ ಯತ್ನಾಳ, ಶಾಸಕ ವಿಜಯಪುರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>